ನಿಗಮಬೋಧ್ ಘಾಟ್‌ನಲ್ಲಿ ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್​ ಅಂತ್ಯಕ್ರಿಯೆ.

ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್​ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್​ ಓಂ ಬಿರ್ಲಾ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​​ರಿಂದ ಹಿಡಿದು ಪ್ರಮುಖ ಗಣ್ಯರು, ಕೈ ನಾಯಕರು, ವಿದೇಶಿ ರಾಜತಾಂತ್ರಿಕರು ಪಾಲ್ಗೊಂಡರು. ಮೂರು ಸೇನಾಪಡೆಯಿಂದ ಗೌರವ ಸಮರ್ಪಣೆ ಮಾಡಲಾಯಿತು.
ಡಾ. ಮನಮೋಹನ್ ಸಿಂಗ್​ ಅಂತಿಮ ನಮನದಲ್ಲಿ ಗಣ್ಯರು ಭಾಗಿ
ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅವರ ನಿಧನದ ಕುರಿತು ಅಧ್ಯಕ್ಷ ಜೋ ಬೈಡನ್ ಸಂತಾಪ ಸೂಚಿಸಿದ್ದು ಅವರ ಹೇಳಿಕೆಯನ್ನು ಶ್ವೇತಭವನ ಬಿಡುಗಡೆ ಮಾಡಿದೆ. “ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡ ದುಃಖದಲ್ಲಿ ಜಿಲ್(ಬೈಡನ್​ ಪತ್ನಿ) ಮತ್ತು ನಾನು ಭಾರತದ ಜನರೊಂದಿಗೆ ನಾವು ಸೇರಿದ್ದೇವೆ. ಜಿಲ್ ಮತ್ತು ನಾನು ಮಾಜಿ ಪ್ರಥಮ ಮಹಿಳೆ ಗುರುಶರಣ್ ಕೌರ್, ಅವರ ಮೂವರು ಮಕ್ಕಳು ಮತ್ತು ಭಾರತದ ಎಲ್ಲಾ ಜನರಿಗೆ ನಮ್ಮ ಆಳವಾದ ಸಂತಾಪವನ್ನು ಸೂಚಿಸುತ್ತೇವೆ” ಎಂದಿದ್ದಾರೆ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಅಲ್ಲಿಂದ ಎಐಸಿಸಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಬೆಳಗ್ಗೆ 9.30ರವರೆಗೆ ಅಲ್ಲಿಯೇ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ತದನಂತರ ಅಲ್ಲಿಂದ ಮಾಜಿ ಪ್ರಧಾನಿಯ ಅಂತಿಮ ಯಾತ್ರೆ ಆರಂಭವಾಯಿತು. ಯಾತ್ರೆಯಲ್ಲಿ ರಸ್ತೆಯುದ್ದಕ್ಕೂ ಅಭಿಮಾನಿಗಳು ಪಾಲ್ಗೊಂಡಿದ್ದು, ಲಕ್ಷಾಂತರ ಜನರು ಭಾಗಿಯಾದರು.

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!