ನಿಗಮಬೋಧ್ ಘಾಟ್‌ನಲ್ಲಿ ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್​ ಅಂತ್ಯಕ್ರಿಯೆ.

ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್​ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್​ ಓಂ ಬಿರ್ಲಾ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​​ರಿಂದ ಹಿಡಿದು ಪ್ರಮುಖ ಗಣ್ಯರು, ಕೈ ನಾಯಕರು, ವಿದೇಶಿ ರಾಜತಾಂತ್ರಿಕರು ಪಾಲ್ಗೊಂಡರು. ಮೂರು ಸೇನಾಪಡೆಯಿಂದ ಗೌರವ ಸಮರ್ಪಣೆ ಮಾಡಲಾಯಿತು.
ಡಾ. ಮನಮೋಹನ್ ಸಿಂಗ್​ ಅಂತಿಮ ನಮನದಲ್ಲಿ ಗಣ್ಯರು ಭಾಗಿ
ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅವರ ನಿಧನದ ಕುರಿತು ಅಧ್ಯಕ್ಷ ಜೋ ಬೈಡನ್ ಸಂತಾಪ ಸೂಚಿಸಿದ್ದು ಅವರ ಹೇಳಿಕೆಯನ್ನು ಶ್ವೇತಭವನ ಬಿಡುಗಡೆ ಮಾಡಿದೆ. “ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡ ದುಃಖದಲ್ಲಿ ಜಿಲ್(ಬೈಡನ್​ ಪತ್ನಿ) ಮತ್ತು ನಾನು ಭಾರತದ ಜನರೊಂದಿಗೆ ನಾವು ಸೇರಿದ್ದೇವೆ. ಜಿಲ್ ಮತ್ತು ನಾನು ಮಾಜಿ ಪ್ರಥಮ ಮಹಿಳೆ ಗುರುಶರಣ್ ಕೌರ್, ಅವರ ಮೂವರು ಮಕ್ಕಳು ಮತ್ತು ಭಾರತದ ಎಲ್ಲಾ ಜನರಿಗೆ ನಮ್ಮ ಆಳವಾದ ಸಂತಾಪವನ್ನು ಸೂಚಿಸುತ್ತೇವೆ” ಎಂದಿದ್ದಾರೆ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಅಲ್ಲಿಂದ ಎಐಸಿಸಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಬೆಳಗ್ಗೆ 9.30ರವರೆಗೆ ಅಲ್ಲಿಯೇ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ತದನಂತರ ಅಲ್ಲಿಂದ ಮಾಜಿ ಪ್ರಧಾನಿಯ ಅಂತಿಮ ಯಾತ್ರೆ ಆರಂಭವಾಯಿತು. ಯಾತ್ರೆಯಲ್ಲಿ ರಸ್ತೆಯುದ್ದಕ್ಕೂ ಅಭಿಮಾನಿಗಳು ಪಾಲ್ಗೊಂಡಿದ್ದು, ಲಕ್ಷಾಂತರ ಜನರು ಭಾಗಿಯಾದರು.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!