ನಿಮಗೆ ಗೊತ್ತೇ? ಕರ್ನಲ್ ಸೋಫಿಯಾ ಖುರೇಷಿಯವರ ಮುತ್ತಜ್ಜಿ ರಾಣಿ ಲಕ್ಷ್ಮಿ ಬಾಯಿ ಜೊತೆ ಕೆಲಸ ಮಾಡಿದ್ದಾರಂತೆ….!?

ಕರ್ನಲ್ ಸೋಫಿಯಾ ಖುರೇಷಿ ಅವರ ಮುತ್ತಜ್ಜಿ ರಾಣಿ ಲಕ್ಷ್ಮಿ ಬಾಯಿ ಅವರೊಂದಿಗೆ ಕೆಲಸ ಮಾಡಿದ ಯೋಧರಾಗಿದ್ದರು ಎಂದು ಸ್ವತಹ ಕರ್ನಲ್ ಸೋಫಿಯಾ ಖುರೇಶಿ ಅವರೇ ಬಹಿರಂಗಪಡಿಸಿದ್ದಾರೆ.ಸೋಫಿಯಾ ಖುರೇಷಿಗೂ ಒಬ್ಬ ಸಹೋದರಿ ಇದ್ದಾರೆ , ಮತ್ತು ಆಕೆಯ ತಾಯಿ ಇಬ್ಬರು ಸಹೋದರಿಯರಲ್ಲಿ ಯಾರಾದರೂ ಒಬ್ಬರು ಸೈನ್ಯಕ್ಕೆ ಸೇರಬೇಕೆಂದು ಬಯಸಿದ್ದರು ಎಂದು ಹೇಳಿದ್ದಾರೆ. ಹಾಗೂ ಸೈನ್ಯದಲ್ಲಿ ಅವರ ಮನೆತನದವರ ಇತಿಹಾಸವನ್ನು ಸಹ ಹಂಚಿಕೊಂಡಿದ್ದಾರೆ.

ಸೋಫಿಯಾ ಅವರ ಅಜ್ಜ ಕೂಡ ಸೈನ್ಯದಲ್ಲಿದ್ದರು, ಆದ್ದರಿಂದ ಅವರು ಮೂಲತಃ ಫೌಜಿ ಮಗುವಾಗಿದ್ದರು …ಹಾಗಿದ್ರೆ ಫೌಜಿ ಮಗು ,ಇದರ ಅರ್ಥ ಏನು ಗೊತ್ತಾ? “ಸೈನ್ಯದ ಮಗು” ಎಂದು ಹೇಳಲಾಗುತ್ತದೆ, ಇದು ಸಾಮಾನ್ಯವಾಗಿ ಭಾರತೀಯ ಸೇನೆಯಲ್ಲಿರುವ ಮಿಲಿಟರಿ ಸಿಬ್ಬಂದಿಯ ಮಕ್ಕಳನ್ನು ಉಲ್ಲೇಖಿಸುತ್ತದೆ. ಈ ಪದವು ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೋಷಕರೊಂದಿಗೆ ಬೆಳೆದ ವ್ಯಕ್ತಿಗಳನ್ನು ವಿವರಿಸುತ್ತದೆ, ಇಂತಹ ಶಕ್ತಿಶಾಲಿ, ಸೈನ್ಯದ ಕುಟುಂಬದೊಂದಿಗೆ ಬೆಳೆದು ಬಂದ ಪ್ರೌಢಿಮೆ ಸೋಫಿಯಾ ಅವರಿಗೆ ಸಲ್ಲುತ್ತದೆ. ಅಲ್ಲದೆ ಆಪರೇಷನ್ ಸಿಂಧೂರ ದಲ್ಲಿ ತೆಗೆದುಕೊಂಡಿರುವ ನಿರ್ಧಾರ ಹಾಗೂ ಆದೇಶಗಳನ್ನು ಹೊರಡಿಸಿದ ವೈಖರಿ ಎಲ್ಲವನ್ನು ಗಮನಿಸಿದ ಪ್ರತಿಯೊಬ್ಬ ಭಾರತೀಯರು ಇವರನ್ನು ಆದರ್ಶವಾಗಿ ತೆಗೆದುಕೊಳ್ಳಲು ಯಾವುದೇ ಅನುಮಾನವಿಲ್ಲ.

“ವಯಂ ರಾಷ್ಟ್ರೇ ಜಾಗ್ರಯಂ” ಎಂದು ಅವರ ಅಜ್ಜ ಹೇಳುತ್ತಿದ್ದರಂತೆ. ಇದರ ಅರ್ಥ: ಪ್ರತಿಯೊಬ್ಬ ನಾಗರಿಕನು ಜಾಗರೂಕರಾಗಿರಬೇಕು ಮತ್ತು ತನ್ನ ದೇಶಕ್ಕಾಗಿ ನಿಲ್ಲಬೇಕು ಮತ್ತು ರಾಷ್ಟ್ರವನ್ನು ರಕ್ಷಿಸಬೇಕು ಎಂಬುವುದಾಗಿತ್ತು.

ಕರ್ನಲ್ ಸೋಫಿಯಾ ಖುರೇಶಿ ಅವರ ಈ ಮಾತುಗಳನ್ನು ಕೇಳಿಸಿಕೊಂಡ ಪ್ರತಿಯೊಬ್ಬರೂ ಇವರ ಯಶಸ್ಸು ಹಾಗೂ ದೇಶಭಕ್ತಿ ಅವರ ರಕ್ತ ಸಂಬಂಧದಲ್ಲೇ ಹರಿಯುತ್ತಿದೆ ಎಂದು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!