ನಿರ್ದೇಶಕ ಸಿಂಪಲ್ ಸುನಿ ಜೊತೆ ಸಿನಿಮಾ ಘೋಷಿಸಿದ ; ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್.

ಬಿಗ್ ಬಾಸ್ ಕನ್ನಡ ವಿನ್ನರ್ ಕಾರ್ತಿಕ್ ಮಹೇಶ್ ಅವರು ಸಿಂಪಲ್ ಸುನಿ ನಿರ್ದೇಶನದ ಹೊಸ ಚಿತ್ರ ‘ರಿಚಿ ರಿಚ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸುನಿ ಅವರೇ ಕಥೆ ಬರೆದಿರುವ ಈ ಚಿತ್ರದಲ್ಲಿ ಕಾರ್ತಿಕ್ ಶ್ರೀಮಂತನಾಗುವ ಕನಸು ಕಾಣುವ ರಿದ್ದೇಶ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ಒಂದಾದ ಬಳಿಕ ಒಂದರಂತೆ ಸಿನಿಮಾ ಘೋಷಿಸುತ್ತಿದ್ದಾರೆ. ಈ ಮೊದಲು ಅವರು ‘ರಾಮರಸ’ ಹೆಸರಿನ ಚಿತ್ರ ಘೋಷಿಸಿದ್ದರು. ಈಗ ಕನ್ನಡದ ಖ್ಯಾತ ನಿರ್ದೇಶಕನ ಜೊತೆ ಕಾರ್ತಿಕ್ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಚಿತ್ರಕ್ಕೆ ‘ರಿಚಿ ರಿಚ್’ ಎನ್ನುವ ಟೈಟಲ್ ಇಡಲಾಗಿದೆ. ಈ ವಿಚಾರ ಫ್ಯಾನ್ಸ್ಗೆ ಖುಷಿ ನೀಡಿದೆ.
ಕನ್ನಡದಲ್ಲಿ ಹಲವು ಸದಭಿರುಚಿ ಸಿನಿಮಾಗಳನ್ನು ನೀಡಿದವರು ಸಿಂಪಲ್ ಸುನಿ. ಅವರ ನಿರ್ದೇಶನದ ಹಲವು ಚಿತ್ರಗಳು ಹಿಟ್ ಆಗಿವೆ. ಇಡೀ ಕುಟುಂಬ ಕುಳಿತು ನೋಡುವ ಚಿತ್ರಗಳನ್ನು ನಿರ್ದೇಶನ ಮಾಡುವುದರಲ್ಲಿ ಅವರು ಎತ್ತಿದ ಕೈ. ಅವರ ಜೊತೆ ಕಾರ್ತಿಕ್ ಮಹೇಶ್ ಕೈ ಜೋಡಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ‘ರಿಚಿ ರಿಚ್’ ಚಿತ್ರಕ್ಕೆ ಸುನಿ ಅವರೇ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಅರವಿಂದ್ ವೆಂಕಟ್ ರೆಡ್ಡಿ ಬಂಡವಾಳ ಹೂಡುತ್ತಿದ್ದಾರೆ. ‘ಎವಿಆರ್ ಎಂಟರ್ಟೇನ್ಮೆಂಟ್’ ನಿರ್ಮಾಣ ಸಂಸ್ಥೆ ಆರಂಭಿಸಿರೋ ಅವರಿಗೆ ಇದು ನಿರ್ಮಾಣದಲ್ಲಿ ಮೊದಲ ಅನುಭವ.

‘ರಿಚಿ ರಿಚ್’ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ. ಟೈಟಲ್ ಜೊತೆ ಕಾರ್ತಿಕ್ ಲುಕ್ ಕೂಡ ರಿವೀಲ್ ಆಗಿದೆ. ಅವರು ಚೆಸ್ ಆಡುತ್ತಿರುವ ರೀತಿಯಲ್ಲಿ ಪೋಸ್ಟರ್ ಇದೆ. ಸುನಿ ನಿರ್ಮಾಣದ ‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ‘ರಿಚಿ’ ಹೆಸರಿನ ಪಾತ್ರ ಇತ್ತು. ಈ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಈಗ ಅದೇ ಹೆಸರಿನಲ್ಲಿ ಸಿನಿಮಾದ ಟೈಟಲ್ ಆರಂಭ ಆಗಿದೆ.
ನವೆಂಬರ್​​ನಲ್ಲಿ ಸಿಎಂ ಬದಲಾವಣೆ ಆಗೋದು ಪಕ್ಕಾ?
ರಿದ್ದೇಶ್ ಚಿನ್ನಯ್ಯ ಅನ್ನೋದು ಕಥಾ ನಾಯಕನ ಹೆಸರು. ಇದನ್ನು ಶಾರ್ಟ್ ಆಗಿ ಆತ ರಿಚಿ ಎಂದು ಮಾಡಿಕೊಂಡಿದ್ದಾನೆ. ಇವನು ಶ್ರೀಮಂತ ಆಗುವುದು ಹೇಗೆಂದು ಕನಸು ಕಾಣುತ್ತಿದ್ದಾನೆ. ಆ ರೀತಿಯಲ್ಲಿ ಸಿನಿಮಾದ
ಈ ಚಿತ್ರದ ಬಗ್ಗೆ ಸದ್ಯಕ್ಕೆ ಇರೋ ಮಾಹಿತಿ ಇಷ್ಟೇ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಚಾರಗಳನ್ನು ತಂಡ ತೆರೆದಿಡಲಿದೆ. ಕಾರ್ತಿಕ್ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!