ನಿರ್ಮಿತಿ ಕೇಂದ್ರದ ಇಂಜಿನಿಯರ್ ಲಾಡ್ಜ್ನಲ್ಲಿ ಆ*ಹತ್ಯೆ, ಸಾ*ನ ಬಗ್ಗೆ ಸಾಕಷ್ಟು ಅನುಮಾನ.

ಗದಗ : ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ಪಲ್ಲವಿ ಲಾಡ್ಜ್ನಲ್ಲಿ ನಡೆದಿದೆ. ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್. ಇಂದು (ಡಿಸೆಂ 03) ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದ ಶಂಕರಗೌಡ ಪಾಟೀಲ್ ನಗರದ ಪಲ್ಲವಿ ಲಾಡ್ಜ್ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ದಿನೇ ದಿನೇ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದರಲ್ಲೂ ಸರ್ಕಾರಿ ಅಧಿಕಾರಿಗಳು ಒಳಗೊಂಡಿದ್ದಾರೆ. ಅದರಂತೆ ಗದಗನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಡ್ಜ್ನಲ್ಲೇ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದು, ಇದೊಂದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಇನ್ನು ಈ ಸಂಬಂಧ ಮೃತ ಸಹೋದರ ಕೃಷ್ಣಗೌಡ ಪ್ರತಿಕ್ರಿಯಿಸಿದ್ದು, ನೇಣು ಹಾಕಿ ಕೊಲೆ ಮಾಡಿದ್ದಾರೆ. ಸಾಲ ಇಲ್ಲ. ಸಾಕಷ್ಟು ಆಸ್ತಿ ಇದೆ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ. ಸಾಲಕ್ಕೆ ಜಾಮೀನು ಆಗಿದ್ದ ಆ ವಿಷಯಕ್ಕಾದ್ರೂ ಆಗಿರಬಹುದು. ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಪ್ರಮೋಶನಕ್ಕೆನಾದ್ರೂ ವ್ಯತ್ಯಾಸ ಆಗಿದೆಯೋ ಗೊತ್ತಿಲ್ಲ. ಈ ಮೂರು ವಿಷಯಕ್ಕೆ ಸಾವು ಅಂತ ಅನುಮಾನ ಇದೆ ಎಂದಿದ್ದಾರೆ.
ಸಾಲಕ್ಕೆ ಹೆದರುವ ಮನುಷ್ಯ ಅವನಲ್ಲ. ನೇಣು ಹಾಕಿಕೊಂಡ ಹಗ್ಗ ಹೊಸದು ಇದೆ. ಹೀಗಾಗಿ ಯಾರಾದರೈ ಊರಲು ಹಾಕಿದ್ದಾರೆ ಎಂದು ಆರೋಪಿಸಿರುವ ಕೃಷ್ಣಗೌಡ, ನಿರ್ಮಿತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ. ನನಗೆ ಆತ್ಮಹತ್ಯೆ ಮಾಡಿಕೊಂಡ ರೂಂಗೆ ಪೊಲೀಸರು ಬಿಡಲಿಲ್ಲ. ಹೀಗಾಗಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಇದೆ ಎಂದು ತಿಳಿಸಿದ್ದಾರೆ.
ಬೀದರ್ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಬರೆದಿಟ್ಟು ಗುತ್ತಿಗೆದಾರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ವಿರೋಧ ಪಕ್ಷಗಳು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿವೆ. ಈ ಬಗ್ಗೆ ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.
ಇದೆಲ್ಲದರ ಮಧ್ಯ ಇದೀಗ ನಿರ್ಮಿತಿ ಕೇಂದ್ರದ ಇಂಜಿಯನರ್ ಆತ್ಮಹತ್ಯೆ ಪ್ರಕರಣ ಬೆಳಗೆ ಬಂದಿದ್ದು, ಈ ಪ್ರಕರಣ ಮುಂದೆ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!