ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಗೆ ತತ್ತರಿಸಿದ ಕೆ.ಕೆ.ಆರ್ ….

ಲೋಯೆಸ್ಟ್ ಸ್ಕೋರ್ ಅನ್ನು ಡಿಪೆಂಡ್ ಮಾಡುವ ಮುಖಾಂತರ ಐಪಿಎಲ್ ನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಣರೋಚಕ ಪಂದ್ಯ ಒಂದಕ್ಕೆ ಸಾಕ್ಷಿಯಾಗಿದೆ. ಇಂತಹದೊಂದು ಮ್ಯಾಚ್ ನಡೆದಿರುವುದು ಕ್ರೀಡಾಭಿಮಾನಿಗಳಿಗೆ ಆಶ್ಚರ್ಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ನ 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಪ್ರಾರಂಭದಲ್ಲಿ ಉತ್ತಮ ಪ್ರದರ್ಶನ ಕಂಡರಾದರು ಕೆಕೆಆರ್ ನ ಬೌಲಿಂಗ್ ಡಿಪಾರ್ಟ್ಮೆಂಟ್ ವಿಕೆಟ್ ಪಾತನಗೊಳಿಸುವಲ್ಲಿ ಯಶಸ್ವಿಯಾಯಿತು. ಪಂಜಾಬ್ ಕಿಂಗ್ಸ್ ನ ನಾಯಕ ಶ್ರೇಯಸ್ ಅಯ್ಯರ್ ಕೂಡ ಸೊನ್ನೆಗೆ ಹೌಟ್ ಆಗಿ ಹೋದರು. ನಂತರ ಬಂದ ಬ್ಯಾಟ್ಸ್ಮನ್ ಗಳಿಂದಲೂ ಏನು ಮಾಡಲು ಸಾಧ್ಯವಾಗಲಿಲ್ಲ. ಇನ್ನು ಕ್ರಿಕೆಟ್ ಇತಿಹಾಸದಲ್ಲಿ ಬಿಗ್ ಶೋ ಎಂದು ಹೆಸರು ಪಡೆದಿರುವ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಕೂಡ ಅಧಿಕ ರನ್ ಗಳಿಸಲು ಸಾಧ್ಯವಾಗಲಿಲ್ಲ.

ಒಟ್ಟಾರೆಯಾಗಿ ತಂಡವು 15.3 ಓವರ್ ಗಳಲ್ಲಿ ಕೇವಲ 111 ರನ್ ಗಳಿಸಿ ಆಲ್ ಔಟ್ ಆದರು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ವೇಗವಾಗಿ ಪಂದ್ಯವನ್ನ ಮುಗಿಸಿ ರನ್ ರೇಟ್ ಉತ್ತಮಗೊಳಿಸುವಲ್ಲಿ ಮುಂದಾಗಲು ಯತ್ನಿಸಿದರು. ಡಿಪೆಂಡಿಂಗ್ ಚಾಂಪಿಯನ್ಸ್ ಗೆ ಇದು ಸುಲಭದ ತುತ್ತು ಎನಿಸಿತ್ತಾರಾದರೂ, ಕ್ರೀಡಾಂಗಣದಲ್ಲಿ ನಡೆದ ಇತಿಹಾಸವೇ ಬೇರೆಯಾಗಿತ್ತು.

ಪ್ರಾರಂಭದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಅನ್ನು ಮಾರ್ಕೊ ಜಾನ್ಸಸ್ ಉರುಳಿಸಿ ಒಂದೇ ಒಂದು ಜೀವಂತವಾಗಿರಿಸಿಕೊಂಡಿದ್ದರು. ನಂತರದಲ್ಲಿ ಬಂದ ಕೆಕೆಆರ್ ತಂಡದ ನಾಯಕ ಅಜೀಂಕೆ ರಹಾನೆ ಹಾಗೂ ರಘುವಂಶಿ 50 ರನ್ ಗಳ ಪಾರ್ಟ್ನರ್ಶಿಪ್ ಕಲೆ ಹಾಕಿದರಾದರು. ನಂತರದಲ್ಲಿ ಬೌಲಿಂಗ್ ಗೆ ಬಂದಂತಹ ಸ್ಪಿನ್ನರ್ ಯುಜುವೇಂದ್ರ ಚಹಲ್ ಆಟದ ದಿಕ್ಕನ್ನೇ ಬದಲಿಸಿದರು ಅದು ಸಹ ನಾಲ್ಕು ವಿಕೆಟ್ಗಳನ್ನು ಪಡೆಯುವುದರ ಮುಖಾಂತರ ಎಂಬುದ ವಿಶೇಷವಾಗಿದೆ.

ಇದರೊಂದಿಗೆ ರಣ ಉತ್ಸಾಹಕ್ಕೆ ಮಾರ್ಪಟ್ಟ ಪಂಜಾಬ್ ಕಿಂಗ್ಸ್ ಆಟಗಾರರು ಕೆಕೆಆರ್ ಬ್ಯಾಟರ್ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಅದ್ಭುತ ಫೀಲ್ಡಿಂಗ್ ಸೆಟ್ ಮಾಡುವ ಮೂಲಕ ಸತತ ವಿಕೆಟ್ ಪಡೆದರು. ಪರಿಣಾಮ 15.1ಓವರ್ ಗಳಲ್ಲಿ ಕೆಕೆಆರ್ ತಂಡವು 95 ರನ್ ಗಳಿಸಲಷ್ಟೇ ಶಕ್ತರಾದರು.

ಈ ಮುಖಾಂತರ ಕೆಕೆಆರ್ ತಂಡವನ್ನು ಆಲ್ ಔಟ್ ಮಾಡಿ ಪಂದ್ಯವನ್ನು ತನ್ನದಾಗಿಸಿಕೊಂಡಿತು ಪಂಜಾಬ್ ಕಿಂಗ್ಸ್ ಪಡೆ. ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತಿ ಕಡಿಮೆ ಸ್ಕೋರ್ ಗಳಿಸಿ ಜಯ ಸಾಧಿಸಿದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!