ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಶತಕ ಗಳಿಸಿದ ಅಭಿಷೇಕ್ ಶರ್ಮ….

ಪಂಜಾಬ್ ಹುಡುಗ ಪಂಜಾಬಿನ ವಿರುದ್ಧವೇ ಶತಕ 14 ಬೌಂಡರಿ, 10 ಸಿಕ್ಸರ್, ಒಟ್ಟು 141 ರನ್. ಐಪಿಎಲ್ 2025 ರ 27ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ನ ಅಭಿಷೇಕ್ ಶರ್ಮಾ ಕೇವಲ 4೦ ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇದು ಐಪಿಎಲ್ ನಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಗಳಿಸಿದ ಮೂರನೇ ಅತಿ ವೇಗದ ಶತಕವಾಗಿದೆ. ಅಭಿಷೇಕ್ ಮತ್ತು ಟ್ರಾವಿಸ್ ಹೆಡ್ ಅವರ 171 ರನ್‌ಗಳ ಜೊತೆಯಾಟವು ಈ ಸೀಸನ್‌ನ ಅತಿ ದೊಡ್ಡ ಜೊತೆಯಾಟವಾಗಿದೆ. ಅಲ್ಲದೆ ಜೊತೆ ಸೇರಿ ಕಲೆ ಹಾಕಿದ ಮೊತ್ತದಿಂದ 20045 ರನ್ಸ್ಗಳನ್ನ ಚೇಸ್ ಮಾಡಲು ದಾರಿ ಮಾಡಿ ಕೊಟ್ಟಿತು. ಶತಕ ಸಿಡಿಸಿದ ನಂತರ ಆ ಶತಕವನ್ನು ಆರೆಂಜ್ ಆರ್ಮಿಗೆ ಡೆಡಿಕೇಟ್ ಮಾಡಿದ್ದಾರೆ ಅಭಿಷೇಕ್ ಶರ್ಮ.

ಐಪಿಎಲ್ 2025 ರ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗಿವೆ. ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ಗಳಲ್ಲಿ ಬರೋಬ್ಬರಿ 245 ರನ್ ಕಲೆಹಾಕಿತು. ಪಂಜಾಬ್ ನೀಡಿರುವ 246 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಹೈದರಾಬಾದ್ ತಂಡದ ಪರ ಯುವ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೇವಲ 40 ಎಸೆತಗಳಲ್ಲಿ ಶತಕ ಗಳಿಸಿ ಮೈದಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಆರಂಭದಿಂದಲೂ ಪಂಜಾಬ್ ಬೌಲರ್ಗಳ ಹೆಡೆಮುರಿ ಕಟ್ಟಿದ ಅಭಿಷೇಕ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 40 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದ ಅಭಿಷೇಕ್ ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರು. 250ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ಅಬ್ಬರದ ಮುಂದೆ ಪಂಜಾಬ್ ಬೌಲರ್‌ಗಳಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಇದು ಐಪಿಎಲ್‌ನಲ್ಲಿ ಭಾರತೀಯ ಬ್ಯಾಟರ್ ಒಬ್ಬ ದಾಖಲಿಸಿದ ಅತಿ ವೇಗದ ಮೂರನೇ ಶತಕ ಎಂಬ ದಾಖಲೆಯನ್ನು ಸೃಷ್ಟಿಸಿತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!