ಪಾಕ್ ಸೂಪರ್ ಲೀಗ್ ತೊರೆದಿದ್ದ ಆಟಗಾರ ಐಪಿಎಲ್ ನಲ್ಲಿ ಶೂನ್ಯಕ್ಕೆ ಔಟ್..!

ಪಂಜಾಬ್ ಕಿಂಗ್ಸ್ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಮಿಚೆಲ್ ಓವನ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿತು. ಹೀಗೆ ಪಾಕಿಸ್ತಾನ ಸೂಪರ್ ಲೀಗ್ ನಿಂದ ಐಪಿಎಲ್ ಗೆ ಬಂದ ಮಿಚೆಲ್ ಓವನ್ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಎಸೆತಗಳಲ್ಲಿ ಖಾತೆ ತೆರೆಯದೆ ಔಟ್ ಆದರು. ಬಿಗ್ ಬ್ಯಾಷ್ ಲೀಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಓವನ್ ಐಪಿಎಲ್ ನಲ್ಲಿ ನಿರಾಶೆ ಉಂಟುಮಾಡಿದರು.

ಐಪಿಎಲ್ 2025 ರ 59 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯದ ಗೆಲುವು ಪಂಜಾಬ್ಗೆ ಬಹಳ ಮುಖ್ಯವಾಗಿದೆ. ಹೀಗಾಗಿ ಪಂಜಾಬ್ ತನ್ನ ತಂಡದಲ್ಲಿ ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿತ್ತು. ಅದರಂತೆ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಆಡುತ್ತಿದ್ದ ವಿದೇಶಿ ಆಟಗಾರನನ್ನು ದ್ವಿತೀಯಾರ್ಧದ ಐಪಿಎಲ್ ಆರಂಭಕ್ಕೂ ಮುನ್ನ ತನ್ನ ತಂಡಕ್ಕೆ ಸೇರಿಸಿಕೊಂಡಿತು. ವಾಸ್ತವವಾಗಿ ಪಂಜಾಬ್ ಕಿಂಗ್ಸ್ನ ಡ್ಯಾಶಿಂಗ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದಾಗಿ ಐಪಿಎಲ್ 2025 ರಿಂದ ಹೊರಗುಳಿದಿದ್ದರು. ಹೀಗಾಗಿ ಪಿಎಸ್ಎಲ್ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಯುವ ಆಲ್‌ರೌಂಡರ್ ಮಿಚೆಲ್ ಓವನ್ ಅವರನ್ನು ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ ಮಿಚೆಲ್ ಓವನ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಕೇವಲ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು.

ಅದರಂತೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಅವಕಾಶ ಪಡೆದ ಮಿಚೆಲ್ ಓವನ್ ಕೇವಲ 2 ಎಸೆತಗಳನ್ನು ಎದುರಿಸಿ ತಮ್ಮ ವಿಕೆಟ್ ಕಳೆದುಕೊಂಡರು. ಮಿಚೆಲ್ ಓವನ್ಗೆ ಖಾತೆ ತೆರೆಯಲು ಆಗಲಿಲ್ಲ. ಪಂಜಾಬ್ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದ್ದ ಮಿಚೆಲ್, ಕ್ವೆನಾ ಎಂಫಕಾ ಅವರ ಅದ್ಭುತ ಎಸೆತದಲ್ಲಿ ಸಂಜು ಸ್ಯಾಮ್ಸನ್‌ಗೆ ಕ್ಯಾಚ್ ನೀಡಿದರು. ಮಿಚೆಲ್ ಓವನ್ ಪಾಕಿಸ್ತಾನ ಸೂಪರ್ ಲೀಗ್ 2025 ರಲ್ಲಿ ಪೇಶಾವರ್ ಝಲ್ಮಿ ಪರ ಒಟ್ಟು 8 ಪಂದ್ಯಗಳನ್ನು ಆಡಿದ್ದು, ಕೇವಲ 102 ರನ್‌ಗಳನ್ನು ಮಾತ್ರ ಕಲೆಹಾಕಿದ್ದರು.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!