ಪುರುಷರೇ, ನೀವು ಸುಂದರವಾಗಿ ಕಾಣಿಸಬೇಕೆಂದರೆ ಇಲ್ಲಿದೆ ಸಿಂಪಲ್ ಟಿಪ್ಸ್.

ಸೌಂದರ್ಯ ಎಂದಾಗ ಮೊದಲು ನೆನಪಾಗುವುದೇ ಈ ಮಹಿಳೆಯರು. ಪುರುಷರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಕಡಿಮೆ. ತ್ವಚೆಯ ಆರೈಕೆಗೆ ಸಮಯ ಕೊಡುವುದಿಲ್ಲ ಎಂದು ಹೇಳುವುದನ್ನು ಕೇಳಿರಬಹುದು. ಮಹಿಳೆಯರಿಗೆ ಹೋಲಿಕೆ ಮಾಡಿದರೆ ಪುರುಷರಿಗೆ ಸೌಂದರ್ಯದ ಬಗ್ಗೆ ಆಸಕ್ತಿ ಕಡಿಮೆಯೇ ಎನ್ನಬಹುದು. ಒಂದು ವೇಳೆ ನೀವು ಸುಂದರವಾಗಿ ಕಾಣಿಸಬೇಕೆಂದರೆ ಈ ಕೆಲವು ಸಲಹೆಗಳನ್ನು ತಪ್ಪದೇ ಪಾಲಿಸಿ.

ಸಾಂದರ್ಭಿಕ ಚಿತ್ರಗಳು
• ಪುರುಷರು ಕೂಡ ತ್ವಚೆಯ ಆರೈಕೆ ಮಾಡುವುದು ಬಹಳ ಮುಖ್ಯ. ಹೀಗಾಗಿ ಒಣಮುಖವನ್ನು ಹೊಳೆಯುವಂತೆ ಮಾಡುವ ಮತ್ತು ಮುಖದಲ್ಲಿರುವ ಹೆಚ್ಚುವರಿ ಎಣ್ಣೆ ಅಂಶ ಹೊಂದಿದ್ದರೆ, ಕ್ರೀಮ್‎ ಬಳಸುವುದು ಸೂಕ್ತ. ಅದಲ್ಲದೇ, ಕಲೆಯನ್ನು ನಿವಾರಿಸುವ ಕ್ರೀಮ್ ಗಳು ಲಭ್ಯವಿದ್ದು, ಅದರಲ್ಲಿ ಈ ಕನ್ಸಿಲರ್‎ಗಳು ಕಪ್ಪು ಕಲೆಗಳನ್ನು ನಿವಾರಿಸಿ ತ್ವಚೆಯ ಅಂದವನ್ನು ಹೆಚ್ಚಿಸುತ್ತದೆ.
• ಸನ್ ಸ್ಕ್ರೀನ್ ಲೋಷನ್ ಬಳಸುವುದು ಬಹಳ ಮುಖ್ಯ. ಬಿಸಿಲಿನಲ್ಲಿ ಹೊರಗೆ ಹೋಗುತ್ತಿದ್ದರೆ ಸನ್ ಸ್ಕ್ರೀನ್ ಬಳಸುವುದು ಸೂರ್ಯನ ಹಾನಿಕಾರಕ ಕಿರಣಗಳಿಂದ ತ್ವಚೆಯನ್ನು ರಕ್ಷಿಸುತ್ತದೆ. ಸೂರ್ಯನ ಕಿರಣ ಮಹಿಳೆಯರಿಗಿಂತ ಪುರುಷರ ಚರ್ಮವನ್ನೂ ಹೆಚ್ಚು ಹಾನಿಗೊಳಿಸುತ್ತದೆ. ಹೀಗಾಗಿ ಸನ್ ಸ್ಕ್ರೀನ್ ಬಳಸುವುದು ಅತ್ಯಗತ್ಯ.
• ಹೆಣ್ಣು ಮಕ್ಕಳಂತೆ ಪುರುಷರನ್ನು ಈ ಮೊಡವೆ ಸಮಸ್ಯೆಗಳು ಕಾಡುತ್ತದೆ. ಮುಖದ ತುಂಬಾ ಮೊಡವೆಯಿದ್ದರೆ ಶೇವ್ ಮಾಡುವುದು ಕಷ್ಟವಾಗಬಹುದು. ಆದರೆ ಮೊಡವೆ ಸಮಸ್ಯೆಗೆ ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್ ಬಳಸುವುದಕ್ಕಿಂತ ಮನೆಯಲ್ಲೇ ಸಿಗುವ ವಸ್ತು ಬಳಸುವುದು ಉತ್ತಮ. ಹೀಗಾಗಿ ಅಡುಗೆ ಮನೆಯಲ್ಲಿ ಇರುವ ವಸ್ತುಗಳನ್ನೇ ಬಳಸಿ ಮೊಡವೆ ಸಮಸ್ಯೆಯನ್ನು ನಿವಾರಿಸಿಕೊಳ್ಳಿ.
ಸಾಂದರ್ಭಿಕ ಚಿತ್ರಗಳು
• ಗಡ್ಡ ಮೀಸೆಯ ಕಡೆಗೆ ಗಮನ ಕೊಡುವ ಮೂಲಕ ನೀವು ಸುಂದರವಾಗಿ ಕಾಣಿಸಿಕೊಳ್ಳಬಹುದು. ಹೀಗಾಗಿ ಪ್ರೆಂಚ್ ಕಟ್, ಟ್ರಿಮ್ ಗಡ್ಡ ಹೀಗೆ ನಿಮಗಿಷ್ಟವಾದ ರೀತಿಯಲ್ಲಿ ಗಡ್ಡ ಹಾಗೂ ಕೂದಲನ್ನು ಸೆಟ್ ಮಾಡಿಸಿಕೊಳ್ಳಿ. ಕೆಲವರಿಗೆ ಗಡ್ಡ ಹಾಗೂ ಮೀಸೆ ಬೇಗನೇ ಬರುತ್ತದೆ. ಅಂತಹವರು ಗಡ್ಡ ಮತ್ತು ಮೀಸೆಯನ್ನು ಟ್ರಿಮ್ ಮಾಡುವತ್ತ ಗಮನ ಕೊಡಿ. ಇದು ನಿಮ್ಮ ಮುಖವನ್ನು ನೀಟ್ ಆಗಿ ಕಾಣುವಂತೆ ಮಾಡುತ್ತದೆ.
• ನೀವು ಧರಿಸುವ ಬಟ್ಟೆಗಳು ನಿಮ್ಮನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ. ಹೀಗಾಗಿ ಸಂದರ್ಭಕ್ಕೆ ತಕ್ಕಂತೆ ಉಡುಗೆ ಧರಿಸುವುದು ಉತ್ತಮ. ಬಟ್ಟೆಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಬಣ್ಣಗಳು, ಟ್ರೆಂಡ್ ನಲ್ಲಿರುವ ಉಡುಗೆಗಳತ್ತ ಗಮನ ಕೊಡಿ. ಬಟ್ಟೆಗಳ ಆಯ್ಕೆಯು ನಿಮ್ಮನ್ನು ಸ್ಟೈಲಿಶ್ ಆಗಿ ಕಾಣುವಂತೆ ಮಾಡುತ್ತದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!