ಪುರುಷರೇ, ನೀವು ಸುಂದರವಾಗಿ ಕಾಣಿಸಬೇಕೆಂದರೆ ಇಲ್ಲಿದೆ ಸಿಂಪಲ್ ಟಿಪ್ಸ್.

ಸೌಂದರ್ಯ ಎಂದಾಗ ಮೊದಲು ನೆನಪಾಗುವುದೇ ಈ ಮಹಿಳೆಯರು. ಪುರುಷರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಕಡಿಮೆ. ತ್ವಚೆಯ ಆರೈಕೆಗೆ ಸಮಯ ಕೊಡುವುದಿಲ್ಲ ಎಂದು ಹೇಳುವುದನ್ನು ಕೇಳಿರಬಹುದು. ಮಹಿಳೆಯರಿಗೆ ಹೋಲಿಕೆ ಮಾಡಿದರೆ ಪುರುಷರಿಗೆ ಸೌಂದರ್ಯದ ಬಗ್ಗೆ ಆಸಕ್ತಿ ಕಡಿಮೆಯೇ ಎನ್ನಬಹುದು. ಒಂದು ವೇಳೆ ನೀವು ಸುಂದರವಾಗಿ ಕಾಣಿಸಬೇಕೆಂದರೆ ಈ ಕೆಲವು ಸಲಹೆಗಳನ್ನು ತಪ್ಪದೇ ಪಾಲಿಸಿ.

ಸಾಂದರ್ಭಿಕ ಚಿತ್ರಗಳು
• ಪುರುಷರು ಕೂಡ ತ್ವಚೆಯ ಆರೈಕೆ ಮಾಡುವುದು ಬಹಳ ಮುಖ್ಯ. ಹೀಗಾಗಿ ಒಣಮುಖವನ್ನು ಹೊಳೆಯುವಂತೆ ಮಾಡುವ ಮತ್ತು ಮುಖದಲ್ಲಿರುವ ಹೆಚ್ಚುವರಿ ಎಣ್ಣೆ ಅಂಶ ಹೊಂದಿದ್ದರೆ, ಕ್ರೀಮ್‎ ಬಳಸುವುದು ಸೂಕ್ತ. ಅದಲ್ಲದೇ, ಕಲೆಯನ್ನು ನಿವಾರಿಸುವ ಕ್ರೀಮ್ ಗಳು ಲಭ್ಯವಿದ್ದು, ಅದರಲ್ಲಿ ಈ ಕನ್ಸಿಲರ್‎ಗಳು ಕಪ್ಪು ಕಲೆಗಳನ್ನು ನಿವಾರಿಸಿ ತ್ವಚೆಯ ಅಂದವನ್ನು ಹೆಚ್ಚಿಸುತ್ತದೆ.
• ಸನ್ ಸ್ಕ್ರೀನ್ ಲೋಷನ್ ಬಳಸುವುದು ಬಹಳ ಮುಖ್ಯ. ಬಿಸಿಲಿನಲ್ಲಿ ಹೊರಗೆ ಹೋಗುತ್ತಿದ್ದರೆ ಸನ್ ಸ್ಕ್ರೀನ್ ಬಳಸುವುದು ಸೂರ್ಯನ ಹಾನಿಕಾರಕ ಕಿರಣಗಳಿಂದ ತ್ವಚೆಯನ್ನು ರಕ್ಷಿಸುತ್ತದೆ. ಸೂರ್ಯನ ಕಿರಣ ಮಹಿಳೆಯರಿಗಿಂತ ಪುರುಷರ ಚರ್ಮವನ್ನೂ ಹೆಚ್ಚು ಹಾನಿಗೊಳಿಸುತ್ತದೆ. ಹೀಗಾಗಿ ಸನ್ ಸ್ಕ್ರೀನ್ ಬಳಸುವುದು ಅತ್ಯಗತ್ಯ.
• ಹೆಣ್ಣು ಮಕ್ಕಳಂತೆ ಪುರುಷರನ್ನು ಈ ಮೊಡವೆ ಸಮಸ್ಯೆಗಳು ಕಾಡುತ್ತದೆ. ಮುಖದ ತುಂಬಾ ಮೊಡವೆಯಿದ್ದರೆ ಶೇವ್ ಮಾಡುವುದು ಕಷ್ಟವಾಗಬಹುದು. ಆದರೆ ಮೊಡವೆ ಸಮಸ್ಯೆಗೆ ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್ ಬಳಸುವುದಕ್ಕಿಂತ ಮನೆಯಲ್ಲೇ ಸಿಗುವ ವಸ್ತು ಬಳಸುವುದು ಉತ್ತಮ. ಹೀಗಾಗಿ ಅಡುಗೆ ಮನೆಯಲ್ಲಿ ಇರುವ ವಸ್ತುಗಳನ್ನೇ ಬಳಸಿ ಮೊಡವೆ ಸಮಸ್ಯೆಯನ್ನು ನಿವಾರಿಸಿಕೊಳ್ಳಿ.
ಸಾಂದರ್ಭಿಕ ಚಿತ್ರಗಳು
• ಗಡ್ಡ ಮೀಸೆಯ ಕಡೆಗೆ ಗಮನ ಕೊಡುವ ಮೂಲಕ ನೀವು ಸುಂದರವಾಗಿ ಕಾಣಿಸಿಕೊಳ್ಳಬಹುದು. ಹೀಗಾಗಿ ಪ್ರೆಂಚ್ ಕಟ್, ಟ್ರಿಮ್ ಗಡ್ಡ ಹೀಗೆ ನಿಮಗಿಷ್ಟವಾದ ರೀತಿಯಲ್ಲಿ ಗಡ್ಡ ಹಾಗೂ ಕೂದಲನ್ನು ಸೆಟ್ ಮಾಡಿಸಿಕೊಳ್ಳಿ. ಕೆಲವರಿಗೆ ಗಡ್ಡ ಹಾಗೂ ಮೀಸೆ ಬೇಗನೇ ಬರುತ್ತದೆ. ಅಂತಹವರು ಗಡ್ಡ ಮತ್ತು ಮೀಸೆಯನ್ನು ಟ್ರಿಮ್ ಮಾಡುವತ್ತ ಗಮನ ಕೊಡಿ. ಇದು ನಿಮ್ಮ ಮುಖವನ್ನು ನೀಟ್ ಆಗಿ ಕಾಣುವಂತೆ ಮಾಡುತ್ತದೆ.
• ನೀವು ಧರಿಸುವ ಬಟ್ಟೆಗಳು ನಿಮ್ಮನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ. ಹೀಗಾಗಿ ಸಂದರ್ಭಕ್ಕೆ ತಕ್ಕಂತೆ ಉಡುಗೆ ಧರಿಸುವುದು ಉತ್ತಮ. ಬಟ್ಟೆಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಬಣ್ಣಗಳು, ಟ್ರೆಂಡ್ ನಲ್ಲಿರುವ ಉಡುಗೆಗಳತ್ತ ಗಮನ ಕೊಡಿ. ಬಟ್ಟೆಗಳ ಆಯ್ಕೆಯು ನಿಮ್ಮನ್ನು ಸ್ಟೈಲಿಶ್ ಆಗಿ ಕಾಣುವಂತೆ ಮಾಡುತ್ತದೆ.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!