ಪೊಲೀಸರ ವಾಟ್ಸ್ಆ್ಯಪ್, ಮೊಬೈಲ್ ಹ್ಯಾಕ್: ಬೆಂಗಳೂರಿನ ಪೊಲೀಸರನ್ನೂ ಬಿಡದ ಸೈಬರ್ ವಂಚಕರು!

ಬೆಂಗಳೂರು :- ಎಪಿಕೆ ಫೈಲ್ಗಳನ್ನು ಕಳುಹಿಸಿ ವಾಟ್ಸ್ಆ್ಯಪ್, ಮೊಬೈಲ್ ನಂಬರ್ ಹ್ಯಾಕ್ ಮಾಡುವ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗಿದ್ದು, ಇದೀಗ ಬೆಂಗಳೂರು ಪೊಲೀಸರಿಗೂ ಅದರ ಬಿಸಿ ತಟ್ಟಿದೆ. ಬೆಂಗಳೂರಿನ ಹಲವು ಪೊಲೀಸ್ ಇನ್ಸ್ಪೆಕ್ಟರ್ಗಳ ಮೊಬೈಲ್ ಫೋನ್ ಸಂಖ್ಯೆಗಳು ಮತ್ತು ವಾಟ್ಸ್ಆ್ಯಪ್ ಖಾತೆಗಳನ್ನು ಸೈಬರ್ ವಂಚಕರು ಬುಧವಾರ ಎಪಿಕೆ ಫೈಲ್ ಲಿಂಕ್ ಕಳುಹಿಸಿ ಹ್ಯಾಕ್ ಮಾಡಿರುವುದು ಮೂಲಗಳಿಂದ ತಿಳಿದುಬಂದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಇನ್ಸ್ಪೆಕ್ಟರ್ಗಳು ಸೇರಿದಂತೆ ಅನೇಕ ಪೊಲೀಸ್ ಸಿಬ್ಬಂದಿ ಅಪರಿಚಿತ ಸಂಖ್ಯೆಯ ರಿಸೀವರ್ಗಳು ವಾಟ್ಸ್ಆ್ಯಪ್ನಲ್ಲಿ ಕಳುಹಿಸಿದ ಎಪಿಕೆ ಫೈಲ್ ಲಿಂಕ್ ಅನ್ನು ದುರುದ್ದೇಶಪೂರಿತವೆಂದು ತಿಳಿಯದೆ ಕ್ಲಿಕ್ ಮಾಡಿದ್ದಾರೆ ಎನ್ನಲಾಗಿದೆ.

ವಂಚಕರು ಆಡುಗೋಡಿ ಟ್ರಾಫಿಕ್ ಮತ್ತು ಜ್ಞಾನಭಾರತಿ, ಗಿರಿನಗರ ಮತ್ತು ಬಸವನಗುಡಿ ಠಾಣೆ ಸೇರಿದಂತೆ ಕೆಲವು ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್ಗಳ ಅಧಿಕೃತ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಿದ್ದಾರೆ. ಅವರ ಸಹೋದ್ಯೋಗಿಗಳು, ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮತ್ತು ಗುಂಪುಗಳಿಗೆ ಎಪಿಕೆ ಫೈಲ್ ಲಿಂಕ್ಗಳನ್ನು ಕಳುಹಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಲಿಂಕ್ ಡೌನ್ಲೋಡ್ ಮಾಡಿದ ನಂತರ ಹಣವನ್ನು ಕಳೆದುಕೊಂಡ ಬಗ್ಗೆ ಯಾವುದೇ ದೂರು ಅಥವಾ ಮಾಹಿತಿ ಇನ್ನೂ ಬಂದಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ.
ಪೊಲೀಸ್ ಇನ್ಸ್ಪೆಕ್ಟರ್ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಕಳುಹಿಸಿದ ಎಪಿಕೆ ಫೈಲ್ ಸಂದೇಶವನ್ನು ಸ್ವೀಕರಿಸಿದ್ದೇನೆ. ಕುತೂಹಲದಿಂದ ಅದನ್ನು ಕ್ಲಿಕ್ ಮಾಡಿದ್ದೇನೆ. ಆ ಲಿಂಕ್ ಖಾಲಿಯಾಗಿತ್ತು. ನಂತರ, ಅವರ ಫೋನ್ ಮತ್ತು ವಾಟ್ಸ್ಆ್ಯಪ್ ಹ್ಯಾಕ್ ಆಗಿರುವುದು ನನಗೆ ತಿಳಿಯಿತು ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ. ಬಳಿಕ ಆ ಅಧಿಕಾರಿ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಿ ಪಾಸ್ವರ್ಡ್ ಬದಲಾಯಿಸಿದ್ದರು.

ಬೆಳಗಾವಿಯಲ್ಲಿ ವಿಶೇಷ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಇನ್ಸ್ಪೆಕ್ಟರ್ ವಾಟ್ಸ್ಆ್ಯಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಅವರ ಎಲ್ಲಾ ಕಾಂಟ್ಯಾಕ್ಟ್ಗಳು ಮತ್ತು ಗುಂಪುಗಳಿಗೆ ಅವರ ಮೊಬೈಲ್ ಸಂಖ್ಯೆಯನ್ನು ಬಳಸಿ ಸಂದೇಶವನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!