ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ….!!!!

ಮನೆಗೆಲಸದಾಕೆ ಮೇಲಿನ ಅ*ಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಮೊದಲು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸದೆ ನೇರವಾಗಿ ಹೈಕೋರ್ಟ್ ಮೊರೆ ಹೋಗುವಂತಿಲ್ಲ ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿದೆ. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ವಿಚಾರಣೆ ಯನ್ನು ಜು.2ಕ್ಕೆ ಮುಂದೂಡಿತು. ಪ್ರಾಸಿಕ್ಯೂಷನ್ ಪರ ವಾದಿಸಿದ ಎಸ್ಪಿಪಿ ರವಿವರ್ಮ ಕುಮಾರ್, “ಅರ್ಜಿದಾರರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ವಜಾಗೊಳಿಸಿತ್ತು.

ಸುಪ್ರೀಂಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ. ಈಗ ಬದಲಾದ ಪರಿಸ್ಥಿತಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಮೊದಲು ಅವರು ಸೆಷನ್ಸ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ನಂತರವಷ್ಟೇ ಹೈಕೋರ್ಟ್ ಮೊರೆ ಹೋಗಬಹುದೇ ಹೊರತು ಪ್ರಕ್ರಿಯೆ ಉಲ್ಲಂಘಿಸಿ ನೇರವಾಗಿ ಹೈಕೋರ್ಟ್ನ ನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ,” ಎಂದರು. ಅರ್ಜಿದಾರರ ಪರ ವಕೀಲರು “ಹೊಳೆನರಸೀಪುರ ಪ್ರಕರಣದಲ್ಲಿ ಸಾಕ್ಷ್ಯ ವಿಚಾರಣೆಯೇ ಆರಂಭವಾಗಿಲ್ಲ. ವಿಚಾರಣೆಯೇ ಆರಂಭವಾಗದೆ ಜೈಲಿನಲ್ಲಿ ಕಳೆಯುವಂತಾಗಿದೆ. ಈ ಪ್ರಕರಣದಲ್ಲಿ 150 ಸಾಕ್ಷಿಗಳ ವಿಚಾರಣೆಯಾಗಬೇಕಿದೆ. ಸದ್ಯಕ್ಕೆ ವಿಚಾರಣೆ ಮುಗಿಯುವ ಸಾಧ್ಯತೆ ಇಲ್ಲದಿರುವುದರಿಂದ ಜಾಮೀನು ನೀಡಬೇಕು. ಈ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಪೊಲೀಸ್ ವಶಕ್ಕೂ ತೆಗೆದುಕೊಂಡಿಲ್ಲ. ಹಾಗಾಗಿ, ಷರತ್ತು ವಿಧಿಸಿ ಜಾಮೀನು ನೀಡಬೇಕು,” ಎಂದು ಮನವಿ ಮಾಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!