ಫಿಟ್ ಅಂಡ್ ಫೈನ್ ಆಗಿದ್ದ ತಮಿಳು ನಟ ವಿಶಾಲ್ಗೆ ನಿಜಕ್ಕೂ ಆಗಿದ್ದೇನು ಗೊತ್ತಾ?

ತಮಿಳು ನಟ ವಿಶಾಲ್ ಅವರು ‘ಮದ ಗಜ ರಾಜ’ ಚಿತ್ರದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕೈ ನಡುಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ವಿಶಾಲ್ ಅವರಿಗೆ ಜ್ವರ ಇದ್ದ ಕಾರಣ ನಡುಕ ಉಂಟಾಗಿತ್ತೆಂದು ಸ್ಪಷ್ಟನೆ ಸಿಕ್ಕಿದೆ. ಅವರ ಡೆಡಿಕೇಷನ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮಿಳು ನಟ ವಿಶಾಲ್ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಮಾಸ್ ಆಗಿ ಗಮನ ಸೆಳೆಯುತ್ತಾರೆ. ಯಾವುದೇ ವಿಚಾರ ಇದ್ದರೂ ನೇರ ಮಾತುಗಳಲ್ಲಿ ಹೇಳುತ್ತಾರೆ. ಯಾರೇ ಪ್ರಶ್ನೆ ಮಾಡಿದರೂ ಅವರಿಗೆ ಉತ್ತರ ನೀಡುತ್ತಾರೆ. ಇಂಥ ವಿಶಾಲ್ ಅವರು ಈಗ ಸಖತ್ ಡಲ್ ಆಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಮದ ಗಜ ರಾಜ’ ಸಿನಿಮಾದ ಪ್ರೀ ರಿಲೀಸ್ ಈವೆಂಟ್ಗೆ ಆಗಮಿಸಿದ್ದರು. ಆಗ ಅವರ ಕೈ ನಡುಗಿದೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.


ಚೆನ್ನೈನಲ್ಲಿ ಇತ್ತೀಚೆಗೆ ‘ಮದ ಗಜ ರಾಜ’ ತಂಡದವರು ಅದ್ದೂರಿಯಾಗಿ ಪ್ರೀ-ರಿಲೀಸ್ ಈವೆಂಟ್ ಮಾಡಿದರು. ಈ ಚಿತ್ರಕ್ಕೆ ವಿಶಾಲ್ ಹೀರೋ. ಹೀಗಾಗಿ, ಅವರು ಕೂಡ ವೇದಿಕೆ ಏರಿದ್ದರು. ಅವರು ಮಾತನಾಡುವಾಗ ಕೈ ನಡುಗುತ್ತಿತ್ತು. ಮಾತುಗಳನ್ನಾಡಲು ಕಷ್ಟಪಟ್ಟರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಶಾಲ್ಗೆ ಏನಾಯಿತು ಎಂದು ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.

ವಿಶಾಲ್ ಅವರು ಮಾತನಾಡುವಾಗ ಮೈಕ್ನ ಗಟ್ಟಿ ಹಿಡಿದು ಮಾತನಾಡುತ್ತಿದ್ದರು. ಅವರ ಮಾತುಗಳು ನೇರವಾಗಿ ಇರುತ್ತಿದ್ದವು. ಆದರೆ, ಮೊದಲಿದ್ದ ವಿಶಾಲ್ ಈಗ ಕಾಣೆ ಆಗಿದ್ದಾರೆ. ಈಗ ಕೇಳಿ ಬರುತ್ತಿರುವ ಸ್ಪಷ್ಟನೆ ಏನೆಂದರೆ ಅವರಿಗೆ ಆ ಸಂದರ್ಭದಲ್ಲಿ ತೀವ್ರ ಜ್ವರ ಇತ್ತು. ಆದಗ್ಯೂ ಅವರು ವೇದಿಕೆ ಏರಿ ಮಾತನಾಡಿದ್ದರು. ಜ್ವರ ಇದ್ದ ಕಾರಣದಿಂದಲೇ ಅವರಿಗೆ ನಡುಕ ಶುರುವಾಗಿತ್ತು ಎನ್ನಲಾಗಿದೆ.
ಸದ್ಯ ವಿಶಾಲ್ ಬಗ್ಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಜ್ವರದ ಮಧ್ಯೆಯೂ ಅವರು ಕಮಿಟ್ಮೆಂಟ್ ಮರೆಯಲಿಲ್ಲ ಎಂದು ಅನೇಕರು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ‘ವಿಶಾಲ್ ಡೆಡಿಕೇಷನ್. ಅವರು ಜ್ವರದ ಮಧ್ಯೆಯೂ ಸಿನಿಮಾ ಪ್ರಮೋಟ್ ಮಾಡಿದ್ದಾರೆ’ ಎಂದಿದ್ದಾರೆ ಅಭಿಮಾನಿಗಳು.
‘ಮದ ಗಜ ರಾಜ’ ಸಿನಿಮಾದಲ್ಲಿ ಅಂಜಲಿ, ಸೋನು ಸೂದ್, ವರಲಕ್ಷ್ಮೀ ಶರತ್ಕುಮಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾನ ಸುಂದರ್ ಸಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ 2013ರಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, 12 ವರ್ಷಗಳ ಬಳಿಕ ಸಿನಿಮಾ ರಿಲೀಸ್ ಆಗುತ್ತಿದೆ. ಜನವರಿ 12ರಂದು ಸಿನಿಮಾ ಬಿಡುಗಡೆ ಆಗುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!