ಫಿಟ್ ಅಂಡ್ ಫೈನ್ ಆಗಿದ್ದ ತಮಿಳು ನಟ ವಿಶಾಲ್ಗೆ ನಿಜಕ್ಕೂ ಆಗಿದ್ದೇನು ಗೊತ್ತಾ?

ತಮಿಳು ನಟ ವಿಶಾಲ್ ಅವರು ‘ಮದ ಗಜ ರಾಜ’ ಚಿತ್ರದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕೈ ನಡುಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ವಿಶಾಲ್ ಅವರಿಗೆ ಜ್ವರ ಇದ್ದ ಕಾರಣ ನಡುಕ ಉಂಟಾಗಿತ್ತೆಂದು ಸ್ಪಷ್ಟನೆ ಸಿಕ್ಕಿದೆ. ಅವರ ಡೆಡಿಕೇಷನ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮಿಳು ನಟ ವಿಶಾಲ್ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಮಾಸ್ ಆಗಿ ಗಮನ ಸೆಳೆಯುತ್ತಾರೆ. ಯಾವುದೇ ವಿಚಾರ ಇದ್ದರೂ ನೇರ ಮಾತುಗಳಲ್ಲಿ ಹೇಳುತ್ತಾರೆ. ಯಾರೇ ಪ್ರಶ್ನೆ ಮಾಡಿದರೂ ಅವರಿಗೆ ಉತ್ತರ ನೀಡುತ್ತಾರೆ. ಇಂಥ ವಿಶಾಲ್ ಅವರು ಈಗ ಸಖತ್ ಡಲ್ ಆಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಮದ ಗಜ ರಾಜ’ ಸಿನಿಮಾದ ಪ್ರೀ ರಿಲೀಸ್ ಈವೆಂಟ್ಗೆ ಆಗಮಿಸಿದ್ದರು. ಆಗ ಅವರ ಕೈ ನಡುಗಿದೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.


ಚೆನ್ನೈನಲ್ಲಿ ಇತ್ತೀಚೆಗೆ ‘ಮದ ಗಜ ರಾಜ’ ತಂಡದವರು ಅದ್ದೂರಿಯಾಗಿ ಪ್ರೀ-ರಿಲೀಸ್ ಈವೆಂಟ್ ಮಾಡಿದರು. ಈ ಚಿತ್ರಕ್ಕೆ ವಿಶಾಲ್ ಹೀರೋ. ಹೀಗಾಗಿ, ಅವರು ಕೂಡ ವೇದಿಕೆ ಏರಿದ್ದರು. ಅವರು ಮಾತನಾಡುವಾಗ ಕೈ ನಡುಗುತ್ತಿತ್ತು. ಮಾತುಗಳನ್ನಾಡಲು ಕಷ್ಟಪಟ್ಟರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಶಾಲ್ಗೆ ಏನಾಯಿತು ಎಂದು ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.

ವಿಶಾಲ್ ಅವರು ಮಾತನಾಡುವಾಗ ಮೈಕ್ನ ಗಟ್ಟಿ ಹಿಡಿದು ಮಾತನಾಡುತ್ತಿದ್ದರು. ಅವರ ಮಾತುಗಳು ನೇರವಾಗಿ ಇರುತ್ತಿದ್ದವು. ಆದರೆ, ಮೊದಲಿದ್ದ ವಿಶಾಲ್ ಈಗ ಕಾಣೆ ಆಗಿದ್ದಾರೆ. ಈಗ ಕೇಳಿ ಬರುತ್ತಿರುವ ಸ್ಪಷ್ಟನೆ ಏನೆಂದರೆ ಅವರಿಗೆ ಆ ಸಂದರ್ಭದಲ್ಲಿ ತೀವ್ರ ಜ್ವರ ಇತ್ತು. ಆದಗ್ಯೂ ಅವರು ವೇದಿಕೆ ಏರಿ ಮಾತನಾಡಿದ್ದರು. ಜ್ವರ ಇದ್ದ ಕಾರಣದಿಂದಲೇ ಅವರಿಗೆ ನಡುಕ ಶುರುವಾಗಿತ್ತು ಎನ್ನಲಾಗಿದೆ.
ಸದ್ಯ ವಿಶಾಲ್ ಬಗ್ಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಜ್ವರದ ಮಧ್ಯೆಯೂ ಅವರು ಕಮಿಟ್ಮೆಂಟ್ ಮರೆಯಲಿಲ್ಲ ಎಂದು ಅನೇಕರು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ‘ವಿಶಾಲ್ ಡೆಡಿಕೇಷನ್. ಅವರು ಜ್ವರದ ಮಧ್ಯೆಯೂ ಸಿನಿಮಾ ಪ್ರಮೋಟ್ ಮಾಡಿದ್ದಾರೆ’ ಎಂದಿದ್ದಾರೆ ಅಭಿಮಾನಿಗಳು.
‘ಮದ ಗಜ ರಾಜ’ ಸಿನಿಮಾದಲ್ಲಿ ಅಂಜಲಿ, ಸೋನು ಸೂದ್, ವರಲಕ್ಷ್ಮೀ ಶರತ್ಕುಮಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾನ ಸುಂದರ್ ಸಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ 2013ರಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, 12 ವರ್ಷಗಳ ಬಳಿಕ ಸಿನಿಮಾ ರಿಲೀಸ್ ಆಗುತ್ತಿದೆ. ಜನವರಿ 12ರಂದು ಸಿನಿಮಾ ಬಿಡುಗಡೆ ಆಗುತ್ತಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!