ಫೇರ್ನೆಸ್ ಕ್ರೀಮ್ 2 ಕೋಟಿ ರೂಪಾಯಿ ಜಾಹೀರಾತು ರಿಜೆಕ್ಟ್ ಮಾಡಿದ್ದ ಸಾಯಿ ಪಲ್ಲವಿ:

ದಕ್ಷಿಣ ಭಾರತದ ಪ್ರಸಿದ್ಧ ನಟಿ ಸಾಯಿ ಪಲ್ಲವಿ ಅವರು 2 ಕೋಟಿ ರೂಪಾಯಿ ಮೌಲ್ಯದ ಒಂದು ಫೇರ್ನೆಸ್ ಕ್ರೀಮ್ ಜಾಹೀರಾತನ್ನು ತಿರಸ್ಕರಿಸಿದ್ದಾರೆ. ಅವರ ಈ ನಿರ್ಧಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಲ್ಲದೆ, ಅವರು ಬಾಲಿವುಡ್ನಲ್ಲಿ ತಮ್ಮ ಅಭಿನಯ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ. ವೈದ್ಯಕೀಯ ಪದವೀಧರೆಯೂ ಆಗಿರುವ ಸಾಯಿ ಪಲ್ಲವಿ ಅವರ ಸರಳತೆ ಮತ್ತು ತತ್ವಗಳಿಗೆ ಈ ಘಟನೆ ಸಾಕ್ಷಿಯಾಗಿದೆ. ಅವರ ಮುಂದಿನ ಚಿತ್ರ ‘ರಾಮಾಯಣ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ದಕ್ಷಿಣ ಭಾರತದ ನಟಿ ಸಾಯಿ ಪಲ್ಲವಿ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು. ಅವರಿಗೆ ಹಲವು ಆಫರ್ಗಳು ಬಂದಿದ್ದವು. ಈ ಪೈಕಿ ಅವರು ಅಳೆದು ತೂಗಿ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈ ಸುಂದರ ನಟಿ ವೈದ್ಯೆ ಕೂಡ ಹೌದು. ಅವರು ಎಂಬಿಬಿಎಸ್ ಕೂಡ ಓದಿದ್ದಾರೆ. ಸೌತ್ ನಂತರ ಬಾಲಿವುಡ್ನಲ್ಲಿ ಸದ್ದು ಮಾಡಲು ಸಾಯಿ ಪಲ್ಲವಿ ಸಜ್ಜಾಗಿದ್ದಾರೆ. ಈ ಮಧ್ಯೆ ಸಾಯಿ ಪಲ್ಲವಿ ಅವರ ಒಂದು ಅಪರೂಪದ ವಿಚಾರ ರಿವೀಲ್ ಆಗಿದೆ. ಅವರು ಬರೋಬ್ಬರಿ 2 ಕೋಟಿ ರೂಪಾಯಿ ಜಾಹೀರಾತನ್ನು ರಿಜೆಕ್ಟ್ ಮಾಡಿದ್ದರು ಎಂಬುದು ವಿಶೇಷ.
‘ಜಾಹೀರಾತುಗಳಿಂದ ಬಂದ ಹಣವನ್ನು ಏನು ಮಾಡೋದು. ನಾನು ಮನೆಗೆ ಹೋಗಿ ಮೂರು ಚಪಾತಿ ತಿನ್ನುತ್ತೇನೆ ಅಷ್ಟೆ. ನನಗೆ ದೊಡ್ಡ ಆಸೆಗಳಿಲ್ಲ’ ಎಂದು ಸಾಯಿ ಪಲ್ಲವಿ ಹೇಳಿದ್ದರು. ಈ ಮೂಲಕ ಅವರು ಎಲ್ಲ ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದರು. ಸಾಯಿ ಪಲ್ಲವಿಗೆ ಫೇರ್ನೆಸ್ ಕ್ರೀಂ ಜಾಹೀರಾತಿಗೆ 2 ಕೋಟಿ ರೂ. ಸಿಕ್ಕಿತ್ತು. ಆದರೆ, ಇದನ್ನು ನಟಿ ತಿರಸ್ಕರಿಸಿದ್ದಾರೆ.
ಸದ್ಯ ಸಾಯಿ ಪಲ್ಲವಿ ಅವರು ‘ರಾಮಾಯಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. 2026ರಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!