ಫೋನ್ ಕಸಿದುಕೊಂಡರು ಎಂಬ ಕೋಪಕ್ಕೆ ಶಿಕ್ಷಕಿಗೆ ಚಪ್ಪಲಿಯಲ್ಲಿ ಬಾರಿಸಿದ ವಿದ್ಯಾರ್ಥಿನಿ!!!

ಹೌದು ವೀಕ್ಷಕರೇ ಇಂತಹದೊಂದು ಅಮಾನವೀಯ ಘಟನೆ ಆಂಧ್ರಪ್ರದೇಶದ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಕ್ಲಾಸ್ನಲ್ಲಿ ಫೋನ್ ಬಳಸಿದ್ದಕ್ಕೆ ಪ್ರಾಧ್ಯಾಪಕಿ ಫೋನ್ ವಶಪಡಿಸಿಕೊಂಡಿದ್ದು, ಇದರಿಂದ ಕೋಪಗೊಂಡ ಯುವತಿ ನೇರವಾಗಿ ಶಿಕ್ಷಕಿಯ ಮೇಲೆ ಕೈ ಮಾಡಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದ ಬೆನ್ನಲ್ಲೇ ಇದೀಗ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿಯನ್ನು ಅಮಾನತುಗೊಳಿಸಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ನೀಡಿ ಅವರನ್ನು ನಾಳಿನ ಉದಯೋನ್ಮುಖ ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿಯನ್ನು ಹೊತ್ತಿರುವುದು ಶಿಕ್ಷಕರು. ಶಿಕ್ಷಕರು ದೇವರಿಗೆ ಸಮಾನ ಎಂಬ ಮಾತಿದೆ ಹಾಗಿದ್ದರೂ ಸಹ ಕೇವಲ ಫೋನಿಗಾಗಿ ಶಿಕ್ಷಕೀಯ ಮೇಲೆ ಕೈ ಮಾಡಿರುವುದು ಹಾಗೂ ಚಪ್ಪಲಿಯಿಂದ ಬಾರಿಸಿರುವುದು ನಿಜಕ್ಕೂ ವಿದ್ಯಾರ್ಥಿ ಜೀವನಕ್ಕೆ ಅವಮಾನ ಮಾಡುವಂತಹ ಘಟನೆ ಇದಾಗಿದೆ.

ಮಕ್ಕಳಿಗೆ ವಿದ್ಯೆ ಕಲಿಸಿ, ಬದುಕಿನ ಮಾರ್ಗ ತೋರಿಸುವ ಶಿಕ್ಷಕನ್ನು ದೇವರೆಂದು ಗೌರವಿಸಲಾಗುತ್ತದೆ. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ ತನ್ನ ಗುರುವಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವಿದ್ಯಾರ್ಥಿನಿ ತರಗತಿಯಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಕಂಡ ಶಿಕ್ಷಕಿ ಆಕೆಯಿಂದ ಫೋನ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ ನೇರವಾಗಿ ತನ್ನ ಶಿಕ್ಷಕಿಯ ಮೇಲೆಯೇ ಕೈ ಮಾಡಿದ್ದಾಳೆ.

ಕಾಲೇಜಿನ ಕ್ಯಾಂಪಸ್ನಲ್ಲೇ ನೂರಾರು ವಿದ್ಯಾರ್ಥಿಗಳ ಮುಂದೆ ಶಿಕ್ಷಕಿಗೆ ಚಪ್ಪಲಿಯಲ್ಲಿ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಇದಲ್ಲದೇ ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದನ್ನು ಕಾಣಬಹುದು. ಅಲ್ಲೇ ಇದ್ದ ವಿದ್ಯಾರ್ಥಿಯೊಬ್ಬರು ಈ ಘಟನೆಯನ್ನು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಅಷ್ಟೇ ಅಲ್ಲ, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಘು ಕಾಲೇಜು ಆಡಳಿತ ಮಂಡಳಿ ವಿಚಾರಣೆ ನಡೆಸಿದ್ದು,ವಿದ್ಯಾರ್ಥಿನಿ ಕೋಪಗೊಂಡು ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದಾಳೆಂದು ತಿಳಿದುಬಂದಿದೆ. ಶಿಕ್ಷಕಿಯ ಮೇಲೆ ಕೈ ಮಾಡಿದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!