ಫೋನ್ ಕಸಿದುಕೊಂಡರು ಎಂಬ ಕೋಪಕ್ಕೆ ಶಿಕ್ಷಕಿಗೆ ಚಪ್ಪಲಿಯಲ್ಲಿ ಬಾರಿಸಿದ ವಿದ್ಯಾರ್ಥಿನಿ!!!

ಹೌದು ವೀಕ್ಷಕರೇ ಇಂತಹದೊಂದು ಅಮಾನವೀಯ ಘಟನೆ ಆಂಧ್ರಪ್ರದೇಶದ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಕ್ಲಾಸ್ನಲ್ಲಿ ಫೋನ್ ಬಳಸಿದ್ದಕ್ಕೆ ಪ್ರಾಧ್ಯಾಪಕಿ ಫೋನ್ ವಶಪಡಿಸಿಕೊಂಡಿದ್ದು, ಇದರಿಂದ ಕೋಪಗೊಂಡ ಯುವತಿ ನೇರವಾಗಿ ಶಿಕ್ಷಕಿಯ ಮೇಲೆ ಕೈ ಮಾಡಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದ ಬೆನ್ನಲ್ಲೇ ಇದೀಗ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿಯನ್ನು ಅಮಾನತುಗೊಳಿಸಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ನೀಡಿ ಅವರನ್ನು ನಾಳಿನ ಉದಯೋನ್ಮುಖ ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿಯನ್ನು ಹೊತ್ತಿರುವುದು ಶಿಕ್ಷಕರು. ಶಿಕ್ಷಕರು ದೇವರಿಗೆ ಸಮಾನ ಎಂಬ ಮಾತಿದೆ ಹಾಗಿದ್ದರೂ ಸಹ ಕೇವಲ ಫೋನಿಗಾಗಿ ಶಿಕ್ಷಕೀಯ ಮೇಲೆ ಕೈ ಮಾಡಿರುವುದು ಹಾಗೂ ಚಪ್ಪಲಿಯಿಂದ ಬಾರಿಸಿರುವುದು ನಿಜಕ್ಕೂ ವಿದ್ಯಾರ್ಥಿ ಜೀವನಕ್ಕೆ ಅವಮಾನ ಮಾಡುವಂತಹ ಘಟನೆ ಇದಾಗಿದೆ.

ಮಕ್ಕಳಿಗೆ ವಿದ್ಯೆ ಕಲಿಸಿ, ಬದುಕಿನ ಮಾರ್ಗ ತೋರಿಸುವ ಶಿಕ್ಷಕನ್ನು ದೇವರೆಂದು ಗೌರವಿಸಲಾಗುತ್ತದೆ. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ ತನ್ನ ಗುರುವಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವಿದ್ಯಾರ್ಥಿನಿ ತರಗತಿಯಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಕಂಡ ಶಿಕ್ಷಕಿ ಆಕೆಯಿಂದ ಫೋನ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ ನೇರವಾಗಿ ತನ್ನ ಶಿಕ್ಷಕಿಯ ಮೇಲೆಯೇ ಕೈ ಮಾಡಿದ್ದಾಳೆ.

ಕಾಲೇಜಿನ ಕ್ಯಾಂಪಸ್ನಲ್ಲೇ ನೂರಾರು ವಿದ್ಯಾರ್ಥಿಗಳ ಮುಂದೆ ಶಿಕ್ಷಕಿಗೆ ಚಪ್ಪಲಿಯಲ್ಲಿ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಇದಲ್ಲದೇ ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದನ್ನು ಕಾಣಬಹುದು. ಅಲ್ಲೇ ಇದ್ದ ವಿದ್ಯಾರ್ಥಿಯೊಬ್ಬರು ಈ ಘಟನೆಯನ್ನು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಅಷ್ಟೇ ಅಲ್ಲ, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಘು ಕಾಲೇಜು ಆಡಳಿತ ಮಂಡಳಿ ವಿಚಾರಣೆ ನಡೆಸಿದ್ದು,ವಿದ್ಯಾರ್ಥಿನಿ ಕೋಪಗೊಂಡು ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದಾಳೆಂದು ತಿಳಿದುಬಂದಿದೆ. ಶಿಕ್ಷಕಿಯ ಮೇಲೆ ಕೈ ಮಾಡಿದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!