ಬಜೆಟ್ 2025 ಕನ್ನಡ ಚಿತ್ರರಂಗ ಕ್ಷೇತ್ರಕ್ಕೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ.

ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಹಲವು ಕ್ಷೇತ್ರಗಳು ಹಲವು ಯೋಜನೆಗಳು, ಅನುದಾನಗಳನ್ನು ನೀಡಿದರು. ಅದರಂತೆ ಕನ್ನಡ ಚಿತ್ರರಂಗಕ್ಕೂ ಸಹ ಕೆಲ ಅನುದಾನಗಳನ್ನು ನೀಡಿದ್ದಾರೆ. ಈ ಬಜೆಟ್ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಮೈಸೂರಿನಲ್ಲಿ ಫಿಲಂ ಸಿಟಿ
ಕನ್ನಡ ಚಿತ್ರರಂಗದ ದಶಕಗಳ ಬೇಡಿಕೆಯಾದ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫಿಲಂ ಸಿಟಿ ನಿರ್ಮಾಣಕ್ಕೆ ಮೈಸೂರಿನಲ್ಲಿ 150 ಎಕರೆ ಜಾಗವನ್ನು ಕಾಯ್ದಿರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಕನ್ನಡ ಸಿನಿಮಾಗಳಿಗೆ OTT ವೇದಿಕೆ
ಕನ್ನಡ ಸಿನಿಮಾಗಳನ್ನು ಯಾವ ಒಟಿಟಿಗಳೂ ಖರೀದಿಸುತ್ತಿಲ್ಲ ಎಂಬ ದೂರು ಕಳೆದ ಕೆಲ ವರ್ಷಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ಈಗ ಸರ್ಕಾರವೇ ಮುಂದಾಗಿ ಒಟಿಟಿ ವೇದಿಕೆ ಸೃಷ್ಟಿಸಲು ಮುಂದಾಗಿದ್ದು, ಇಲ್ಲಿ ಕನ್ನಡ ಸಿನಿಮಾಗಳನ್ನು ಪ್ರದರ್ಶನ ಮಾಡಲಿದೆ. ಕೇರಳದಲ್ಲಿ ಈಗಾಗಲೇ ಈ ಮಾದರಿ ಚಾಲ್ತಿಯಲ್ಲಿದೆ.

ಸಿನಿಮಾ ಕ್ಷೇತ್ರ ಕೈಗಾರಿಕಾ ನೀತಿ ಅಡಿ ತರಲು ನಿರ್ಧಾರ
ಸಿನಿಮಾ ಉದ್ಯಮವನ್ನು ಸಿನಿಮಾ ಕೈಗಾರಿಕೆ ಎಂದು ಘೋಷಿಸಲಾಗಿದೆ. ಸಿನಿಮಾ ರಂಗವನ್ನು ಕೈಗಾರಿಕೆಯನ್ನಾಗಿ ಗುರುತಿಸುವ ಮೂಲಕ ಕೈಗಾರಿಕಾ ನೀತಿಯ ಅಡಿ ಸರ್ಕಾರ ನೀಡುವ ಸವಲತ್ತುಗಳು, ನಿಯಮಗಳು ಸಿನಿಮಾ ರಂಗಕ್ಕೂ ಅನ್ವಯ ಆಗಲಿದೆ.


ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರ
ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ಗಳು ಬಹಳ ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿವೆ. ಮಲ್ಟಿಪ್ಲೆಕ್ಸ್ಗಳು ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವುದರ ವಿರುದ್ಧ ಕ್ರಮಕ್ಕೆ ಬಹಳ ದಿನಗಳಿಂದಲೂ ಒತ್ತಾಯ ಕೇಳಿ ಬಂದಿತ್ತು. ಇದೀಗ ಸರ್ಕಾರವು, ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಚಲನಚಿತ್ರ ಅಕಾಡೆಮಿ ಅಭಿವೃದ್ಧಿ
ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ಚಲನಚಿತ್ರ ಅಕಾಡೆಮಿಯನ್ನು ಅಭಿವೃದ್ಧಿಪಡಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಭಿವೃದ್ಧಿ ಮಾಡಲಾಗುತ್ತದೆಯಂತೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!