ಬಸ್‌ ಪ್ರಯಾಣ ದರ ಶೇ 15ರಷ್ಟು ಏರಿಕೆ : ಕರ್ನಾಟಕದ ಜನರಿಗೆ ಬಿಗ್ ಶಾಕ್.

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ನಾಲ್ಕು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಅದರ ಬೆನ್ನಲ್ಲೇ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

• ಬಿಎಂಟಿಸಿ: ಈ ವರ್ಷ ಆಗಸ್ಟ್ನಲ್ಲಿ ಶೇಕಡಾ 42 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2014 ರಲ್ಲಿ ಟಿಕೆಟ್ ದರ ಹೆಚ್ಚಳ ಆಗಿತ್ತು ಮತ್ತೆ ಹೆಚ್ಚಳ ಆಗಿರಲಿಲ್ಲ.
• ಕೆಎಸ್ಆರ್ಟಿಸಿ: ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು, ಬಳಿಕ ಮತ್ತೆ ಹೆಚ್ಚಳ ಮಾಡಿಲ್ಲ.
• ಕೆಡಬ್ಲ್ಯೂಆರ್ಟಿಸಿ: ಶೇಕಡಾ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020 ರ ಫೆಬ್ರುವರಿಯಲ್ಲಿ ಕೊನೆಯದಾಗಿ ಕೆಡಬ್ಲ್ಯೂಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು.
• ಕೆಕೆಆರ್ಟಿಸಿ: ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲೇ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಕೆಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಿದ್ದು ಬಿಟ್ಟರೆ ಮತ್ತೆ ಮಾಡಿಲ್ಲ.
ಸದ್ಯ ರಾಜ್ಯದಲ್ಲಿ ಡಿಸೇಲ್ ಬೆಲೆ 88.99 ರೂ. ಇದ್ದ, 2020 ರಲ್ಲಿ ರಾಜ್ಯದಲ್ಲಿ 68 ರೂ ಡಿಸೇಲ್ ಇತ್ತು. ಅದು 2014 ರಲ್ಲಿ ರಾಜ್ಯದಲ್ಲಿ 54 ರಿಂದ 55 ರೂ. ಇತ್ತು.
ಟಿಕೆಟ್ ದರ ಏರಿಕೆ ಸಾರ್ವಜನಿಕರು ಆಕ್ರೋಶ
ಸಚಿವ ಸಂಪುಟ ಟಿಕೆಟ್ ದರ ಏರಿಕೆ ಮಾಡುತ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಜನರಿಂದ ಆಕ್ರೋಶ ಹೊರಹಾಕಿದ್ದಾರೆ. ಬಸ್ ದರ ಹೆಚ್ಚಳ ಎನ್ನುತ್ತೀರಾ, ಆದರೆ ಬಸ್ ಇಲ್ಲದೆ ನಿಂತು ಸಾಕಾಗಿದೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ದರ ಹೆಚ್ಚಳ ಮಾಡಬಾರದು. ಮಹಿಳೆಯರಿಗೆ ಉಚಿತ ಅಂದ್ರೆ, ನಮಗೂ ಉಚಿತ ಮಾಡಿ. ಅವರಿಗೊಂದು ನ್ಯಾಯ, ನಮಗೊಂದು ನ್ಯಾಯನಾ? ಮಾಡುವುದಿದ್ದರೆ ಎಲ್ಲರಿಗೂ ಒಂದೇ ಮಾಡಿ ಎಂದು ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!