ಬಸ್‌ ಪ್ರಯಾಣ ದರ ಶೇ 15ರಷ್ಟು ಏರಿಕೆ : ಕರ್ನಾಟಕದ ಜನರಿಗೆ ಬಿಗ್ ಶಾಕ್.

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ನಾಲ್ಕು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಅದರ ಬೆನ್ನಲ್ಲೇ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

• ಬಿಎಂಟಿಸಿ: ಈ ವರ್ಷ ಆಗಸ್ಟ್ನಲ್ಲಿ ಶೇಕಡಾ 42 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2014 ರಲ್ಲಿ ಟಿಕೆಟ್ ದರ ಹೆಚ್ಚಳ ಆಗಿತ್ತು ಮತ್ತೆ ಹೆಚ್ಚಳ ಆಗಿರಲಿಲ್ಲ.
• ಕೆಎಸ್ಆರ್ಟಿಸಿ: ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು, ಬಳಿಕ ಮತ್ತೆ ಹೆಚ್ಚಳ ಮಾಡಿಲ್ಲ.
• ಕೆಡಬ್ಲ್ಯೂಆರ್ಟಿಸಿ: ಶೇಕಡಾ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020 ರ ಫೆಬ್ರುವರಿಯಲ್ಲಿ ಕೊನೆಯದಾಗಿ ಕೆಡಬ್ಲ್ಯೂಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು.
• ಕೆಕೆಆರ್ಟಿಸಿ: ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲೇ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಕೆಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಿದ್ದು ಬಿಟ್ಟರೆ ಮತ್ತೆ ಮಾಡಿಲ್ಲ.
ಸದ್ಯ ರಾಜ್ಯದಲ್ಲಿ ಡಿಸೇಲ್ ಬೆಲೆ 88.99 ರೂ. ಇದ್ದ, 2020 ರಲ್ಲಿ ರಾಜ್ಯದಲ್ಲಿ 68 ರೂ ಡಿಸೇಲ್ ಇತ್ತು. ಅದು 2014 ರಲ್ಲಿ ರಾಜ್ಯದಲ್ಲಿ 54 ರಿಂದ 55 ರೂ. ಇತ್ತು.
ಟಿಕೆಟ್ ದರ ಏರಿಕೆ ಸಾರ್ವಜನಿಕರು ಆಕ್ರೋಶ
ಸಚಿವ ಸಂಪುಟ ಟಿಕೆಟ್ ದರ ಏರಿಕೆ ಮಾಡುತ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಜನರಿಂದ ಆಕ್ರೋಶ ಹೊರಹಾಕಿದ್ದಾರೆ. ಬಸ್ ದರ ಹೆಚ್ಚಳ ಎನ್ನುತ್ತೀರಾ, ಆದರೆ ಬಸ್ ಇಲ್ಲದೆ ನಿಂತು ಸಾಕಾಗಿದೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ದರ ಹೆಚ್ಚಳ ಮಾಡಬಾರದು. ಮಹಿಳೆಯರಿಗೆ ಉಚಿತ ಅಂದ್ರೆ, ನಮಗೂ ಉಚಿತ ಮಾಡಿ. ಅವರಿಗೊಂದು ನ್ಯಾಯ, ನಮಗೊಂದು ನ್ಯಾಯನಾ? ಮಾಡುವುದಿದ್ದರೆ ಎಲ್ಲರಿಗೂ ಒಂದೇ ಮಾಡಿ ಎಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!