ಬಾರಿ ಕುತೂಹಲ ಮೂಡಿಸಿದೆ, ಸಿಎಂ ಸಿದ್ದರಾಮಯ್ಯ ಕರೆದ ಸಿಎಲ್‌ಪಿ ಸಭೆ.

ಬೆಂಗಳೂರು, ಜ.13- ಆಡಳಿತಾ ರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟಗಳು ಮುಂದುವರೆ ದಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆದಿದ್ದು, ಈ ಸಭೆ ಸಾಕಷ್ಟು ಕುತೂ ಹಲಗಳನ್ನು ಮೂಡಿಸಿದೆ.
ಮುಖ್ಯಮಂತ್ರಿಗಳು ಸಭೆ ಕರೆದಿರುವ – ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಇರುವ ಬಣಗಳು ಸಕ್ರಿಯವಾಗಿವೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರ ಇರುವ ಬಣವು ಸಭೆ ವೇಳೆ ಸ್ಪಷ್ಟ ಸಂದೇಶವೊಂದನ್ನು ಪಕ್ಷದ ಹೈಕಮಾಂಡ್‌ಗೆ ಪರೋಕ್ಷವಾಗಿ ರವಾನಿಸುವ ಸಾಧ್ಯತೆಯಿದೆ.
ಈ ನಡುವೆ ಶನಿವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಮತ್ತು ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿದ್ದು, ಈ ಭೇಟಿ ಮಹತ್ವ ಪಡೆದು ಕೊಂಡಿದೆ. ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ನಾಯಕರ ಮಾತುಕತೆಗಳು ಸಿಎಲ್‌ಪಿ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಗಳಿವೆ ಎಂದು ಮೂಲಗಳು ತಿಳಿಸಿವೆ.

2023 ರಲ್ಲಿ ಮಾಡಿಕೊಂಡ ಒಪ್ಪಂದದ ಪ್ರಕಾರ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವಲ್ಲಿ ಯಶಸ್ವಿಯಾದ ಸಿದ್ದ ರಾಮಯ್ಯ ಅವರು ತಮ್ಮ ಅಧಿಕಾರಾವಧಿಯ ಎರಡು ವರ್ಷ ಪೂರ್ಣಗೊಳಿಸಿದ ನಂತರ ಅಧಿಕಾರ ಹಸ್ತಾಂತರಿಸಬೇಕಿದ್ದು, ಇದಕ್ಕೆ ಅವರು ಬದ್ಧರಾಗಿದ್ದಾರೆ. ಆದರೆ, ತಾವು ಆಯ್ಕೆ ಮಾಡಿದ ನಾಯಕ ಯಕ ಮುಖ್ಯಮಂತ್ರಿ ಯಾಗಬೇಕೆಂದು ಬಯಸುತ್ತಿದ್ದಾರೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಈ ಉದ್ದೇಶದಿಂದಲೇ ಪರಮೇಶ್ವರ್ ಅವರ ಪರ ಅಭಿಪ್ರಾಯ ಮೂಡಿಸಲು ಎಸ್‌ಸಿ/ಎಸ್‌ಟಿ ಶಾಸಕರ ಸಭೆ ನಡೆಸು ವಂತೆ ಸೂಚಿಸಿದ್ದರು ಎನ್ನಲಾಗಿದ್ದು, ಆದರೆ, ಶಿವಕುಮಾ‌ರ್ ಅವರು ಹೈಕ ಮಾಂಡ್ ಮೂಲಕ ಸಭೆಗೆ ಬ್ರೇಕ್ ಹಾಕಿಸಿದ್ದರು ಎನ್ನಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಡಾ.ಪರಮೇಶ್ವರ್ ಅವರಿಗೆ ಸಭೆ ನಡೆಸದಂತೆ ಸೂಚಿಸಿದ್ದರು. ಆದರೆ, ಅವರ ಸೂಚನೆಯನ್ನು ಪಾಲಿಸಿದ ಡಾ. ಪರಮೇಶ್ವರ್ ಅವರು, ನಾವು ಸಭೆಯನ್ನು ರದ್ದುಗೊಳಿಸಿಲ್ಲ, ಮುಂದೂಡಿ ದ್ದೇವಷ್ಟೇ. ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಹೇಳಿದ್ದರು. ಸಭೆ ವಿಚಾರವಾಗಿ ಸಚಿವ ರಾಜಣ್ಣ ಅವರು ಹೈಕಮಾಂಡ್ ಹಾಗೂ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾ ಹೊರಹಾಕಿದ್ದರು. ಸಿದ್ದರಾಮಯ್ಯ ಅವರ ಬೆಂಬಲಿಗರಾದ ರಾಜಣ್ಣ ಅವರು ಹೈಕಮಾಂಡ್‌ಗೆ ಸಂದೇಶ ರವಾನಿಸುವ ಸಲುವಾಗಿ ಈ ಹೇಳಿಕೆಗಳನ್ನು ನೀಡಿರ ಬಹುದು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಸಭೆ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲಾ ಅವರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದು. ಈ ವೇಳೆ ಸಿದ್ದು ಬಣದಲ್ಲಿರುವ ಡಾ.ಪರಮೇಶ್ವರ್, ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಇತರೆ ನಾಯಕರು ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ಸಿದ್ದರಾಮಯ್ಯ ಅವರ ಸಲಹೆಯಂತೆ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬೇಕೆಂದು ಒತ್ತಾಯಿಸುವ ಸಾಧ್ಯತೆಯಿದೆ. ನಾನು ಸುರ್ಜೆವಾಲಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಮತ್ತು ಎಸ್‌ಸಿ/ಎಸ್‌ಟಿ ಶಾಸಕರ ಸಭೆಯ ಉದ್ದೇಶವನ್ನೂ ವಿವರಿಸಿದ್ದೇನೆ. ಸುರ್ಜೆವಾಲಾ ಅವರು ನಗರಕ್ಕೆ ಬಂದಾಗ, ನಾನು ಅವರೊಂದಿಗೆ ಚರ್ಚೆ ನಡೆಸಿ, ಸಭೆ ನಡೆಸಲಾಗುವುದು ಎಂದು ಪರಮೇಶ್ವರ್ ಅವರು ತಿಳಿಸಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು