ಬಾರಿ ಕುತೂಹಲ ಮೂಡಿಸಿದೆ, ಸಿಎಂ ಸಿದ್ದರಾಮಯ್ಯ ಕರೆದ ಸಿಎಲ್‌ಪಿ ಸಭೆ.

ಬೆಂಗಳೂರು, ಜ.13- ಆಡಳಿತಾ ರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟಗಳು ಮುಂದುವರೆ ದಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆದಿದ್ದು, ಈ ಸಭೆ ಸಾಕಷ್ಟು ಕುತೂ ಹಲಗಳನ್ನು ಮೂಡಿಸಿದೆ.
ಮುಖ್ಯಮಂತ್ರಿಗಳು ಸಭೆ ಕರೆದಿರುವ – ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಇರುವ ಬಣಗಳು ಸಕ್ರಿಯವಾಗಿವೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರ ಇರುವ ಬಣವು ಸಭೆ ವೇಳೆ ಸ್ಪಷ್ಟ ಸಂದೇಶವೊಂದನ್ನು ಪಕ್ಷದ ಹೈಕಮಾಂಡ್‌ಗೆ ಪರೋಕ್ಷವಾಗಿ ರವಾನಿಸುವ ಸಾಧ್ಯತೆಯಿದೆ.
ಈ ನಡುವೆ ಶನಿವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಮತ್ತು ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿದ್ದು, ಈ ಭೇಟಿ ಮಹತ್ವ ಪಡೆದು ಕೊಂಡಿದೆ. ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ನಾಯಕರ ಮಾತುಕತೆಗಳು ಸಿಎಲ್‌ಪಿ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಗಳಿವೆ ಎಂದು ಮೂಲಗಳು ತಿಳಿಸಿವೆ.

2023 ರಲ್ಲಿ ಮಾಡಿಕೊಂಡ ಒಪ್ಪಂದದ ಪ್ರಕಾರ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವಲ್ಲಿ ಯಶಸ್ವಿಯಾದ ಸಿದ್ದ ರಾಮಯ್ಯ ಅವರು ತಮ್ಮ ಅಧಿಕಾರಾವಧಿಯ ಎರಡು ವರ್ಷ ಪೂರ್ಣಗೊಳಿಸಿದ ನಂತರ ಅಧಿಕಾರ ಹಸ್ತಾಂತರಿಸಬೇಕಿದ್ದು, ಇದಕ್ಕೆ ಅವರು ಬದ್ಧರಾಗಿದ್ದಾರೆ. ಆದರೆ, ತಾವು ಆಯ್ಕೆ ಮಾಡಿದ ನಾಯಕ ಯಕ ಮುಖ್ಯಮಂತ್ರಿ ಯಾಗಬೇಕೆಂದು ಬಯಸುತ್ತಿದ್ದಾರೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಈ ಉದ್ದೇಶದಿಂದಲೇ ಪರಮೇಶ್ವರ್ ಅವರ ಪರ ಅಭಿಪ್ರಾಯ ಮೂಡಿಸಲು ಎಸ್‌ಸಿ/ಎಸ್‌ಟಿ ಶಾಸಕರ ಸಭೆ ನಡೆಸು ವಂತೆ ಸೂಚಿಸಿದ್ದರು ಎನ್ನಲಾಗಿದ್ದು, ಆದರೆ, ಶಿವಕುಮಾ‌ರ್ ಅವರು ಹೈಕ ಮಾಂಡ್ ಮೂಲಕ ಸಭೆಗೆ ಬ್ರೇಕ್ ಹಾಕಿಸಿದ್ದರು ಎನ್ನಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಡಾ.ಪರಮೇಶ್ವರ್ ಅವರಿಗೆ ಸಭೆ ನಡೆಸದಂತೆ ಸೂಚಿಸಿದ್ದರು. ಆದರೆ, ಅವರ ಸೂಚನೆಯನ್ನು ಪಾಲಿಸಿದ ಡಾ. ಪರಮೇಶ್ವರ್ ಅವರು, ನಾವು ಸಭೆಯನ್ನು ರದ್ದುಗೊಳಿಸಿಲ್ಲ, ಮುಂದೂಡಿ ದ್ದೇವಷ್ಟೇ. ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಹೇಳಿದ್ದರು. ಸಭೆ ವಿಚಾರವಾಗಿ ಸಚಿವ ರಾಜಣ್ಣ ಅವರು ಹೈಕಮಾಂಡ್ ಹಾಗೂ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾ ಹೊರಹಾಕಿದ್ದರು. ಸಿದ್ದರಾಮಯ್ಯ ಅವರ ಬೆಂಬಲಿಗರಾದ ರಾಜಣ್ಣ ಅವರು ಹೈಕಮಾಂಡ್‌ಗೆ ಸಂದೇಶ ರವಾನಿಸುವ ಸಲುವಾಗಿ ಈ ಹೇಳಿಕೆಗಳನ್ನು ನೀಡಿರ ಬಹುದು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಸಭೆ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲಾ ಅವರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದು. ಈ ವೇಳೆ ಸಿದ್ದು ಬಣದಲ್ಲಿರುವ ಡಾ.ಪರಮೇಶ್ವರ್, ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಇತರೆ ನಾಯಕರು ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ಸಿದ್ದರಾಮಯ್ಯ ಅವರ ಸಲಹೆಯಂತೆ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬೇಕೆಂದು ಒತ್ತಾಯಿಸುವ ಸಾಧ್ಯತೆಯಿದೆ. ನಾನು ಸುರ್ಜೆವಾಲಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಮತ್ತು ಎಸ್‌ಸಿ/ಎಸ್‌ಟಿ ಶಾಸಕರ ಸಭೆಯ ಉದ್ದೇಶವನ್ನೂ ವಿವರಿಸಿದ್ದೇನೆ. ಸುರ್ಜೆವಾಲಾ ಅವರು ನಗರಕ್ಕೆ ಬಂದಾಗ, ನಾನು ಅವರೊಂದಿಗೆ ಚರ್ಚೆ ನಡೆಸಿ, ಸಭೆ ನಡೆಸಲಾಗುವುದು ಎಂದು ಪರಮೇಶ್ವರ್ ಅವರು ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!