ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್: ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ ಎಂದು ಹೇಳಿಕೆ ನೀಡಿದ್ದಾರೆ….

ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುವುದರ ಜೊತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ ಎಂದು ಕರೆ ಕೊಟ್ಟಿರುವ ವಿಡಿಯೋ ಈಗ ವೈರಲ್ ಆಗ್ತಾ ಇದೆ.

‘ಬೆಂಗಳೂರು ಎಂಬುದು ಭಾರತದ ಅಮೆರಿಕ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು’. ಹೀಗೆ ಹೇಳಿದ್ದು ಕರ್ನಾಟಕದ ವ್ಯಕ್ತಿಯಲ್ಲ! ಬೆಂಗಳೂರಿನವರಂತೂ ಅಲ್ಲವೇ ಅಲ್ಲ! ಅಮೆರಿಕದ ಮೂಲದ ಉದ್ಯಮಿ, ಕ್ಯಾಲಿಫೋರ್ನಿಯಾ ಬುರೀಟೊ ಸಂಸ್ಥಾಪಕ ಬರ್ಟ್ ಮುಲ್ಲರ್ ಕನ್ನಡ ಕಲಿಯುವಂತೆ ಕರೆ ನೀಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಸಂದರ್ಶನವೊಂದರಲ್ಲಿ ಕನ್ನಡದ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ.

ನಾವು ನಮ್ಮವರದ್ದಲ್ಲದ ಸ್ಥಳಕ್ಕೆ ಬಂದಾಗಲೆಲ್ಲಾ, ಆ ಸ್ಥಳದ ಸಂಸ್ಕೃತಿಯ ಬಗ್ಗೆ ಸ್ವಲ್ಪ ಕಲಿಯಲು ಪ್ರಯತ್ನಿಸಬೇಕು ಎಂದು ನಾನು ಭಾವಿಸುತ್ತೇನೆ. ನಾನು ಸ್ವಲ್ಪ ಸ್ವಲ್ಪ ಕನ್ನಡ ಭಾಷೆ ಮಾತನಾಡುತ್ತೇನೆ. ಕನ್ನಡ ಒಂದು ಅದ್ಭುತ ಭಾಷೆ. ಕರ್ನಾಟಕಕ್ಕೆ ಬರುವ ಎಲ್ಲರೂ ಕನ್ನಡ ಭಾಷೆ ಕಲಿಯಬೇಕು. ಮಾತನಾಡಬೇಕು ಎಂದು ಬರ್ಟ್ ಮುಲ್ಲರ್ ಹೇಳಿದ್ದಾರೆ.35 ವರ್ಷ ವಯಸ್ಸಿನ ಮುಲ್ಲರ್, 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದರು. ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ, ಮುಲ್ಲರ್ ಬೆಂಗಳೂರಿನಲ್ಲಿ ಉಳಿಯುವ ನಿರ್ಧಾರ ಕೈಗೊಂಡಿದ್ದರು. ನಂತರ ಇಲ್ಲಿ ಕ್ಯಾಲಿಫೋರ್ನಿಯಾ ಬುರೀಟೊ ರೆಸ್ಟೋರೆಂಟ್ಗಳನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾದರು ಎಂದು ವರದಿಯೊಂದು ತಿಳಿಸಿದೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್