ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್: ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ ಎಂದು ಹೇಳಿಕೆ ನೀಡಿದ್ದಾರೆ….

ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುವುದರ ಜೊತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ ಎಂದು ಕರೆ ಕೊಟ್ಟಿರುವ ವಿಡಿಯೋ ಈಗ ವೈರಲ್ ಆಗ್ತಾ ಇದೆ.

‘ಬೆಂಗಳೂರು ಎಂಬುದು ಭಾರತದ ಅಮೆರಿಕ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು’. ಹೀಗೆ ಹೇಳಿದ್ದು ಕರ್ನಾಟಕದ ವ್ಯಕ್ತಿಯಲ್ಲ! ಬೆಂಗಳೂರಿನವರಂತೂ ಅಲ್ಲವೇ ಅಲ್ಲ! ಅಮೆರಿಕದ ಮೂಲದ ಉದ್ಯಮಿ, ಕ್ಯಾಲಿಫೋರ್ನಿಯಾ ಬುರೀಟೊ ಸಂಸ್ಥಾಪಕ ಬರ್ಟ್ ಮುಲ್ಲರ್ ಕನ್ನಡ ಕಲಿಯುವಂತೆ ಕರೆ ನೀಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಸಂದರ್ಶನವೊಂದರಲ್ಲಿ ಕನ್ನಡದ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ.

ನಾವು ನಮ್ಮವರದ್ದಲ್ಲದ ಸ್ಥಳಕ್ಕೆ ಬಂದಾಗಲೆಲ್ಲಾ, ಆ ಸ್ಥಳದ ಸಂಸ್ಕೃತಿಯ ಬಗ್ಗೆ ಸ್ವಲ್ಪ ಕಲಿಯಲು ಪ್ರಯತ್ನಿಸಬೇಕು ಎಂದು ನಾನು ಭಾವಿಸುತ್ತೇನೆ. ನಾನು ಸ್ವಲ್ಪ ಸ್ವಲ್ಪ ಕನ್ನಡ ಭಾಷೆ ಮಾತನಾಡುತ್ತೇನೆ. ಕನ್ನಡ ಒಂದು ಅದ್ಭುತ ಭಾಷೆ. ಕರ್ನಾಟಕಕ್ಕೆ ಬರುವ ಎಲ್ಲರೂ ಕನ್ನಡ ಭಾಷೆ ಕಲಿಯಬೇಕು. ಮಾತನಾಡಬೇಕು ಎಂದು ಬರ್ಟ್ ಮುಲ್ಲರ್ ಹೇಳಿದ್ದಾರೆ.35 ವರ್ಷ ವಯಸ್ಸಿನ ಮುಲ್ಲರ್, 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದರು. ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ, ಮುಲ್ಲರ್ ಬೆಂಗಳೂರಿನಲ್ಲಿ ಉಳಿಯುವ ನಿರ್ಧಾರ ಕೈಗೊಂಡಿದ್ದರು. ನಂತರ ಇಲ್ಲಿ ಕ್ಯಾಲಿಫೋರ್ನಿಯಾ ಬುರೀಟೊ ರೆಸ್ಟೋರೆಂಟ್ಗಳನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾದರು ಎಂದು ವರದಿಯೊಂದು ತಿಳಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!