ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ ಉನ್ನತ ಸಮಿತಿ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಮೈಸೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಮೈಸೂರಿನ ಹೊರ ವರ್ತುಲ ರಸ್ತೆ (ಔuಣeಡಿ ಡಿiಟಿg ಡಿoಚಿಜ) ಒಳಗೆ ಬರುವ ಮೈಸೂರು ತಾಲ್ಲೂಕಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಇದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಸಹಾ ಅಭಿವೃದ್ದಿಗೊಂಡಿದ್ದು, ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸದರಿ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡಿಸುವ ಸಲುವಾಗಿ ಪಾಲಿಕೆಗೆ ಹೊಂದಿಕೊಂಡಂತೆ ಇರುವ ಗ್ರಾಮಗಳಲ್ಲಿನ ಬಡಾವಣೆಗಳನ್ನು ಪಾಲಿಕೆಗೆ ಸೇರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿರುತ್ತದೆ.
ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 4 ಮತ್ತು ಸೆಕ್ಷನ್ 500 ರಲ್ಲಿ ದೊಡ್ಡ ನಗರ ಪ್ರದೇಶಗಳಲ್ಲಿ ಕೆಲವೊಂದು ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪ್ರದೇಶಗಳನ್ನು ಸೇರಿಸಿಕೊಳ್ಳಲು ಹಾಗೂ ಕೈಬಿಡಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡುವ ಸಂಬಂಧ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆಯನ್ನು ಗುರುತಿಸಿ 2018ರ ವಾರ್ಡ್ ಆeಟimiಣಚಿioಟಿ ನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಈ ಕೆಳಕಂಡ ಗ್ರಾಮ ಪಂಚಾಯಿತಿಗಳನ್ನು, ಪಟ್ಟಣ ಪಂಚಾಯಿತಿಗಳನ್ನು, ಮತ್ತು ನಗರಸಭೆಯನ್ನು ಸೇರಿಸಿಕೊಳ್ಳುಬೇಕಾಗಿದೆ.

1 ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿ : 86.31.ಕಿ.ಮೀ
ಹೊಸದಾಗಿ ಸೇರ್ಪಡೆಗೊಳಿಸಲು ಪ್ರಸ್ತಾಪಿಸಿರುವ ಪ್ರದೇಶಗಳು
1 ಹೂಟಗಳ್ಳಿ ನಗರಸಭೆ 29.70 ಚ.ಕಿ.ಮೀ
2 ಶ್ರೀರಾಂಪುರ ಪಟ್ಟಣ ಪಂಚಾಯಿತಿ -17.84 ಚ.ಕಿ.ಮೀ
3 ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ- 22.11 ಚ.ಕಿ.ಮೀ
4 ಕಡಕೋಳ ಪಟ್ಟಣ ಪಂಚಾಯಿತಿ- 34.71 ಚ.ಕಿ.ಮೀ
5 ಬೋಗಾದಿ ಪಟ್ಟಣ ಪಂಚಾಯಿತಿ – 35.50 ಚ.ಕಿ.ಮೀ
6 ಚಾಮುಂಡಿಬೆಟ್ಟಗ್ರಾಮ ಪಂಚಾಯಿತಿ -6.00 ಚ.ಕಿ.ಮೀ
7 ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ- 14.70 ಚ.ಕಿ.ಮೀ
8 ಇಲವಾಲ ಗ್ರಾಮ ಪಂಚಾಯಿತಿ- 20.76 ಚ.ಕಿ.ಮೀ
9 ಆಲನಹಳ್ಳಿ ಗ್ರಾಮ ಪಂಚಾಯಿತಿ -5.69 ಚ.ಕಿ.ಮೀ

ಮೇಲ್ಕಂಡ ಪ್ರದೇಶಗಳ ಪೈಕಿ ಸರ್ಕಾರದಿಂದ ಅನುಮೋದನೆಗೊಂಡಿರುವ 2018ರ ವಾರ್ಡ್ ಆeಟimiಣಚಿioಟಿ ರನ್ವಯ ಹೂಟಗಳ್ಳಿ, ರಮ್ಮನಹಳ್ಳಿ ಹಾಗೂ ಶ್ರೀರಾಂಪುರ ಪ್ರದೇಶದ ಭಾಗಶಃ ಗ್ರಾಮಗಳು ಪಾಲಿಕೆಯ ಎಲ್ಲೆಯೊಳಗೆ ಬರುತ್ತಿದ್ದು, ಸರ್ಕಾರದ ಅಧಿಸೂಚನೆ ಅನ್ವಯ ಪಾಲಿಕೆಯ ವಾರ್ಡ್ ನಂ:1,2,3,4,5,20ರ ಹೆಬ್ಬಾಳು ಪ್ರದೇಶವು ಹೂಟಗಳ್ಳಿ ನಗರಸಭೆಯ ವ್ಯಾಪ್ತಿಗೆ ಸೇರಿರುತ್ತದೆ. ವಾರ್ಡ್ ನಂ: 35ರ ಸಾತಗಳ್ಳಿ ಪ್ರದೇಶವು ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗೆ ಹಾಗೂ ವಾರ್ಡ್ ನಂ:65ರ ಶ್ರೀರಾಂಪುರ ಪ್ರದೇಶವು ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಸೇರುತ್ತದೆ.
ಈ ಸಂಬಂಧ ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಕಛೇರಿಗಳಿಂದ ಈಗಾಗಲೇ ಸರ್ಕಾರದಿಂದ ಅನುಮೋದನೆಗೊಂಡಿರುವ-2018ರ ವಾರ್ಡ್ ಆeಟimiಣಚಿioಟಿ ನಕ್ಷೆಯನ್ವಯ ಪಾಲಿಕೆಯ ವ್ಯಾಪ್ತಿಯೊಳಗೆ ಸೇರಿರುವ ಪ್ರದೇಶಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಸದರಿ ಕಛೇರಿಗಳಿಂದ ತಿಳಿದುಬಂದಿರುತ್ತದೆ. ಗಡಿರೇಖೆಯು ಸರ್ಕಾರದ ಅಧಿಸೂಚನೆಯಂತೆ ಹಾಗೂ 2018 ವಾರ್ಡ್ ಆeಟimiಣಚಿioಟಿನಂತೆ ಸಮಗ್ರ ನಕ್ಷೆ ತಯಾರಿಸಲಾಗಿದೆ. ಅದರಂತೆ ಪಾಲಿಕೆಯ ಹಾಲಿ ವಿಸ್ತೀರ್ಣ 86.31 ಚ.ಕಿ.ಮೀ ಪ್ರದೇಶಕ್ಕೆ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ಓಳಗೊಂಡತೆ ಒಟ್ಟು 187.01ಚ.ಕಿ.ಮೀ ಪ್ರದೇಶವನ್ನು ಪಾಲಿಕೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿ ಪ್ರಸ್ತಾವಿತ ಬೃಹತ್ ಮೈಸೂರು ಮಹಾನಗರ ಪಾಲಿಕೆ ಒಟ್ಟಾರೆ ವಿಸ್ತೀರ್ಣವು 273.32 ಚ.ಕಿ.ಮೀ ಆಗುತ್ತದೆ.
ಮೇಲ್ಕಂಡ ಅಂಶಗಳಲ್ಲಿ ಹಿನ್ನಲೆಯಲ್ಲಿ, ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಯೋಜನಾಬದ್ದ ನಗರದ ಬೆಳವಣಿಗೆಗೆ ಅವಕಾಶ ಕಲ್ಪಿಸುವ ಸಲುವಾಗಿ ಮೈಸೂರು ಮಹಾನಗರ ಪಾಲಿಕೆಗೆ ಸೇರಿಸಿಕೊಂಡು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೆರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!