ಬೆಂಗಳೂರಿನಲ್ಲಿ ಸ್ನೇಹಿತರನ್ನು ಮಾಡಿಕೊಳ್ಳುವುದು ತುಂಬಾ ಕಷ್ಟವಂತೆ….

ಪ್ರವಾಸಕ್ಕೆಂದು ಬೆಂಗಳೂರಿಗೆ ಹೋದವರಿಗಿಂತ, ಕೆಲಸವನ್ನು ಅರಸಿ ಮನೆಯ ಕಷ್ಟವನ್ನು ನೀಗಲು ಹೊರಟವರೇ ಹೆಚ್ಚು. ಆದರೆ ಬೆಂಗಳೂರಿನಲ್ಲಿ ನಿವಾಸ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ ಎನ್ನುತ್ತಿದ್ದಾರೆ ಬೆಂಗಳೂರಿನಲ್ಲಿರುವ ನಿವಾಸಿಗಳು. ಉದ್ಯೋಗ ಅರಸಿಕೊಂಡು ಬೆಂಗಳೂರಿಗೆ ಬರುವ ಅದೆಷ್ಟೋ ಜನರಿಗೆ ಅಲ್ಲಿನ ವಾತಾವರಣ ಹೊಸತು, ಜನರು ಹೊಸಬರು. ಹೀಗಾಗಿ ಪ್ರಾರಂಭದ ದಿನಗಳಲ್ಲಿ ಹೊಸ ಜಾಗ ಹಾಗೂ ಜನರ ಜೊತೆಗೆ ಬೆರೆಯಲು ಕಷ್ಟ ಪಡುತ್ತಾರೆ. ಇದೀಗ ರೆಡ್ಡಿಟ್ ಬಳಕೆದಾರರೊಬ್ಬರು ತನ್ನ ಸ್ನೇಹಿತೆಯೂ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದು ಸ್ನೇಹಿತರಿಲ್ಲದೆ ಹೇಗೆ ಒಂಟಿತನವನ್ನು ಅನುಭವಿಸುತ್ತಿದ್ದಾಳೆ ಎಂದು ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಾಸ್ತವತೆಯನ್ನು ಒಪ್ಪಿಕೊಂಡಿದ್ದು ಕಾಮೆಂಟ್ ಗಳನ್ನು ಮಾಡಿದ್ದಾರೆ.

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು ಎನ್ನುವ ಮಾತಿದೆ. ಹೀಗಾಗಿ ಅನಿವಾರ್ಯ ಕಾರಣಕ್ಕೆ ಬೆಂಗಳೂರಿನಂತಹ ಪಟ್ಟಣಕ್ಕೆ ಕೆಲಸ ಹುಡುಕಿಕೊಂಡು ಹೋಗುವವರೇ ಹೆಚ್ಚು. ಕೆಲವರಂತೂ ಈ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಒದ್ದಾಡುವುದಿದೆ. ಜಂಜಾಟದ ಬದುಕಿನಲ್ಲಿ ಸ್ನೇಹ, ಪ್ರೀತಿ ಹಾಗೂ ಭಾವನೆಗಳ ಬಗ್ಗೆ ಜನ ತಲೆಕೆಡಿಸಿಕೊಳ್ಳುವುದೇ ಕಡಿಮೆ. ಆದರೆ ಬಳಕೆದಾರರು, ಬೆಂಗಳೂರಿಗೆ ಸ್ಥಳಾಂತರ ಗೊಂಡಿರುವ ತನ್ನ ಸ್ನೇಹಿತೆಯೊಬ್ಬಳು, ಸ್ನೇಹಿತರನ್ನು ಮಾಡಿಕೊಳ್ಳಲು ಎಷ್ಟು ಕಷ್ಟ ಪಡುತ್ತಿದ್ದಾಳೆ. ವಯಸ್ಕರಾದಾಗ ಸ್ನೇಹಿತರನ್ನು ಮಾಡಿಕೊಳ್ಳುವುದು ಎಷ್ಟು ಕಷ್ಟವಿದೆ ಎನ್ನುವ ಬಗೆಗಿನ ಪೋಸ್ಟ್ ವೊಂದನ್ನು ಹಂಚಿ ಕೊಂಡಿದ್ದಾರೆ.

ಸದಾ ಕೆಲಸದಲ್ಲಿ ಬ್ಯುಸಿಯಾಗಿದ್ದು, ಅದ್ಭುತ ಹಾಸ್ಯ ಪ್ರಜ್ಞೆಯನ್ನು ಹೊಂದಿರುವ ಜನರಲ್ಲಿ ಅವಳು ಕೂಡ ಒಬ್ಬಳು. ಆದರೆ ತನ್ನ ಭಾವನೆಗಳನ್ನು ಹೊರ ಹಾಕಿಕೊಳ್ಳದೇ ಒಂಟಿತನ ಅನುಭವಿಸುತ್ತ ಬೇಸೆತ್ತು ಹೋಗಿದ್ದಾಳೆ. ಅವಳು ಈ ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಒಂಟಿತನದಿಂದ ಮುಕ್ತವಾಗಲು ಮಹಿಳಾ ಸ್ನೇಹಿತರನ್ನು ಹೊಂದಲು ಹಾಗೂ ಸ್ನೇಹಿತರ ಗುಂಪಿನಲ್ಲಿ ತಾನು ಕೂಡ ಭಾಗಿಯಾಗಲು ಇಷ್ಟ ಪಡುತ್ತಾಳೆ. ಹಾಗಾಗಿ ನಾನು ನಿಮ್ಮ ಬಳಿ ಈ ಬಗ್ಗೆ ಕೇಳುತ್ತಿದ್ದು, ಬೆಂಗಳೂರಿನಲ್ಲಿ ನೀವು ಹೊಸ ಹೊಸ ಜನರನ್ನು ಮಹಿಳೆ ಯರು ಅಥವಾ ಪುರುಷರು ಹೇಗೆ ಭೇಟಿಯಾಗುತ್ತೀರಿ. ಸ್ನೇಹಿತರನ್ನು ಹೇಗೆ ಮಾಡಿಕೊಳ್ಳುತ್ತೀರಿ. ನಿಮ್ಮ ಬಳಿ ಯಾವುದೇ ಸಲಹೆಗಳಿದ್ದಲ್ಲಿ, ಸಮುದಾಯಗಳು, ಇವೆಂಟ್ ಗಳು, ಅಪ್ಲಿಕೇಶನ್ ಗಳು ಇದ್ದಲ್ಲಿ ಅದಲ್ಲೆವೂ ಸ್ವಾಗತಾರ್ಹವಾಗಿದೆ. ತನ್ನ ಸಮಯ ಹಾಗೂ ಭಾವನೆಗಳನ್ನು ಹಂಚಿಕೊಳ್ಳಲು ಯಾರು ಇಲ್ಲದೇ ಆಕೆ ಹೋರಾಡುವುದನ್ನು ನೋಡುವುದು ನಿಜಕ್ಕೂ ನನಗೆ ನೋವನ್ನುಂಟು ಮಾಡುತ್ತದೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!