ಬೆಂಗಳೂರಿನಲ್ಲಿ ಸ್ನೇಹಿತರನ್ನು ಮಾಡಿಕೊಳ್ಳುವುದು ತುಂಬಾ ಕಷ್ಟವಂತೆ….

ಪ್ರವಾಸಕ್ಕೆಂದು ಬೆಂಗಳೂರಿಗೆ ಹೋದವರಿಗಿಂತ, ಕೆಲಸವನ್ನು ಅರಸಿ ಮನೆಯ ಕಷ್ಟವನ್ನು ನೀಗಲು ಹೊರಟವರೇ ಹೆಚ್ಚು. ಆದರೆ ಬೆಂಗಳೂರಿನಲ್ಲಿ ನಿವಾಸ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ ಎನ್ನುತ್ತಿದ್ದಾರೆ ಬೆಂಗಳೂರಿನಲ್ಲಿರುವ ನಿವಾಸಿಗಳು. ಉದ್ಯೋಗ ಅರಸಿಕೊಂಡು ಬೆಂಗಳೂರಿಗೆ ಬರುವ ಅದೆಷ್ಟೋ ಜನರಿಗೆ ಅಲ್ಲಿನ ವಾತಾವರಣ ಹೊಸತು, ಜನರು ಹೊಸಬರು. ಹೀಗಾಗಿ ಪ್ರಾರಂಭದ ದಿನಗಳಲ್ಲಿ ಹೊಸ ಜಾಗ ಹಾಗೂ ಜನರ ಜೊತೆಗೆ ಬೆರೆಯಲು ಕಷ್ಟ ಪಡುತ್ತಾರೆ. ಇದೀಗ ರೆಡ್ಡಿಟ್ ಬಳಕೆದಾರರೊಬ್ಬರು ತನ್ನ ಸ್ನೇಹಿತೆಯೂ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದು ಸ್ನೇಹಿತರಿಲ್ಲದೆ ಹೇಗೆ ಒಂಟಿತನವನ್ನು ಅನುಭವಿಸುತ್ತಿದ್ದಾಳೆ ಎಂದು ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಾಸ್ತವತೆಯನ್ನು ಒಪ್ಪಿಕೊಂಡಿದ್ದು ಕಾಮೆಂಟ್ ಗಳನ್ನು ಮಾಡಿದ್ದಾರೆ.

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು ಎನ್ನುವ ಮಾತಿದೆ. ಹೀಗಾಗಿ ಅನಿವಾರ್ಯ ಕಾರಣಕ್ಕೆ ಬೆಂಗಳೂರಿನಂತಹ ಪಟ್ಟಣಕ್ಕೆ ಕೆಲಸ ಹುಡುಕಿಕೊಂಡು ಹೋಗುವವರೇ ಹೆಚ್ಚು. ಕೆಲವರಂತೂ ಈ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಒದ್ದಾಡುವುದಿದೆ. ಜಂಜಾಟದ ಬದುಕಿನಲ್ಲಿ ಸ್ನೇಹ, ಪ್ರೀತಿ ಹಾಗೂ ಭಾವನೆಗಳ ಬಗ್ಗೆ ಜನ ತಲೆಕೆಡಿಸಿಕೊಳ್ಳುವುದೇ ಕಡಿಮೆ. ಆದರೆ ಬಳಕೆದಾರರು, ಬೆಂಗಳೂರಿಗೆ ಸ್ಥಳಾಂತರ ಗೊಂಡಿರುವ ತನ್ನ ಸ್ನೇಹಿತೆಯೊಬ್ಬಳು, ಸ್ನೇಹಿತರನ್ನು ಮಾಡಿಕೊಳ್ಳಲು ಎಷ್ಟು ಕಷ್ಟ ಪಡುತ್ತಿದ್ದಾಳೆ. ವಯಸ್ಕರಾದಾಗ ಸ್ನೇಹಿತರನ್ನು ಮಾಡಿಕೊಳ್ಳುವುದು ಎಷ್ಟು ಕಷ್ಟವಿದೆ ಎನ್ನುವ ಬಗೆಗಿನ ಪೋಸ್ಟ್ ವೊಂದನ್ನು ಹಂಚಿ ಕೊಂಡಿದ್ದಾರೆ.

ಸದಾ ಕೆಲಸದಲ್ಲಿ ಬ್ಯುಸಿಯಾಗಿದ್ದು, ಅದ್ಭುತ ಹಾಸ್ಯ ಪ್ರಜ್ಞೆಯನ್ನು ಹೊಂದಿರುವ ಜನರಲ್ಲಿ ಅವಳು ಕೂಡ ಒಬ್ಬಳು. ಆದರೆ ತನ್ನ ಭಾವನೆಗಳನ್ನು ಹೊರ ಹಾಕಿಕೊಳ್ಳದೇ ಒಂಟಿತನ ಅನುಭವಿಸುತ್ತ ಬೇಸೆತ್ತು ಹೋಗಿದ್ದಾಳೆ. ಅವಳು ಈ ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಒಂಟಿತನದಿಂದ ಮುಕ್ತವಾಗಲು ಮಹಿಳಾ ಸ್ನೇಹಿತರನ್ನು ಹೊಂದಲು ಹಾಗೂ ಸ್ನೇಹಿತರ ಗುಂಪಿನಲ್ಲಿ ತಾನು ಕೂಡ ಭಾಗಿಯಾಗಲು ಇಷ್ಟ ಪಡುತ್ತಾಳೆ. ಹಾಗಾಗಿ ನಾನು ನಿಮ್ಮ ಬಳಿ ಈ ಬಗ್ಗೆ ಕೇಳುತ್ತಿದ್ದು, ಬೆಂಗಳೂರಿನಲ್ಲಿ ನೀವು ಹೊಸ ಹೊಸ ಜನರನ್ನು ಮಹಿಳೆ ಯರು ಅಥವಾ ಪುರುಷರು ಹೇಗೆ ಭೇಟಿಯಾಗುತ್ತೀರಿ. ಸ್ನೇಹಿತರನ್ನು ಹೇಗೆ ಮಾಡಿಕೊಳ್ಳುತ್ತೀರಿ. ನಿಮ್ಮ ಬಳಿ ಯಾವುದೇ ಸಲಹೆಗಳಿದ್ದಲ್ಲಿ, ಸಮುದಾಯಗಳು, ಇವೆಂಟ್ ಗಳು, ಅಪ್ಲಿಕೇಶನ್ ಗಳು ಇದ್ದಲ್ಲಿ ಅದಲ್ಲೆವೂ ಸ್ವಾಗತಾರ್ಹವಾಗಿದೆ. ತನ್ನ ಸಮಯ ಹಾಗೂ ಭಾವನೆಗಳನ್ನು ಹಂಚಿಕೊಳ್ಳಲು ಯಾರು ಇಲ್ಲದೇ ಆಕೆ ಹೋರಾಡುವುದನ್ನು ನೋಡುವುದು ನಿಜಕ್ಕೂ ನನಗೆ ನೋವನ್ನುಂಟು ಮಾಡುತ್ತದೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!