ಬೆಂಗಳೂರಿನಲ್ಲಿ ಸ್ನೇಹಿತರನ್ನು ಮಾಡಿಕೊಳ್ಳುವುದು ತುಂಬಾ ಕಷ್ಟವಂತೆ….

ಪ್ರವಾಸಕ್ಕೆಂದು ಬೆಂಗಳೂರಿಗೆ ಹೋದವರಿಗಿಂತ, ಕೆಲಸವನ್ನು ಅರಸಿ ಮನೆಯ ಕಷ್ಟವನ್ನು ನೀಗಲು ಹೊರಟವರೇ ಹೆಚ್ಚು. ಆದರೆ ಬೆಂಗಳೂರಿನಲ್ಲಿ ನಿವಾಸ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ ಎನ್ನುತ್ತಿದ್ದಾರೆ ಬೆಂಗಳೂರಿನಲ್ಲಿರುವ ನಿವಾಸಿಗಳು. ಉದ್ಯೋಗ ಅರಸಿಕೊಂಡು ಬೆಂಗಳೂರಿಗೆ ಬರುವ ಅದೆಷ್ಟೋ ಜನರಿಗೆ ಅಲ್ಲಿನ ವಾತಾವರಣ ಹೊಸತು, ಜನರು ಹೊಸಬರು. ಹೀಗಾಗಿ ಪ್ರಾರಂಭದ ದಿನಗಳಲ್ಲಿ ಹೊಸ ಜಾಗ ಹಾಗೂ ಜನರ ಜೊತೆಗೆ ಬೆರೆಯಲು ಕಷ್ಟ ಪಡುತ್ತಾರೆ. ಇದೀಗ ರೆಡ್ಡಿಟ್ ಬಳಕೆದಾರರೊಬ್ಬರು ತನ್ನ ಸ್ನೇಹಿತೆಯೂ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದು ಸ್ನೇಹಿತರಿಲ್ಲದೆ ಹೇಗೆ ಒಂಟಿತನವನ್ನು ಅನುಭವಿಸುತ್ತಿದ್ದಾಳೆ ಎಂದು ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಾಸ್ತವತೆಯನ್ನು ಒಪ್ಪಿಕೊಂಡಿದ್ದು ಕಾಮೆಂಟ್ ಗಳನ್ನು ಮಾಡಿದ್ದಾರೆ.

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು ಎನ್ನುವ ಮಾತಿದೆ. ಹೀಗಾಗಿ ಅನಿವಾರ್ಯ ಕಾರಣಕ್ಕೆ ಬೆಂಗಳೂರಿನಂತಹ ಪಟ್ಟಣಕ್ಕೆ ಕೆಲಸ ಹುಡುಕಿಕೊಂಡು ಹೋಗುವವರೇ ಹೆಚ್ಚು. ಕೆಲವರಂತೂ ಈ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಒದ್ದಾಡುವುದಿದೆ. ಜಂಜಾಟದ ಬದುಕಿನಲ್ಲಿ ಸ್ನೇಹ, ಪ್ರೀತಿ ಹಾಗೂ ಭಾವನೆಗಳ ಬಗ್ಗೆ ಜನ ತಲೆಕೆಡಿಸಿಕೊಳ್ಳುವುದೇ ಕಡಿಮೆ. ಆದರೆ ಬಳಕೆದಾರರು, ಬೆಂಗಳೂರಿಗೆ ಸ್ಥಳಾಂತರ ಗೊಂಡಿರುವ ತನ್ನ ಸ್ನೇಹಿತೆಯೊಬ್ಬಳು, ಸ್ನೇಹಿತರನ್ನು ಮಾಡಿಕೊಳ್ಳಲು ಎಷ್ಟು ಕಷ್ಟ ಪಡುತ್ತಿದ್ದಾಳೆ. ವಯಸ್ಕರಾದಾಗ ಸ್ನೇಹಿತರನ್ನು ಮಾಡಿಕೊಳ್ಳುವುದು ಎಷ್ಟು ಕಷ್ಟವಿದೆ ಎನ್ನುವ ಬಗೆಗಿನ ಪೋಸ್ಟ್ ವೊಂದನ್ನು ಹಂಚಿ ಕೊಂಡಿದ್ದಾರೆ.

ಸದಾ ಕೆಲಸದಲ್ಲಿ ಬ್ಯುಸಿಯಾಗಿದ್ದು, ಅದ್ಭುತ ಹಾಸ್ಯ ಪ್ರಜ್ಞೆಯನ್ನು ಹೊಂದಿರುವ ಜನರಲ್ಲಿ ಅವಳು ಕೂಡ ಒಬ್ಬಳು. ಆದರೆ ತನ್ನ ಭಾವನೆಗಳನ್ನು ಹೊರ ಹಾಕಿಕೊಳ್ಳದೇ ಒಂಟಿತನ ಅನುಭವಿಸುತ್ತ ಬೇಸೆತ್ತು ಹೋಗಿದ್ದಾಳೆ. ಅವಳು ಈ ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಒಂಟಿತನದಿಂದ ಮುಕ್ತವಾಗಲು ಮಹಿಳಾ ಸ್ನೇಹಿತರನ್ನು ಹೊಂದಲು ಹಾಗೂ ಸ್ನೇಹಿತರ ಗುಂಪಿನಲ್ಲಿ ತಾನು ಕೂಡ ಭಾಗಿಯಾಗಲು ಇಷ್ಟ ಪಡುತ್ತಾಳೆ. ಹಾಗಾಗಿ ನಾನು ನಿಮ್ಮ ಬಳಿ ಈ ಬಗ್ಗೆ ಕೇಳುತ್ತಿದ್ದು, ಬೆಂಗಳೂರಿನಲ್ಲಿ ನೀವು ಹೊಸ ಹೊಸ ಜನರನ್ನು ಮಹಿಳೆ ಯರು ಅಥವಾ ಪುರುಷರು ಹೇಗೆ ಭೇಟಿಯಾಗುತ್ತೀರಿ. ಸ್ನೇಹಿತರನ್ನು ಹೇಗೆ ಮಾಡಿಕೊಳ್ಳುತ್ತೀರಿ. ನಿಮ್ಮ ಬಳಿ ಯಾವುದೇ ಸಲಹೆಗಳಿದ್ದಲ್ಲಿ, ಸಮುದಾಯಗಳು, ಇವೆಂಟ್ ಗಳು, ಅಪ್ಲಿಕೇಶನ್ ಗಳು ಇದ್ದಲ್ಲಿ ಅದಲ್ಲೆವೂ ಸ್ವಾಗತಾರ್ಹವಾಗಿದೆ. ತನ್ನ ಸಮಯ ಹಾಗೂ ಭಾವನೆಗಳನ್ನು ಹಂಚಿಕೊಳ್ಳಲು ಯಾರು ಇಲ್ಲದೇ ಆಕೆ ಹೋರಾಡುವುದನ್ನು ನೋಡುವುದು ನಿಜಕ್ಕೂ ನನಗೆ ನೋವನ್ನುಂಟು ಮಾಡುತ್ತದೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!