ಬೆಂಗಳೂರಿನ ತನ್ನ ಸ್ನೇಹಿತೆಯೊಂದಿಗೆ ಸೇರಿ ಮುದ್ದಾಗಿ ಕನ್ನಡ ಪದ್ಯ ಹಾಡಿದ ರಷ್ಯಾದ ಹುಡುಗಿ.

ಕರ್ನಾಟಕದಲ್ಲಿದ್ದು ಕನ್ನಡ ಮಾತನಾಡದೇ ಇರುವವರ ಮಧ್ಯೆ ರಷ್ಯಾದ ಪುಟ್ಟ ಹುಡುಗಿ ಕನ್ನಡ ಪದ್ಯವನ್ನು ಲೀಲಾಜಾಲವಾಗಿ ಹೇಳಿ ಎಲ್ಲರ ಮೆಚ್ಚುಗೆ ಪಡೆದಿದ್ದಾಳೆ. ಕರ್ನಾಟಕದವರಿಗಿಂತ ವಿದೇಶಿಗರಿಗೆ ಕನ್ನಡದ ಮೇಲೆ ಹೆಚ್ಚು ಅಭಿಮಾನ ಇದೆ ಎಂಬುದು ಕೆಲವೊಂದು ವಿಡಿಯೋಗಳ ಮೂಲಕ ಸಾಬೀತು ಆಗುತ್ತಿದೆ. ಕನ್ನಡ ಅಭಿಮಾನಕ್ಕೆ ಹಾಗೂ ಭಾಷೆಯನ್ನು ಕಲಿಯಬೇಕು ಎಂಬ ಹಂಬಲ ವಿದೇಶಿಗರಿಗೆ ಇದೆ ಎಂಬುದನ್ನು ಈ ವಿಡಿಯೋ ಹೇಳುತ್ತದೆ. ಇದೀಗ ರಷ್ಯಾದ ಪುಟ್ಟ ಹುಡುಗಿ ಬೆಂಗಳೂರಿನ ತನ್ನ ಸ್ನೇಹಿತೆ ಜತೆ ಸೇರಿ ಮುದ್ದಾಗಿ ಕನ್ನಡದ ಕವಿತೆಯನ್ನು ಮುದ್ದಾಗಿ ಹಾಡಿದ್ದಾಳೆ. ಈ ಕುರಿತಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗ್ತಾ ಇದೆ.

ಭಾರತಕ್ಕೆ ಬಂದ ಅದೆಷ್ಟೋ ವಿದೇಶಿಗರು ಭಾರತದ ಸಂಸ್ಕೃತಿ, ಆಚಾರ ವಿಚಾರಗಳನ್ನು ಅನುಸರಿಸಿಕೊಂಡು ಹೋಗುವುದರ ಜತೆಗೆ ಭಾಷೆಗಳನ್ನು ಕಲಿಯುತ್ತಾರೆ. ಕರ್ನಾಟಕದಲ್ಲೂ ಇಂತಹ ಘಟನೆಗಳಿಗೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ. ಕನ್ನಡ ಹಾಡುಗಳನ್ನು ಹಾಡುವುದು, ಕನ್ನಡ ಮಾತನಾಡುವುದು, ಅದನ್ನು ಕಲಿಯುವ ಆಸಕ್ತಿ ತೋರಿಸುವುದು ಹೀಗೆ ಅನೇಕ ವಿಚಾರಗಳು ವೈರಲ್ ಆಗುತ್ತಲೇ ಇರುತ್ತದೆ. ಇದೀಗ ವಿಡಿಯೋವೊಂದು ಭಾರೀ ವೈರಲ್ ಆಗಿದ್ದು, ಕನ್ನಡಿಗರ ಮನಸ್ಸು ಈ ವಿಡಿಯೋ ಗೆದ್ದಿದೆ.
ಬೆಂಗಳೂರಿನಲ್ಲಿ ರಷ್ಯಾದ ಹುಡುಗಿ ಹಾಗೂ ಆಕೆಯ ಭಾರತೀಯ ಸ್ನೇಹಿತ ಜತೆಗೆ ಸೈಕಲ್ ಓಡಿಸುತ್ತ, ಕನ್ನಡ ಕವಿತೆಯನ್ನು ಹಾಡಿದ್ದಾಳೆ. ಇದೀಗ ಕನ್ನಡಿಗರ ಹೃದಯಕ್ಕೆ ಮುಟ್ಟಿದೆ. ಈ ರಷ್ಯಾದ ಹುಡುಗಿಯ ತಾಯಿ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ಕನ್ನಡ ಪದ್ಯಕ್ಕೆ ಮೀಸಲಾಗಿರದೇ, ಅವರ ಅಂತರ್-ಸಾಂಸ್ಕೃತಿಕ ಸ್ನೇಹ ಮತ್ತು ಭಾಷಾ ಬಾಂಧವ್ಯದ ಬಗ್ಗೆ ಹೇಳಿದೆ.

 

ಈ ವಿಡಿಯೋದಲ್ಲಿ ರಷ್ಯಾದ ಹುಡುಗಿಯ ತಾಯಿ ಹೇಳಿರುವಂತೆ, ಇವರಿಬ್ಬರೂ ಮೂರು ವರ್ಷಗಳಿಂದ ಸಹಪಾಠಿಗಳು ಮತ್ತು ಆಪ್ತ ಸ್ನೇಹಿತರಾಗಿದ್ದಾರೆ. ಸೈಕಲ್ನಲ್ಲಿ ಆಟವಾಡುತ್ತ, ಕನ್ನಡದ ಖ್ಯಾತ ಪದ್ಯ “ಬಣ್ಣದ ಹಕ್ಕಿ” ಎಂಬ ಹಾಡನ್ನು ಇಬ್ಬರು ಒಟ್ಟಿಗೆ ಹಾಡಿದ್ದಾರೆ. ಮಕ್ಕಳ ಕನ್ನಡ ಹಾಡನ್ನು ಕೇಳಿ ನಮಗೆ ಖುಷಿಯಾಗಿದೆ ಎಂದು ಈ ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋದ ಜತೆಗೆ ಇನ್‌ಸ್ಟಾಗ್ರಾಮ್‌ನಲ್ಲಿ 2022ರಲ್ಲಿ ಹಂಚಿಕೊಂಡ ಫೋಟೋ ಕೂಡ ವೈರಲ್ ಆಗಿದೆ. ರಷ್ಯಾದ ಕುಟುಂಬ ಭಾರತಕ್ಕೆ ಸ್ಥಳಾಂತರಗೊಂಡಾಗಿನಿಂದ ಇವರಿಬ್ಬರ ಸ್ನೇಹ ಬೆಳೆದುಕೊಂಡಿದೆ ಎಂದು ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!