ಬೆಂಗಳೂರಿನ ತನ್ನ ಸ್ನೇಹಿತೆಯೊಂದಿಗೆ ಸೇರಿ ಮುದ್ದಾಗಿ ಕನ್ನಡ ಪದ್ಯ ಹಾಡಿದ ರಷ್ಯಾದ ಹುಡುಗಿ.

ಕರ್ನಾಟಕದಲ್ಲಿದ್ದು ಕನ್ನಡ ಮಾತನಾಡದೇ ಇರುವವರ ಮಧ್ಯೆ ರಷ್ಯಾದ ಪುಟ್ಟ ಹುಡುಗಿ ಕನ್ನಡ ಪದ್ಯವನ್ನು ಲೀಲಾಜಾಲವಾಗಿ ಹೇಳಿ ಎಲ್ಲರ ಮೆಚ್ಚುಗೆ ಪಡೆದಿದ್ದಾಳೆ. ಕರ್ನಾಟಕದವರಿಗಿಂತ ವಿದೇಶಿಗರಿಗೆ ಕನ್ನಡದ ಮೇಲೆ ಹೆಚ್ಚು ಅಭಿಮಾನ ಇದೆ ಎಂಬುದು ಕೆಲವೊಂದು ವಿಡಿಯೋಗಳ ಮೂಲಕ ಸಾಬೀತು ಆಗುತ್ತಿದೆ. ಕನ್ನಡ ಅಭಿಮಾನಕ್ಕೆ ಹಾಗೂ ಭಾಷೆಯನ್ನು ಕಲಿಯಬೇಕು ಎಂಬ ಹಂಬಲ ವಿದೇಶಿಗರಿಗೆ ಇದೆ ಎಂಬುದನ್ನು ಈ ವಿಡಿಯೋ ಹೇಳುತ್ತದೆ. ಇದೀಗ ರಷ್ಯಾದ ಪುಟ್ಟ ಹುಡುಗಿ ಬೆಂಗಳೂರಿನ ತನ್ನ ಸ್ನೇಹಿತೆ ಜತೆ ಸೇರಿ ಮುದ್ದಾಗಿ ಕನ್ನಡದ ಕವಿತೆಯನ್ನು ಮುದ್ದಾಗಿ ಹಾಡಿದ್ದಾಳೆ. ಈ ಕುರಿತಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗ್ತಾ ಇದೆ.

ಭಾರತಕ್ಕೆ ಬಂದ ಅದೆಷ್ಟೋ ವಿದೇಶಿಗರು ಭಾರತದ ಸಂಸ್ಕೃತಿ, ಆಚಾರ ವಿಚಾರಗಳನ್ನು ಅನುಸರಿಸಿಕೊಂಡು ಹೋಗುವುದರ ಜತೆಗೆ ಭಾಷೆಗಳನ್ನು ಕಲಿಯುತ್ತಾರೆ. ಕರ್ನಾಟಕದಲ್ಲೂ ಇಂತಹ ಘಟನೆಗಳಿಗೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ. ಕನ್ನಡ ಹಾಡುಗಳನ್ನು ಹಾಡುವುದು, ಕನ್ನಡ ಮಾತನಾಡುವುದು, ಅದನ್ನು ಕಲಿಯುವ ಆಸಕ್ತಿ ತೋರಿಸುವುದು ಹೀಗೆ ಅನೇಕ ವಿಚಾರಗಳು ವೈರಲ್ ಆಗುತ್ತಲೇ ಇರುತ್ತದೆ. ಇದೀಗ ವಿಡಿಯೋವೊಂದು ಭಾರೀ ವೈರಲ್ ಆಗಿದ್ದು, ಕನ್ನಡಿಗರ ಮನಸ್ಸು ಈ ವಿಡಿಯೋ ಗೆದ್ದಿದೆ.
ಬೆಂಗಳೂರಿನಲ್ಲಿ ರಷ್ಯಾದ ಹುಡುಗಿ ಹಾಗೂ ಆಕೆಯ ಭಾರತೀಯ ಸ್ನೇಹಿತ ಜತೆಗೆ ಸೈಕಲ್ ಓಡಿಸುತ್ತ, ಕನ್ನಡ ಕವಿತೆಯನ್ನು ಹಾಡಿದ್ದಾಳೆ. ಇದೀಗ ಕನ್ನಡಿಗರ ಹೃದಯಕ್ಕೆ ಮುಟ್ಟಿದೆ. ಈ ರಷ್ಯಾದ ಹುಡುಗಿಯ ತಾಯಿ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ಕನ್ನಡ ಪದ್ಯಕ್ಕೆ ಮೀಸಲಾಗಿರದೇ, ಅವರ ಅಂತರ್-ಸಾಂಸ್ಕೃತಿಕ ಸ್ನೇಹ ಮತ್ತು ಭಾಷಾ ಬಾಂಧವ್ಯದ ಬಗ್ಗೆ ಹೇಳಿದೆ.

 

ಈ ವಿಡಿಯೋದಲ್ಲಿ ರಷ್ಯಾದ ಹುಡುಗಿಯ ತಾಯಿ ಹೇಳಿರುವಂತೆ, ಇವರಿಬ್ಬರೂ ಮೂರು ವರ್ಷಗಳಿಂದ ಸಹಪಾಠಿಗಳು ಮತ್ತು ಆಪ್ತ ಸ್ನೇಹಿತರಾಗಿದ್ದಾರೆ. ಸೈಕಲ್ನಲ್ಲಿ ಆಟವಾಡುತ್ತ, ಕನ್ನಡದ ಖ್ಯಾತ ಪದ್ಯ “ಬಣ್ಣದ ಹಕ್ಕಿ” ಎಂಬ ಹಾಡನ್ನು ಇಬ್ಬರು ಒಟ್ಟಿಗೆ ಹಾಡಿದ್ದಾರೆ. ಮಕ್ಕಳ ಕನ್ನಡ ಹಾಡನ್ನು ಕೇಳಿ ನಮಗೆ ಖುಷಿಯಾಗಿದೆ ಎಂದು ಈ ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋದ ಜತೆಗೆ ಇನ್‌ಸ್ಟಾಗ್ರಾಮ್‌ನಲ್ಲಿ 2022ರಲ್ಲಿ ಹಂಚಿಕೊಂಡ ಫೋಟೋ ಕೂಡ ವೈರಲ್ ಆಗಿದೆ. ರಷ್ಯಾದ ಕುಟುಂಬ ಭಾರತಕ್ಕೆ ಸ್ಥಳಾಂತರಗೊಂಡಾಗಿನಿಂದ ಇವರಿಬ್ಬರ ಸ್ನೇಹ ಬೆಳೆದುಕೊಂಡಿದೆ ಎಂದು ಹೇಳಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು