ಬೆಂಗಳೂರಿನ ರಿಕ್ಷಾ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ: ಬೆಂಗಳೂರಿನ ಆರ್ಥಿಕತೆ ನಡೆಯುವುದೇ ನಮ್ಮಿಂದ ಎಂಬ ಅಹಂಕಾರದ ಮಾತುಗಳನ್ನಾಡಿದ್ದಾಳೆ!!

ನಮ್ಮ ರಾಜ್ಯಕ್ಕೆ ಬಂದು ನೆಲೆಸಿರುವ ಉತ್ತರ ಭಾರತೀಯರು ಕನ್ನಡ ಮಾತಾಡಲ್ಲ, ಸೇರಿದಂತೆ ಇನ್ನಿತ್ತರ ವಿಚಾರದಲ್ಲಿ ಕನ್ನಡಿಗರ ಜೊತೆಯಲ್ಲಿ ಜಗಳಕ್ಕೆ ಇಳಿಯುವುದು ಹೊಸದೇನಲ್ಲ. ಈಗಾಗಲೇ ಇಂತಹ ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಹಿಂದಿ ಮಾತನಾಡುವ ಮಹಿಳೆಯೊಬ್ಬಳು ಆಟೋ ಬಾಡಿಗೆ ವಿಚಾರಕ್ಕೆ ಬೆಂಗಳೂರಿನ ಆಟೋ ಚಾಲಕನ ಜೊತೆಗೆ ಜಗಳಕ್ಕೆ ಇಳಿದಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ಮಹಿಳೆಯ ಅತಿರೇಕದ ವರ್ತನೆಗೆ ಬಳಕೆದಾರರು ಗರಂ ಆಗಿದ್ದು ಖಾರವಾಗಿಯೇ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.ವಿವಿಧ ರಾಜ್ಯದಿಂದ ಬಂದು ಕರ್ನಾಟಕ ದಲ್ಲಿ ನೆಲೆಸುವ ಉತ್ತರ ಭಾರತೀಯರು ಕನ್ನಡಿಗರ ಮೇಲೆ ದರ್ಪ ತೋರಿಸುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಕಳೆದ ವಾರವಷ್ಟೇ ಬಿಹಾರ ಮೂಲದ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಬಾರಿಸಿದ ಘಟನೆಯೂ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಹಿಂದಿ ಮಹಿಳೆಯೂ ಆಟೋ ಚಾಲಕನ ಜೊತೆಗೆ ಕಿರಿಕಿರಿ ಮಾಡಿಕೊಂಡಿದ್ದಾಳೆ.

ಹೌದು, ಬೆಂಗಳೂರಿನ ಆಟೋ ಚಾಲಕ ನ ಜೊತೆಗೆ ಆಟೋ ಚಾರ್ಜ್ ವಿಚಾರವಾಗಿ ಶುರುವಾದ ಜಗಳವು, ಕನ್ನಡದಲ್ಲಿ ಮಾತನಾಡು ಎನ್ನುವ ಹಂತಕ್ಕೆ ಹೋಗಿದೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಮಹಿಳೆಯೊಬ್ಬರು ಆಟೋ ಚಾಲಕನ ಜೊತೆಗೆ ಆಟೋ ಬಾಡಿಗೆ ವಿಚಾರವಾಗಿ ಜಗಳ ಆಡುತ್ತಿರುವುದನ್ನು ಕಾಣಬಹುದು. ಆಟೋ ಹತ್ತುವ ಸಮಯದಲ್ಲಿ 296 ರೂ ತೋರಿಸುತ್ತಿತ್ತು, ಈಗ 390 ರೂ ಆಟೋ ಬಾಡಿಗೆ ಕೇಳ್ತಾ ಇದ್ದೀರಾ ಎಂದು ಪ್ರಶ್ನೆ ಮಾಡಿದ್ದಾಳೆ. ಈ ವೇಳೆಯಲ್ಲಿ ಆಟೋ ಅಪ್ಲಿಕೇಶನ್ ನಲ್ಲಿ ಎಷ್ಟು ತೋರಿಸುತ್ತಿದೆ ನೋಡಿ ಎಂದು ಆಟೋ ಚಾಲಕನು ತೋರಿಸಿದ್ದು, ಆದರೆ ಮಾತಿಗೆ ಮಾತು ಬೆಳೆದು ಈ ಜಗಳವು ಅತಿರೇಕಕ್ಕೆ ತಲುಪಿದೆ. ಆಟೋ ಚಾಲಕನು ಏನೇ ಹೇಳಿದ್ರೂ ಕೂಡ ಕ್ಯಾರೇ ಎನ್ನದೇ ಹಿಂದಿ ಮಹಿಳೆಯೂ ಮಾತನಾಡಿದ್ದಾಳೆ. ಈ ವೇಳೆಯಲ್ಲಿ ಕೋಪಗೊಂಡ ಆಟೋ ಚಾಲಕನು ಕನ್ನಡದಲ್ಲಿ ಮಾತನಾಡು ಎಂದಿದ್ದಾನೆ. ಹೀಗೆನ್ನುತ್ತಿದ್ದಂತೆ ಸಿಟ್ಟಿನಿಂದ ಮಹಿಳೆಯೂ ನಾವು ಬೆಂಗಳೂರಿನ ಆರ್ಥಿಕತೆಗೆ ಕೊಡುಗೆ ನೀಡುತ್ತಿದ್ದೇವೆ, ನಿನಗೇನಾದರೂ ಗೊತ್ತಿದೆಯಾ ಎಂದು ಪ್ರಶ್ನಿಸಿರುವುದನ್ನು ಕಾಣಬಹುದು.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!