ಬ್ಯಾಕ್ ಟು ಬ್ಯಾಕ್ ಐಪಿಎಲ್ ಕಪ್ ಅನ್ನು ತನ್ನ ಮುಡಿಗೇರಿಸಿಕೊಂಡ ಆರ್.ಸಿ.ಬಿ….

2008 ರಿಂದ 2024 ರವರೆಗೆ ಆರ್.ಸಿ.ಬಿಯ ಪುರುಷರ ತಂಡವು ಯಾವುದೇ ಐಪಿಎಲ್ ಕಪ್ ಅನ್ನು ಗೆದ್ದಿರಲಿಲ್ಲ, ಆದರೆ 2025 ಸೀಸನ್ 18ರಲ್ಲಿ ಆರ್ ಸಿ ಬಿ ಆ ಪುರುಷರ ತಂಡವು ಕಪ್ಪನ್ನು ಗೆದ್ದು ಇತಿಹಾಸವನ್ನು ಸೃಷ್ಟಿಸಿದೆ. ಹಾಗೂ ಆರ್‌ಸಿಬಿಯ ಮಹಿಳೆಯರ ತಂಡವು 2024ರಲ್ಲಿ ಕಪ್ಪನ್ನು ಗೆದ್ದು ತನ್ನ ಮುಡುಗೇರಿಸಿಕೊಂಡಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಕಪ್ಪುಗಳನ್ನು ಗೆದ್ದು ದಾಖಲೆಯನ್ನು ಬರೆದಿದೆ ಆರ್‌ಸಿಬಿ ತಂಡ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು 2024ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಪುರುಷರ ತಂಡದ ಟ್ರೋಫಿ ಬರ ಮುಂದುವರಿದಿತ್ತು. ಈ ಬಾರಿ ರಜತ್ ಪಾಟಿದರ್ ನೇತೃತ್ವದ ಪುರುಷರ ತಂಡವು ಐಪಿಎಲ್ ಟ್ರೋಫಿಯನ್ನು ಗೆದ್ದು ಆರ್‌ಸಿಬಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಮಹಿಳಾ ತಂಡದ ಗೆಲುವು ಮತ್ತು ಪುರುಷರ ತಂಡದ ಗೆಲುವು ಎರಡೂ ಆರ್‌ಸಿಬಿ ಅಭಿಮಾನಿಗಳಿಗೆ ದೊಡ್ಡ ಸಂಭ್ರಮವನ್ನು ತಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತು. ಜೂನ್ 3, 2025 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಆರ್‌ಸಿಬಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು. ಫೈನಲ್‌ನಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿ 190 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ತಂಡವು 6 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಆರ್‌ಸಿಬಿ 17 ವರ್ಷಗಳ ದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಇದಕ್ಕೂ ಮೊದಲು ಆರ್ಸಿಬಿ 2009, 2011 ಮತ್ತು 2016 ರಲ್ಲಿ ಫೈನಲ್‌ನಲ್ಲಿ ಸೋತಿದ್ದರು. ಆದರೆ ಕಳೆದೊಂದು ವರ್ಷದಿಂದ ಆರ್ಸಿಬಿ ಅದೃಷ್ಟ ಬದಲಾಗಿದ್ದು, ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!