ಭಾರತದ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ಶೇ 4ರಷ್ಟು ಹೆಚ್ಚಳ: ಹೊರ ಬಿತ್ತು ಫಿಚ್ ರೇಟಿಂಗ್ಸ್ ವರದಿ.

ನವದೆಹಲಿ : ಮಾರ್ಚ್ 31, 2025 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿಯಂಥ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ಶೇಕಡಾ 3 ರಿಂದ 4 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಫಿಚ್ ರೇಟಿಂಗ್ಸ್ ವರದಿ ತಿಳಿಸಿದೆ. ಗ್ರಾಹಕ ವಲಯ, ಕೈಗಾರಿಕಾ ವಲಯ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಹೆಚ್ಚಿದ ಬಳಕೆಯಿಂದಾಗಿ ಬೇಡಿಕೆ ಹೆಚ್ಚಾಗಲಿದೆ ಎಂದು ರೇಟಿಂಗ್ ಏಜೆನ್ಸಿ ವರದಿಯಲ್ಲಿ ತಿಳಿಸಿದೆ.
ಇಂಧನ ಉತ್ಪಾದನೆಯಲ್ಲಿನ ಕುಸಿತ, ಸ್ಥಳೀಯವಾಗಿ ಅತಿಯಾದ ಇಂಧನ ಪೂರೈಕೆ ಮತ್ತು ವಿಭಿನ್ನ ಕಚ್ಚಾ ತೈಲಗಳ ನಡುವಿನ ಬೆಲೆ ವ್ಯತ್ಯಾಸಗಳು ಕಡಿಮೆಯಾಗಿರುವುದರಿಂದ ಭಾರತದ ತೈಲ ಮಾರುಕಟ್ಟೆ ಕಂಪನಿಗಳ (ಒಎಂಸಿ) ಸಂಸ್ಕರಣಾ ಲಾಭಗಳು ಹಣಕಾಸು ವರ್ಷ 2025 ರ ಮಧ್ಯದಲ್ಲಿ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಕಡಿಮೆಯಾಗಿರುವುದರಿಂದ ಈ ಕಂಪನಿಗಳ ಮಾರುಕಟ್ಟೆ ಲಾಭವು ಹಣಕಾಸು ವರ್ಷ 2024 ಕ್ಕಿಂತ ಉತ್ತಮವಾಗಿರಲಿದೆ.
“ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಕಡಿಮೆಯಾಗಿರುವುದು ತೈಲ ಮಾರುಕಟ್ಟೆ ಕಂಪನಿಗಳ ಸಂಸ್ಕರಣಾ ಲಾಭ ಕುಸಿತವನ್ನು ಒಂದಿಷ್ಟು ಕಡಿಮೆ ಮಾಡಲಿದೆ. ಆದಾಗ್ಯೂ, ಎಚ್ಪಿಸಿಎಲ್-ಮಿತ್ತಲ್ ಎನರ್ಜಿ ಲಿಮಿಟೆಡ್ (ಎಚ್ಎಂಇಎಲ್, ಬಿಬಿ + / ಸ್ಟೇಬಲ್) ನಂತಹ ಶುದ್ಧ ಸಂಸ್ಕರಣಾಗಾರಗಳ ಲಾಭದಾಯಕತೆಯ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಸ್ಥಳೀಯವಾಗಿ ಅತಿಯಾದ ಇಂಧನ ಪೂರೈಕೆ ಪ್ರಮಾಣ ಕಡಿಮೆಯಾಗುವುದರಿಂದ ಮತ್ತು ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಫಿಚ್ನ ಊಹೆಗೆ ಅನುಗುಣವಾಗಿ ಕುಸಿಯುವುದರಿಂದ, ಹಣಕಾಸು ವರ್ಷ 2026 ರಲ್ಲಿ ಸಂಸ್ಕರಣಾ ಲಾಭಗಳು ತಮ್ಮ ಮಧ್ಯ-ಚಕ್ರದ ಮಟ್ಟಕ್ಕೆ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ಆದರೆ ಇದೇ ಸಂದರ್ಭದಲ್ಲಿ ಮಾರ್ಕೆಟಿಂಗ್ ಲಾಭಗಳು ಉತ್ತಮವಾಗಿರಲಿವೆ. ರಿಫೈನಿಂಗ್ ಲಾಭಗಳಲ್ಲಿ ಕ್ರಮೇಣ ಸಾಮಾನ್ಯೀಕರಣದಿಂದಾಗಿ ಹಣಕಾಸು ವರ್ಷ 2025 ರಲ್ಲಿ ಎಚ್ಎಂಇಎಲ್ನ ಕಡಿಮೆ ರೇಟಿಂಗ್ ಪ್ರಮಾಣವು 2026 ರಲ್ಲಿ ಸುಧಾರಿಸಲಿದೆ” ಎಂದು ವರದಿ ತಿಳಿಸಿದೆ.
ಭಾರತದ ತೈಲ ಮತ್ತು ಅನಿಲ ಉತ್ಪಾದನೆಯ ಪ್ರಮಾಣವು 2025ರ ಹಣಕಾಸು ವರ್ಷದಲ್ಲಿ ಬಹುತೇಕ ಒಂದೇ ರೀತಿಯಾಗಿರುವ ನಿರೀಕ್ಷೆಯಿದೆ. ಹಳೆಯ ನಿಕ್ಷೇಪಗಳಲ್ಲಿ ನೈಸರ್ಗಿಕ ಅನಿಲದ ಉತ್ಪಾದನೆಯ ಕುಸಿತ ತಡೆಗಟ್ಟುವ ಸಲುವಾಗಿ ಉತ್ಪಾದನೆ ಹೆಚ್ಚಿಸಲು ಮತ್ತು ಪ್ರತ್ಯೇಕ ನಿಕ್ಷೇಪಗಳನ್ನು ಪತ್ತೆ ಮಾಡುವುದಕ್ಕಾಗಿ ಹೊಸ ತಂತ್ರಜ್ಞಾನದ ಮೇಲೆ ಹಣ ಹೂಡಿಕೆ ಮಾಡಲು ಮುಂಚೂಣಿ ಕಂಪನಿಗಳು ಹೆಣಗಾಡುತ್ತಿರುವುದರಿಂದ ಭಾರತದ ಕಚ್ಚಾ ತೈಲ ಉತ್ಪಾದನೆಯು 2025 ರ ಹಣಕಾಸು ವರ್ಷದಲ್ಲಿ ಶೇಕಡಾ 2 ರಿಂದ 3 ರಷ್ಟು ಕುಸಿಯಲಿದೆ ಎಂದು ವರದಿ ಹೇಳಿದೆ.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!