ಭಾರತ ಹಾಗೂ ಉಳಿದ ತಂಡಗಳಿಗೆ ಚಾಂಪಿಯನ್ ಟ್ರೋಫಿಯಲ್ಲಿ ದೊರೆತ ಹಣವೆಷ್ಟು??

2025ರ ಚಾಂಪಿಯನ್ ಟ್ರೋಫಿಯನ್ನು ಭಾರತವು ತನ್ನದಾಗಿಸಿಕೊಂಡಿದೆ. ದುಬೈನಲ್ಲಿ ನಡೆದ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿ ಟ್ರೋಫಿ ಗೆದ್ದಿದೆ. 60 ಕೋಟಿ ರೂಗಳ ಒಟ್ಟು ಬಹುಮಾನದ ಗಾತ್ರದಲ್ಲಿ ಚಾಂಪಿಯನ್ ಭಾರತಕ್ಕೆ 19.5 ಕೋಟಿ ರೂಪಾಯಿ ಬಹುಮಾನ ದೊರೆತಿದೆ. ಉಳಿದಂತೆ ಬೇರೆ ತಂಡಗಳಿಗೆ ಎಷ್ಟು ಹಣ ದೊರೆತಿದೆ ಎಂಬುದರ ವಿವರ ಇಲ್ಲಿದೆ.

ಚಾಂಪಿಯನ್ ಟ್ರೋಫಿಯ ಫೈನಲ್ಸ್ ನಲ್ಲಿ , ನ್ಯೂಜಿಲೆಂಡ್ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಿದ್ದು, ಭಾರತವು ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಲ್ಲದೆ, ಚಾಂಪಿಯನ್ಸ್ ಕೂಡ ಆಗಿದ್ದಾರೆ. ನಾಯಕ ರೋಹಿತ್ ಶರ್ಮ ಆಡಿದ ಮೌಲ್ಯಯುತ ಇನ್ನಿಂಗ್ಸ್ ಗಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ.
ಈ ಚಾಂಪಿಯನ್ ಟ್ರೋಫಿಯ ವಿಶೇಷ ಏನಪ್ಪಾ ಅಂದ್ರೆ, ಭಾರತ ಆಡಿದ ಯಾವುದೇ ಒಂದು ಪಂದ್ಯಾವಳಿಯನ್ನು ಸಹ ಸೋತಿಲ್ಲ. 2002 ಹಾಗೂ 2013ರಲ್ಲಿಯೂ ಇದೇ ರೀತಿಯಾಗಿ ಪಂದ್ಯವನ್ನ ಆಡಿ ಭಾರತ ಗೆದ್ದಿತ್ತು. ಮತ್ತೊಂದು ಮುಖ್ಯವಾದ ಅಂಶವೆಂದರೆ ಈ ಸಾಧನೆಯನ್ನು ಮಾಡಲು ಯಾವ ದೇಶಗಳಿಗೂ ಸಹ ಸಾಧ್ಯವಾಗಿಲ್ಲ. ಆದರೆ ಭಾರತ ಮೂರು ಬಾರಿ ಐಸಿಸಿ ಟ್ರೋಫಿಯನ್ನು ಗೆಲ್ಲುವುದರ ಮುಖಾಂತರ ಹೊಸ ಇತಿಹಾಸವನ್ನು ಸೃಷ್ಟಿಸಿದೆ.
ಕೇವಲ 9 ತಿಂಗಳುಗಳ ಅಂತರದಲ್ಲಿ ಎರಡನೇ ಐಸಿಸಿ ಟ್ರೋಫಿಯನ್ನು ತನ್ನ ಖಾತೆಗೆ ಹಾಕಿಕೊಂಡಿರುವ ರೋಹಿತ್ ಪಡೆಗೆ ಐಸಿಸಿಯಿಂದ ಭಾರಿ ಮೊತ್ತವನ್ನು ಬಹುಮಾನವನ್ನಾಗಿ ನೀಡಲಾಗಿದೆ. ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತ ತಂಡಕ್ಕ 2.4 ಮಿಲಿಯನ್ ಅಮೆರಿಕನ್ ಡಾಲರ್ ಅಂದರೆ ಸರಿಸುಮಾರು 19.5 ಕೋಟಿ ರೂ. ಬಹುಮಾನವಾಗಿ ಸಿಗಲಿದೆ. ಹಾಗೆಯೇ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಸೋತ ನ್ಯೂಜಿಲೆಂಡ್ ತಂಡಕ್ಕೆ $1.12 ಮಿಲಿಯನ್ ಅಂದರೆ ಸುಮಾರು 9.72 ಕೋಟಿ ರೂಗಳನ್ನು ಬಹುಮಾನವಾಗಿ ನೀಡಲಾಗುತ್ತದೆ. ಹಾಗೆಯೇ ಸೆಮಿಫೈನಲ್ನಲ್ಲಿ ಹೊರಬಿದ್ದ ಎರಡೂ ತಂಡಗಳಾದ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ 4.86 ಕೋಟಿ ರೂ ಹಣ ಸಿಗಲಿದೆ.

ಸುಮಾರು 60 ಕೋಟಿ ರೂಗಳು ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಗಾತ್ರವಾಗಿದ್ದು, ಚಾಂಪಿಯನ್, ರನ್ನರ್ ಅಪ್ ಹಾಗೂ ಸೆಮಿಫೈನಲ್ನಿಂದ ಹೊರಬಿದ್ದ ತಂಡಗಳನ್ನು ಹೊರತುಪಡಿಸಿ, ಗುಂಪು ಹಂತದಲ್ಲಿ ಪ್ರತಿ ಪಂದ್ಯದ ಗೆಲುವಿಗೆ 30 ಲಕ್ಷ ರೂ. ಬಹುಮಾನ ದೊರೆಯಲಿದೆ.ಟೂರ್ನಿಯಲ್ಲಿ ಐದು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸುಮಾರು 3 ಕೋಟಿ ರೂ. ಬಹುಮಾನ ಪಡೆದರೆ, ಏಳು ಮತ್ತು ಎಂಟನೇ ಸ್ಥಾನ ಪಡೆದ ತಂಡಗಳು ಸುಮಾರು 1.2 ಕೋಟಿ ರೂ ಮೊತ್ತವನ್ನು ಪಡೆಯಲಿದೆ. ಇದಲ್ಲದೆ, ಈ ಐಸಿಸಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲಾ ಎಂಟು ತಂಡಗಳಿಗೆ ತಲಾ 1.08 ಕೋಟಿ ರೂ ಹಣ ಸಿಗಲಿದೆ. ಈ ರೀತಿಯಾಗಿ 60 ಕೋಟಿ ರೂಪಾಯಿಗಳನ್ನು ಭಾಗಿಸಿ, ಎಲ್ಲಾ ತಂಡಗಳಿಗೂ ಸೇರುವಂತೆ ಮಾಡಿದ್ದಾರೆ. ಟ್ರೋಫಿಯನ್ನು ಗೆದ್ದ ತಂಡ ಹಾಗೂ ರನ್ನರ್ ಅಪ್ ಆದ ತಂಡಗಳಿಗೆ ಇತರ ತಂಡಗಳಿಗೆ ಹೋಲಿಸಿದರೆ ಹೆಚ್ಚಿನ ಮೊತ್ತ ದೊರಕಿದೆ.

 

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!