ಭಾರತ vs ನ್ಯೂಜಿಲೆಂಡ್ ಹೈವೋಲ್ವೇಜ್ ಫೈನಲ್ ಫೈಟ್.

ದುಬೈ: ಅಜೇಯ ದಾಖಲೆಯೊಂದಿಗೆ ಫೈನಲ್ ಪ್ರವೇಶಿಸಿರುವ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ.
ಆತಿಥ್ಯ ವಹಿಸಿರುವ ರಾಷ್ಟ್ರ ಪಾಕಿಸ್ತಾನ ಟೂರ್ನಿಯಿಂದ ಗುಂಪು ಹಂತದಲ್ಲೇ ನಿರ್ಗಮಿಸಿದ್ದರೂ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕದನಕ್ಕೆ ಹೈವೋಲ್ವೇಜ್ ಸ್ಪರ್ಶ ಸಿಕ್ಕಿದೆ. ಹೈಬ್ರಿಡ್ ಮಾದರಿದಯಲ್ಲಿ ಆತಿಥ್ಯದ ಅವಕಾಶ ಪಡೆದ ಟೀಮ್ ಇಂಡಿಯಾ ಅರಬ್ ನಾಡಿನಲ್ಲಿ 12 ವರ್ಷಗಳ ನಂತರ ಟ್ರೋಫಿಗೆ ಮುತ್ತಿಡಲು ಹವಣಿಸುತ್ತಿದೆ. ಆದರೆ, ಐಸಿಸಿ ಟೂರ್ನಿಗಳ ಎಲ್ಲಾ ಪಂದ್ಯಗಳಲ್ಲಿ ಭಾರತದ ವಿರುದ್ಧ 10-6 ಅಂತರದ ಮುನ್ನಡೆದಯಲ್ಲಿರುವ ಕಿವೀಸ್ ತಂಡವನ್ನು ಭಾರತ ಯಾವುದೇ ಕಾರಣಕ್ಕೂ ಕಡೆಗಣಿಸುವಂತಿಲ್ಲ. ಅದರಲ್ಲೂ ನಾಕೌಟ್ ಪಂದ್ಯಗಳಲ್ಲಿ 1-3ರಲ್ಲಿ ಹಿನ್ನಡೆ ಅನುಭವಿಸಿರುವುದು ಕೂಡ ಭಾರತವನ್ನು ಎಚ್ಚರಿಸಿದೆ. ಒಂದೇ ಪಿಚ್ನಲ್ಲಿ ಆಡುತ್ತಿರುವುದು ಭಾರತಕ್ಕೆ ಅನುಕೂಲವಾಗಿದೆ ಎಂದು ಹಲವರ ಆರೋಪಿಸಿದ್ದಾರೆ. ಆದರೆ ಇದೇ ಪಿಚ್ನಲ್ಲಿ ಕಿವೀಸ್ ಸಹ ಆಡಿದ ಅನುಭವ ಹೊಂದಿದೆ.

ಸ್ಪಿನ್ನರ್ಸ್ ನಿರ್ಣಾಯಕ
ಪಿಚ್ ಸ್ಟಿನ್ ಸ್ನೇಹಿಯಾಗಿರುವ ಕಾರಣ ಉಭಯ ತಂಡಗಳ ಸ್ಪಿನ್ಸರ್ಗಳು ಪಂದ್ಯದಲ್ಲಿ ನಿರ್ಣಾಯಕ ಪಾತ್ರವಹಿಸುವ ನಿರೀಕ್ಷೆ ಇದೆ. ಬಲಗೈ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಎಡಗೈ ಸ್ಪಿನ್ನರ್ ಕುಲ್ದೀಪ್ ಯಾದವ್ ಎದುರಾಳಿ ತಂಡದ ಸವಾಲಾಗುವ ಸಾಧ್ಯತೆ ಇದೆ. ಅಂತೆಯೇ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಪರಾಕ್ರಮಕ್ಕೆ ಬಲ ತುಂಬಬಲ್ಲವರಾಗಿದ್ದಾರೆ. ಅತ್ತ ನ್ಯೂಜಿಲೆಂಡ್ ಕೂಡ ಇದೇ ಆತ್ಮವಿಶ್ವಾಸದಲ್ಲಿದೆ. ಸ್ಯಾಂಟ್ನರ್, ಮೈಕೆಲ್ ಬ್ರಾಸ್ವೇಲ್, ಗ್ಲೆನ್ ಫಿಲಿಪ್ಸ್ ಮತ್ತು ರಚಿನ್ ರವೀಂದ್ರ ಅವರನ್ನು ಕಿವೀಸ್ ಅವಲಂಬಿಸಿದೆ.

ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ರೋಹಿತ್ ಶರ್ಮ ಭಾರತದ ಬ್ಯಾಟಿಂಗ್ ಆಧಾರವಾದರೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ ಮತ್ತು ವಿಲ್ ಯಂಗ್ ಕಿವೀಸ್ ಶಕ್ತಿಯಾಗಿದ್ದಾರೆ. ಮೊಹಮ್ಮದ್ ಶಮಿ ಸೇರಿದಂತೆ ಇಬ್ಬರು ವೇಗಿಗಳು ಮತ್ತು ನಾಲ್ವರು ಸ್ಪಿನ್ನರ್ಗಳೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯುವ ಸಾಧ್ಯತೆ ಇದೆ. ಭಾರತ ತಂಡ ಪ್ರಶಸ್ತಿ ಗೆದ್ದರೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಮೂರು ಪ್ರಶಸ್ತಿ ಗೆದ್ದ ಮೊದಲ ತಂಡ ಎನಿಸಲಿದೆ. ಸದ್ಯ ತಲಾ 2 ಬಾರಿ ಗೆದ್ದಿರುವ ಭಾರತ ಮತ್ತು ಆಸೀಸ್ ವಂಟಿ ಅಗ್ರ ಸ್ಥಾನದಲ್ಲಿವೆ.

https://youtu.be/qw_CB_TpRcU?si=IwIvkeY8n523C8AV   ಸಿದ್ದರಾಮಯ್ಯನವರಿಗೆ ನಟ್ಟು ಬೋಲ್ಟ್ ಟೈಟ್ ಮಾಡ್ಬೇಕು


ಪಂದ್ಯ ಆರಂಭ: ಮಧ್ಯಾಹ್ನ 2.30ಕ್ಕೆ
ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ

ಭಾರತ ತಂಡ: ರೋಹಿತ್ ಶರ್ಮ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷ್ದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ.

ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್(ನಾಯಕ), ಮೈಕೆಲ್ ಬ್ರಾಸ್ವೇಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲೂಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ವಿಲ್ ಒ’ ರೂರ್ಕ್, ಗ್ಲೇನ್ ಫಿಲಿಪ್ಸ್, ರಚಿನ್ ರವೀಂದ್ರ, ನಥಾನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್. ಜಾಕೋಬ್ ಡಫಿ.

ಟಿಕೆಟ್ ಸೋಲ್ಡ್ ಔಟ್

ಭಾರತ-ನ್ಯೂಜಿಲೆಂಡ್ ನಡುವಣ ಚಾಂಪಿಯನ್ಸ್ ಟ್ರೋಫಿ ಫೈನಲ್ ಫೈಟ್ ಫಲಿತಾಂಶಕ್ಕಾಗಿ ಜಗತ್ತಿನ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಹೊತ್ತಿನಲ್ಲೇ ಪಂದ್ಯದ ಟಿಕೆಟ್ಗಳು ಖಾಲಿಯಾಗಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದ ಎಲ್ಲಾ25,000 ಟಿಕೆಟ್ಗಳು ಮಾರಾಟಗೊಂಡು ಒಟ್ಟು 21.3 ಕೋಟಿ ರೂ. ಸಂಗ್ರಹವಾಗಿದೆ. ಟಿಕೆಟ್ ದರ ಕನಿಷ್ಠ 6,000 ರೂ.ಗಳಿಂದ ಗರಿಷ್ಠ 2.8 ಲಕ್ಷ ರೂ. ನಿಗದಿ ಪಡಿಸಲಾಗಿತ್ತು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು