ಭಿಕ್ಷುಕಿಯ ಚೀಲದೊಳಗೆ 75000 ರೂ. ನಗದು ಪತ್ತೆ.

ಇಂದೋರ್: ಮಧ್ಯಪ್ರದೇಶದ ಎರಡನೇ ಅತಿದೊಡ್ಡ ನಗರ ಮತ್ತು ಆ ರಾಜ್ಯದ ವಾಣಿಜ್ಯ ರಾಜಧಾನಿಯಾದ ಇಂದೋರ್ ನಗರದಲ್ಲಿ ಜನವರಿ 1, 2025ರಿಂದ ಭಿಕ್ಷೆ ಬೇಡುವ ಭಿಕ್ಷುಕರಿಗೆ ಮತ್ತು ಭಿಕ್ಷೆ ನೀಡುವ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಇಂದೋರ್ ಜಿಲ್ಲಾಡಳಿತ ಪ್ರಕಟಿಸಿದೆ.

ಈ ನಡುವೆ ಇಂದೋರ್ನಲ್ಲಿ ಭಿಕ್ಷುಕಿಯೊಬ್ಬಳು ಪತ್ತೆಯಾಗಿದ್ದು, ಆಕೆಯನ್ನು ತನಿಖೆ ನಡೆಸಿದಾಗ, ಆಕೆಯ ಬಳಿ ಇದ್ದ ಹಣ ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.
ಇಂದೋರ್ನ ಹೈಕೋರ್ಟಿನ ಅನತಿ ದೂರದಲ್ಲಿರುವ ಮಸೀದಿಯ ಹೊರಗೆ ಕುಳಿತು ಭಿಕ್ಷೆ ಬೇಡುತ್ತಿದ್ದ ಭಿಕ್ಷುಕಿಯೊಬ್ಬಳನ್ನು ವಶಕ್ಕೆ ಪಡೆಯಲಾಗಿದ್ದು,ಆಕೆಯ ಬಳಿ ಇದ್ದ ಪ್ಲಾಸ್ಟಿಕ್ ಚೀಲ ಪರಿಶೀಲಿಸಲಾಗಿದೆ. ಭಿಕ್ಷುಕಿಯ ಬ್ಯಾಗ್ನಲ್ಲಿ ಸುಮಾರು 30-40 ಪರ್ಸ್ಗಳು ಪತ್ತೆಯಾಗಿದ್ದು, ಅದರಲ್ಲಿ ಸುಮಾರು 75 ಸಾವಿರ ರೂ. ಇರುವುದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಭಿಕ್ಷುಕಿ ಮಸೀದಿಯ ಬಳಿ ಬಹಳ ಸಮಯದಿಂದ ಭಿಕ್ಷೆ ಬೇಡುತ್ತಿರುವುದು ತಿಳಿದುಬಂದಿದೆ. ನಂತರ ಆಕೆಯನ್ನು ಅಲ್ಲಿಂದ ಉಜ್ಜಯಿನಿಯ ಆಶ್ರಮಕ್ಕೆ ಸ್ಥಳಾಂತರಿಸಲಾಗಿದೆ.
ಮಹಿಳೆಯೊಂದಿಗೆ ಮತ್ತೊಬ್ಬ ಭಿಕ್ಷುಕನನ್ನೂ ವಶಕ್ಕೆ ಪಡೆದ ಸರ್ಕಾರಿ ತಂಡ ಆತನಿಂದ 20 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ತಾನು ಪ್ರತಿದಿನ ಬೇರೆ ಬೇರೆ ಪ್ರದೇಶದಿಂದ ಇಂದೋರ್ಗೆ ಭಿಕ್ಷೆ ಬೇಡಲು ಬರುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಜನವರಿ 1ರ ನಂತರ ನಗರದಲ್ಲಿ ಯಾರೇ ಭಿಕ್ಷಾಟನೆ ಮಾಡುತ್ತಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!