ಮಂಗಳ ಮುಖಿಯರ ಟಾರ್ಚರ್ ಗೆ ಅಪ್ರಾಪ್ತ ಬಾಲಕ ಬಲಿ

ಮಂಗಳ ಮುಖಿಯರ ಟಾರ್ಚರ್ ಗೆ ಅಪ್ರಾಪ್ತ ಬಾಲಕ ಬಲಿ

ಮಂಗಳಮುಖಿಯರ ಕಿರುಕುಳಕ್ಕೆ ಮನನೊಂದ ಅಪ್ರಾಪ್ತ ವಯಸ್ಸಿನ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.ರಾಹುಲ್ ಮೌರ್ಯ(17) ಮೃತದುರ್ದೈವಿ.ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹುಣಸೂರಿನ ಕಿರಜಾಜಿ ಸರ್ಕಲ್ ಬಳಿ ಎಳೆನೀರು ವ್ಯಾಪಾರ ಮಾಡುತ್ತಿದ್ದ ರಾಹುಲ್ ಮೌರ್ಯ ಮಂಗಳಮುಖಿಯ ಜೊತೆ ಆಗಾಗ ಮಾತನಾಡುತ್ತ ಸ್ನೇಹ ಬೆಳೆಸಿದ್ದ.ನಾಲ್ಕು ತಿಂಗಳ ಹಿಂದೆ ರಾಹುಲ್ ಮೌರ್ಯ ನಾಪತ್ತೆಯಾಗಿದ್ದಾನೆ.ಆಗಾಗ ತನ್ನ ತಾಯಿ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ರಾಹುಲ್ ಮೌರ್ಯ ತಾನು ಇರುವ ಸ್ಥಳ ತಿಳಿಸಿಲ್ಲ.ಜೂನ್ 21 ರಂದು ರಾಹುಲ್ ಮೌರ್ಯ ಹೆಜ್ಜೂರು ಗ್ರಾಮದ ತನ್ನ ದೊಡ್ಡಮ್ಮನ ಮನೆಗೆ ಹಿಂದಿರುಗಿದ್ದಾನೆ.ಜೂನ್ 23 ರಂದು ಕೆಲವು ಮಂಗಳಮುಖಿಯರು ಕಿರಜಾಜಿಯಲ್ಲಿರುವ ರಾಹುಲ್ ಮೌರ್ಯ ಮನೆಗೆ ಬಂದು ಕುಟುಂಬಸ್ಥರ ಜೊತೆ ಜಗಳವಾಡಿ ಕೂಗಾಡಿದ್ದಾರೆ.ನಮ್ಮ ಹುಡುಗಿಯೊಬ್ಬಳನ್ನ ಕರೆದೊಯ್ದಿದ್ದಾನೆಂದು ಆರೋಪಿಸಿ ಕಿರುಚಾಡಿ ಹೋಗಿದ್ದಾರೆ.ಅದೇ ಸಂಜೆ 5 ಗಂಟೆಗೆ ಹೆಜ್ಜೂರು ಗ್ರಾಮದ ಜಮೀನಿನಲ್ಲಿರುವ ಬಿದಿರುಶೆಡ್ ನಲ್ಲಿ ರಾಹುಲ್ ಮೌರ್ಯ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಘಟನೆಯಿಂದ ಮನನೊಂದು ಮಗ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Related Posts

ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*!

ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು…

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು!

ಉಡುಪಿಯ ಮಲ್ಪೆ ಬೀಚ್‌ನಲ್ಲಿ ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಗಲಾಟೆ ಸಂಭವಿಸಿ, ಸ್ಥಳೀಯ ಮುಖಂಡ ಮಂಜು ಕೊಳ ಸೇರಿದಂತೆ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಗಲಾಟೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಹ* ನಡೆಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್