ಮಕ್ಕಳನ್ನು ದತ್ತು ಪಡೆದು ಲೈಂಗಿಕವಾಗಿ ದುರುಪಯೋಗ : ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ;

ಜಾರ್ಜಿಯಾದ ನ್ಯಾಯಾಲಯವೊಂದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಒಂದು ಸಲಿಂಗ ದಂಪತಿಗೆ 100 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ದಂಪತಿ ದತ್ತು ಪಡೆದ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅಶ್ಲೀಲ ವಿಡಿಯೋಗಳನ್ನು ಮಾಡಿ ಮಾರಾಟ ಮಾಡಿದ್ದರು. ಈ ಘಟನೆಯು ‘ಹೌಸ್ ಆಫ್ ಹಾರರ್’ ಎಂದು ನ್ಯಾಯಾಲಯ ಬಣ್ಣಿಸಿದ್ದು, ಜೊತೆಗೆ ದತ್ತು ಪಡೆಯುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಜಾಗೃತೆ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ಅಮೆರಿಕದ ಜಾರ್ಜಿಯಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅಪರಾಧದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಧೀಶರು ಅವರಿಗೆ ಪೆರೋಲ್ ನೀಡಲಾಗುವುದಿಲ್ಲ ಎಂದು ಹೇಳಿದ್ದರಿಂದ ಇಬ್ಬರೂ ಈಗ ತಮ್ಮ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಬೇಕಾಗಿದೆ.

34 ವರ್ಷದ ವಿಲಿಯಂ ಮತ್ತು 36 ವರ್ಷದ ಜಕಾರಿ ಜುಲಾಕ್ ಎಂಬ ಸಲಿಂಗಕಾಮಿಗಳು ಇತ್ತೀಚಿಗಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ವರ್ಷಗಳ ಬಳಿಕ ಈ ಜೋಡಿ 12 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದು, ಈ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಅಪರಾಧಿಗಳು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸ್ನೇಹಿತರಿಗೆ ಮಾರಾಟ ಮಾಡಿದ್ದಾರೆ.
ವಾಲ್ಟನ್ ಕೌಂಟಿ ಪೊಲೀಸರು ಸಲಿಂಗಕಾಮಿ ದಂಪತಿಗಳ ಮನೆಯ ಮೇಲೆ ದಾಳಿ ನಡೆಸಿದ್ದು, ತನಿಖೆಯ ವೇಳೆ ಕಂಡುಬಂದ ದೃಶ್ಯಗಳನ್ನು ನೋಡಿ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ವರದಿಯ ಪ್ರಕಾರ, ಪೊಲೀಸರು ಸಲಿಂಗಕಾಮಿ ದಂಪತಿಗಳ ಮನೆಯಿಂದ 7TB ಗಿಂತ ಹೆಚ್ಚಿನ ಡಿಜಿಟಲ್ ಡೇಟಾ ಮತ್ತು ಗ್ರಾಫಿಕ್ ಫೋಟೋಗಳು ಮತ್ತು ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ಮುಂದೆ ನಿರ್ಗತಿಕ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಮುಂದೆ ಬರುವ ಜನರ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕು ಎಂದು ನ್ಯಾಯಲಯ ಎಚ್ಚರಿಕೆ ನೀಡಿದೆ. ಇಬ್ಬರು ಅನಾಥ ಮಕ್ಕಳನ್ನು ಈ ರೀತಿ ಬಳಸಿಕೊಂಡ ಸಲಿಂಗಕಾಮಿ ದಂಪತಿಗಳ ಮನೆಯನ್ನು ‘ಹೌಸ್ ಆಫ್ ಹಾರರ್’ ಎಂದು ಬಣ್ಣಿಸಿದ ನ್ಯಾಯಾಲಯ, ಈ ದಂಪತಿಗೆ 100 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!