ಮಗಳನ್ನು ಕೊ*ದ ವ್ಯಕ್ತಿಯ ತಂದೆಯನ್ನು ಕೊ*ದ; ಮಗಳ ತಂದೆ!!

ಮಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಹ* ಮಾಡಿದ್ದ ಆರೋಪಿಯ ತಂದೆಯನ್ನು ಆಕೆಯ ತಂದೆ ಬರ್ಬರವಾಗಿ ಕೊ* ಮಾಡಿರುವ ಘಟನೆ ಮಂಡ್ಯಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ. ಇದೇ ಗ್ರಾಮದ ನರಸಿಂಹೇಗೌಡ ಕೊ* ಮಾಡಿದ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಕೊ* ಆರೋಪಿ.ನರಸಿಂಹೇಗೌಡ ಅವರ ಪುತ್ರ ನಿತೀಶ್, ವೆಂಕಟೇಶ್ ಅವರ ಪುತ್ರಿ ದೀಪಿಕಾಳನ್ನು ಕೊ* ಮಾಡಿದ್ದ. ಮಗಳ ಸಾವಿಗೆ ಪ್ರತೀಕಾರವಾಗಿ ಆಕೆಯ ತಂದೆ ವೆಂಕಟೇಶ್ ಆರೋಪಿ ನಿತೀಶ್ನ ತಂದೆಯನ್ನು ಹ* ಮಾಡಿದ್ದಾನೆ. ಇದು ತಂದೆಯ ಆಕ್ರೋಶವನ್ನು ವ್ಯಕ್ತಪಡಿಸುತ್ತದೆ.

ಟೀಚರ್ ದೀಪಿಕಾ ಮತ್ತು ನಿತೀಶ್ ಇಬ್ಬರು ಸ್ನೇಹ ಹಾಗೂ ಸಲುಗೆಯಿಂದಿದ್ದರು. ಇದನ್ನು ಗಮನಿಸಿದ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ನಿತೀಶ್‌ಗೆ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ದೀಪಿಕಾ ಬಳಿ ಪ್ರಶ್ನಿಸಿದಾಗ ಆತ ನನಗೆ ತಮ್ಮ ಇದ್ದಂತೆ ಎಂದು ಹೇಳಿದ್ದಳು. ಕುಟುಂಬಸ್ಥರ ಎಚ್ಚರಿಕೆಯ ಬಳಿಕ ಇಬ್ಬರು ಅಂತರ ಕಾಯ್ದುಕೊಂಡಿದ್ದರು.ದೀಪಿಕಾ ಜೊತೆ ಒಡನಾಟವಿಲ್ಲದೇ ನಿತೀಶ್ ಕೋಪಗೊಂಡಿದ್ದ. ಬಳಿಕ 2024 ಜ. 22ರಂದು ನಿತೀಶ್ ಬರ್ತ್ಡೇ ನೆಪದಲ್ಲಿ ದೀಪಿಕಾಳನ್ನು ಬೆಟ್ಟದ ತಪ್ಪಲಿಗೆ ಕರೆಸಿಕೊಂಡಿದ್ದ. ದೀಪಿಕಾ ಆತನಿಗೆ ಶರ್ಟ್ ಗಿಫ್ಟ್ ಕೊಡಲು ಹೋಗಿದ್ದಳು. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿ, ಕೊ*ಯಲ್ಲಿ ಅಂತ್ಯವಾಗಿತ್ತು. ಮಂಡ್ಯ ಪೊಲೀಸರು ಕೊ* ಆರೋಪಿ ನಿತೀಶ್‌ನನ್ನು ಬಂಧಿಸಿದ್ದರು.

ಜೈಲು ಸೇರಿದ್ದ ನಿತೀಶ್ ಜಾಮೀನಿನ ಮೇಲೆ ಹೊರ ಬಂದಿದ್ದ. ತನ್ನ ಮಗಳನ್ನು ಕೊ* ಮಾಡಿದ್ದ ನಿತೀಶ್‌ನನ್ನು ಹೇಗಾದರೂ ಮಾಡಿ ಕೊ* ಮಾಡಬೇಕೆಂದು ದೀಪಿಕಾ ತಂದೆ ವೆಂಕಟೇಶ್ ಹೊಂಚು ಹಾಕುತ್ತಿದ್ದ. ಇದೇ ಭಾನುವಾರ ಧರ್ಮಸ್ಥಳದಲ್ಲಿ ನಿತೀಶ್ ತಂಗಿ ಮದುವೆ ನಿಶ್ಚಯವಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ವೆಂಕಟೇಶ್ ನಿತೀಶ್ ತಂದೆ ನರಸಿಂಹೇಗೌಡರನ್ನ ಚಾಕುವಿನಿಂದ ಇರಿದು ಕೊ* ಮಾಡಿದ್ದಾನೆ. ಕೊ* ಮಾಡುವ ವೇಳೆ ನನ್ನ ಮಗಳನ್ನು ಕೊ* ಮಾಡಿ ನಿನ್ನ ಮಗಳ ಮದುವೆ ಮಾಡ್ತಾ ಇದ್ದೀರಾ ಎಂದು ಭೀಕರವಾಗಿ ಹ* ಮಾಡಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊ* ಆರೋಪಿ ವೆಂಕಟೇಶ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು