ಮದುವೆಯ ಬಳಿಕ 3 ಮಕ್ಕಳೊಂದಿಗೆ ತಿರುಮಲದಲ್ಲಿ ಸೆಟಲ್ ಆಗುವ ಆಸೆ ಇದೆ: ಜಾನ್ವಿ ಕಪೂರ್.

ಜಾನ್ವಿ ಕಪೂರ್ :- ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ (Janhvi Kapoor) ಅವರು ತಿರುಮಲದಲ್ಲಿ ಮದುವೆಯಾಗುವ (Wedding) ಪ್ಲ್ಯಾನ್ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ನಟಿ ಮಾತನಾಡಿ, ಮದುವೆಯ ಬಳಿಕ 3 ಮಕ್ಕಳೊಂದಿಗೆ ತಿರುಮಲದಲ್ಲಿ ಸೆಟಲ್ ಆಗುವ ಆಸೆ ಇದೆ ಎಂದು ಮಾತನಾಡಿದ್ದಾರೆ.

ಹಿರಿಯ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಅವರು ಕೂಡ ತಿರುಮಲ ತಿಮ್ಮಪ್ಪನ ಭಕ್ತೆಯಾಗಿದ್ದಾರೆ. ತಿಮ್ಮಪ್ಪ ದೇವರಲ್ಲಿ ಅಪಾರ ನಂಬಿಕೆ ಹೊಂದಿದ್ದಾರೆ. ಆಗಾಗ ನಟಿ ತಿರುಪತಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಜಾನ್ವಿ ಮದುವೆಯಾಗಿ ತಿರುಪತಿಯಲ್ಲೇ ನೆಲೆಸುವ ಆಸೆಯಿದೆ ಎಂದಿದ್ದಾರೆ.

ಕರಣ್ ಜೋಹರ್ ಶೋನಲ್ಲಿ ಮಾತಾಡಿದ ಜಾನ್ವಿ, ಮದುವೆಯಾಗಿ ತಿರುಮಲದಲ್ಲಿ ಪತಿಯೊಂದಿಗೆ ಸೆಟಲ್ ಆಗ್ತೀನಿ ಎಂದಿದ್ದಾರೆ. ಮದುವೆ ಬಳಿಕ 3 ಮಕ್ಕಳೊಂದಿಗೆ ನೆಮ್ಮದಿಯಿಂದ ಬದುಕುವಾಸೆ ಇದೆ. ತಿರುಪತಿ ತಿರುಮಲದಲ್ಲಿ ಸೆಟಲ್ ಆಗಿ ದಿನವೂ ಬಾಳೆ ಎಲೆ ಊಟ ಮಾಡಬೇಕು ಎಂದು ಮನದಾಳದ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಗೋವಿಂದಾ ಗೋವಿಂದಾ ಎಂದು ಸ್ಮರಿಸಬೇಕು. ಮಣಿರತ್ನಂ ಅವರ ಸಿನಿಮಾಗಳ ಸಂಗೀತವನ್ನ ಕೇಳುತ್ತಾ ದಿನ ಕಳೆಯುವೆ ಎಂದು ನಟಿ ಹೇಳಿದ್ದಾರೆ. ಶಿಖರ್ ಪಹಾರಿಯಾ ಜೊತೆ ಜಾನ್ವಿ ಡೇಟಿಂಗ್ ವಿಚಾರ ಸಾಕಷ್ಟು ಭಾರೀ ಕೇಳಿ ಬಂದಿದೆ. ಇಬ್ಬರೂ ಜೊತೆಯಾಗಿ ಹಲವು ಬಾರಿ ಕಾಣಿಸಿಕೊಂಡಿದ್ದಾರೆ. ಎಲ್ಲೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಮದುವೆ ಬಳಿಕ ಜಾನ್ವಿ ನಟನೆಗೆ ಗುಡ್ ಬೈ ಹೇಳ್ತಾರಾ? ಎಂಬ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!