ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಆಂಟಿ !

ಮದುವೆಯಾಗಿ 20 ವರ್ಷದ ಮಕ್ಕಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಚಾಟಿಂಗ್ ಮಾಡುತ್ತಾ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗಿ 20 ವರ್ಷದ ಮಕ್ಕಳಿರುವ ಕೋಮಲಾ ಅಂಟಿಯ ಕಣ್ಸನ್ನೆ ಹಾಗೂ ಮೆಸೇಜ್ಗಳಿಗೆ ಫಿದಾ ಆಗದ ಅಂಕಲ್ಗಳೇ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಬಣ್ಣ ಬಣ್ಣದ ರೀಲ್ಸ್ ಮಾಡುತ್ತಾ ಪೋಸ್ಟ್ ಹಂಚಿಕೊಳ್ಳುವ ಈ ಆಂಟಿ ಆನ್ಲೈನ್ನಲ್ಲಿ ತನಗೆ ಸಂದೇಶ ಕಳಿಸುವ ಅಂಕಲ್ಗಳೇ ಈಕೆಯ ಟಾರ್ಗೆಟ್ ಆಗಿದ್ದಾರೆ. ನಾನು ವಿಧವೆ ಗಂಡನಿಲ್ಲ, ಮಕ್ಕಳಿಲ್ಲ ಎಂದೆಲ್ಲಾ ಹೇಳಿಕೊಳ್ಳುವ ಈ ಕೋಮಲಾ ಆಂಟಿ ಮದುವೆ ಪ್ರಸ್ತಾಪ ಮಾಡಿ ಅಂಕಲ್ಗಳಿಂದ ಲಕ್ಷ ಲಕ್ಷ ಹಣ, ಆಭರಣ ದುಬಾರಿ ಉಡುಗೊರೆಗಳನ್ನು ಪಂಗನಾಮ ಹಾಕುತ್ತಿದ್ದಾಳೆ.

ಮದುವೆ ಮಾಡಿಕೊಳ್ಳುವ ನೆಪದಲ್ಲಿ ರಾಜ್ಯದ ಅನೇಕ ಪುರುಷರಿಗೆ ವಂಚನೆ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಮಹಿಳೆ ಕೋಮಲ ಎಂಬಾಕೆ ಆಗಿದ್ದಾಳೆ. ಸುಮಾರು 38ರಿಂದ 40 ವರ್ಷದ ಈ ಮಹಿಳೆಗೆ ಈಗಾಗಲೇ ಮದುವೆ ಆಗಿ 21 ವರ್ಷವಾಗಿದೆ. ಈಕೆಗೆ 20 ವರ್ಷದ ಮಗ ಹಾಗೂ 16 ವರ್ಷದ ಮಗಳಿದ್ದಾಳೆ. ತಾನಾಯ್ತು, ತನ್ನ ಸಂಸಾರವಾಯ್ತು ಎಂದು ಯಾವುದಾದರೂ ದುಡಿಮೆ ಮಾಡಿಕೊಂಡು ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸುವುದನ್ನು ಬಿಟ್ಟು ರೀಲ್ಸ್ ಮಾಡುತ್ತಾ ಅಂಕಲ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಮುಂದಾಗಿದ್ದಾಳೆ. ಹೀಗೆ, ನಾಲ್ಕೈದು ಅಂಕಲ್ಗಳನ್ನು ಬುಟ್ಟಿಗೆ ಬೀಳಿಸಿಕೊಂಡು ಲಕ್ಷಾಂತರ ರೂ. ಹಣ ವಂಚನೆ ಮಾಡಿದ ನಂತರ ಈಗ ಪೊಲೀಸರ ಅತಿಥಿಯಾಗಿದ್ದಾಳೆ.

 

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಿವಾಸಿ ರಾಘವೇಂದ್ರ ಎಂಬುವರ ಜೊತೆಯಲ್ಲಿ ಚಾಟಿಂಗ್ ಮಾಡುತ್ತಾ ಮದುವೆಯಾಗುವುದಾಗಿ ಹೇಳಿ ವಂಚನೆ ಮಾಡಿದ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಾ ಪೋಸ್ಟ್ ಮಾಡುತ್ತುದ್ದ ಕೋಮಲಾ ಆಂಟಿಗೆ ಯಾರಾದರೂ ಲೈಕ್ ಮಾಡಿದರೆ, ಕಾಮೆಂಟ್ ಮಾಡಿದರೆ ಅವರೊಂದಿಗೆ ಚಾಟಿಂಗ್ ಮಾಡುತ್ತಾರೆ. ನಂತರ, ಕಾಮೆಂಟ್ ಮಾಡಿದವರ ಪೂರ್ವಾಪರ ತಿಳಿದುಕೊಂಡು ಅಲುಗೆ ಬೆಳೆಸಿಕೊಳ್ಳುತ್ತಾರೆ. ನಂತರ, ಮದುವೆ ಆಗದಿರುವ ಪುರುಷರು, ಹೆಂಡತಿಗೆ ಡಿವೋರ್ಸ್ ನೀಡಿ ಒಬ್ಬಂಟಿಯಾಗಿರುವ ಪುರುಷರಿಗೆ ಮದುವೆ ಮಾಡಿಕೊಳ್ಳುವುದಾಗಿ ನಂಬಿಸುತ್ತಾಳೆ. ತನಗೆ ಈಗಾಗಲೇ ಮದುವೆ ಆಗಿದ್ದು, ಗಂಡ ತೀರಿ ಹೋಗಿದ್ದಾರೆ. ನನಗೆ ಮಕ್ಕಳಿಲ್ಲ, ಮದುವೆ ಮಾಡಿಕೊಂಡು ಬಾಳು ಕೊಡುತ್ತೀರಾ? ಎಂದು ಕೇಳುತ್ತಾಳೆ. ಇನ್ನು ಮೊದಲೇ ಹೆಣ್ಣು ಸಿಗದೇ ಪರಿತಪಿಸುವವರು ಈಕೆಯ ಬುಟ್ಟಿಗೆ ಸುಲಭವಾಗಿ ಬೀಳುತ್ತಾರೆ.

ತನ್ನ ಮೋಸಲ ಜಾಲಕ್ಕೆ ಬಿದ್ದ ಅಂಕಲ್ಗಳೊಂದಿಗೆ ಸ್ವಲ್ಪ ಸಲುಗೆಯಿಂದಲೇ ಚಾಟಿಂಗ್ ಮಾಡುವ ಕೋಮಲಾ ಆಂಟಿ, ತೀರಾ ಪರ್ಸನಲ್ ಎನ್ನುವಂತೆ ಅವರೊಂದಿಗೆ ಮಾತನಾಡುತ್ತಾಳೆ. ನಂತರ, ಮನೆ ನಿರ್ವಹಣೆ, ಇತ್ಯಾದಿ ಎಂದು ಹೇಳಿ ಲಕ್ಷ ಲಕ್ಷ ರೂ. ಹಣವನ್ನು ಪೀಕುತ್ತಾಳೆ. ನಂತರ ಅವರ ಸಂಪರ್ಕಕ್ಕೆ ಸಿಗದೇ ವಂಚನೆ ಮಾಡಿ ಚಾಟಿಂಗ್ ಮಾಡುತ್ತಿದ್ದವರನ್ನು ಬ್ಲ್ಯಾಕ್ ಲಿಸ್ಟ್ಗೆ ಸೇರಿಸುತ್ತಾಳೆ. ಹೀಗೆ, ರಾಘವೇಂದ್ರ ಎಂಬುವವರನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಬರೋಬ್ಬರಿ 7.40 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಅವರು ವಂಚನೆಗೊಳಗಾದ ಮಹಿಳೆಯ ವಿರುದ್ಧ ಪೊಲೀಸರಿಗೆ ದೂರು ನಿಡಿದ್ದಾರೆ.

Related Posts

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ…

ಯೋಗೇಶ್‌ ಗೌಡ ಹ*ತ್ಯೆ ಪ್ರಕರಣದಲ್ಲಿ ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ !

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ ಗೌಡರ ಕೊಲೆ ಪ್ರಕರಣದ ಆರೋಪಿ ಆದ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಅಪರಾಧಿ ಎಂದು ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಘೋಷಿಸಿದ್ದು . ಶಿಕ್ಷೆಯ ಪ್ರಮಾಣವನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು