ಮದುವೆ ದಿನವೇ ನವವಧು ಆತ್ಮಹ*!

ಮದುವೆ ಎಂಬುದು ಎಲ್ಲರ ಜೀವನದಲ್ಲೂ ಒಂದು ಸುಂದರವಾದ ಕ್ಷಣವಾಗಿರುತ್ತದೆ. ಆದರೆ ಮದುವೆ ಬಳಿಕ ತವರು ಮನೆಗೆ ಬಂದ ನವವಧು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಆಂಡಿಪಟ್ಟಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದಕ್ಕೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಹೌದು, ಈ ಘಟನೆಗೆ ಸಂಬಂಧಪಟ್ಟವರು ತೇಣಿ ಜಿಲ್ಲೆ, ಆಂಡಿಪಟ್ಟಿ ಹತ್ತಿರದ ಕದಿರ್ನರಸಿಂಗಪುರದವರು. ಪರಮೇಶ್ವರನ್ (56). ಸರ್ಕಾರಿ ಬಸ್ಸಿನಲ್ಲಿ ಚಾಲಕರಾಗಿದ್ದಾರೆ.ಇವರ ಮಗಳು ಸೌಮ್ಯಾ (24). ಪೆರಿಯಕುಳಂ ಕಾಲೇಜಿನಲ್ಲಿ ಪದವಿ ಮುಗಿಸಿದ್ದಾಳೆ. ಕಂಬಂ ಪುದುಪಟ್ಟಿಯ ರವಿಚಂದ್ರನ್ ಮಗ ಪಾಲಾಜಿ (27) ಜೊತೆ ಸೌಮ್ಯಾಳ ಮದುವೆ ನಿಶ್ಚಯ ಆಗಿತ್ತಂತೆ ಎಂದು ತಿಳಿದು ಬರುತ್ತದೆ.

ನಂತರದಲ್ಲಿ ಮದುವೆ ತಯಾರಿ ಜೋರಾಗಿ ನಡೀತಿತ್ತು. ಆದ್ರೆ ಸೌಮ್ಯಾಗೆ ಈ ಮದುವೆಯಲ್ಲಿ ಇಷ್ಟ ಇರಲಿಲ್ಲವಂತೆ ಅದ್ಯಾಗೂ ಪೋಷಕರು ಜನವರಿ 31 ರಂದು ಕಂಬಂನಲ್ಲಿರುವ ಖಾಸಗಿ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ಮಾಡಿದ್ದಾರೆ.ಅದರಂತೆಯೇ ಮದುವೆ ಮನೆಯವರು ವಧುವನ್ನು ಕದಿರ್ನರಸಿಂಗಪುರಕ್ಕೆ ಕರೆದುಕೊಂಡು ಹೋದರು. ಮನೆಗೆ ಬಂದ ಸೌಮ್ಯಾ ಬಾತ್ರೂಮ್ಗೆ ಹೋಗಬೇಕು ಅಂದ್ರಂತೆ. ಬೆಡ್ರೂಮ್ಗೆ ಹೋದ ಸೌಮ್ಯಾ ಬಾಗಿಲು ಹಾಕಿಕೊಂಡ್ಳು. ಬಾಗಿಲು ತೆಗೆಯದಿದ್ದಾಗ ಮನೆಯವರು ಬಾಗಿಲು ಒಡೆದು ನೋಡಿದಾಗ ಸೌಮ್ಯಾ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾಳೆ. ಹೌದು ಇಂತಹದೊಂದು ಆಘಾತಕಾರಿ ಘಟನೆ ನಡೆದಿದೆ.

ಕೂಡಲೇ ಪೊಲೀಸರಿಗೆ ವಿಷಯ ತಿಳಿಸಲಾಯ್ತು. ಸೌಮ್ಯಾಳ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯ್ತು. ಪೊಲೀಸರು ತನಿಖೆ ಮಾಡ್ತಿದ್ದಾರೆ. ತನಿಖೆ ವೇಳೆ ತಿಳಿದುಬಂದಿದ್ದು ಏನೆಂದರೆ ಸೌಮ್ಯಾಗೆ ಮದುವೆ ಇಷ್ಟ ಇರಲಿಲ್ಲ, ಆಕೆ ಕನ್ಯಾಸ್ತ್ರೀ ಆಗಿ ಉಳಿಬೇಕು ಅಂದುಕೊಂಡಿದ್ದಳಂತೆ. ಅಂದರೆ ಮದುವೆಯಾಗದೇ ಜೀವನ ಕಳೆಯಬೇಕು ಎಂಬ ಆಸೆ ಇತ್ತಂತೆ ಆದರೆ ಪೋಷಕರು ಮದುವೆ ಮಾಡಿದ ಕಾರಣ ಬೇಸರಗೊಂಡು ಜೀವಕ್ಕೆ ಅಂತ್ಯ ತಂದುಕೊಂಡಿದ್ದಾಳೆಂದು ಹೇಳಲಾಗಿದೆ. ಆದ್ಯಾಗೂ ಪೊಲೀಸರು ಆತ್ಮಹತ್ಯೆಯ ನಿಖರ ಕಾರಣವೇನು ಎಂದು ತಿಳಿಯಲು ತನಿಖೆ ಮುಂದುವರಿಸಿದ್ದಾರೆ. ತನಿಖೆ ಮುಗಿದ ನಂತರವೇ ಎಲ್ಲಾ ಮಾಹಿತಿ ಲಭ್ಯವಾಗುವುದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!