ಮದುವೆ ದಿನ ಮಾತ್ರ ಸ್ನಾನ ಮಾಡುವ ಪದ್ಧತಿಯನ್ನು ಹೊಂದಿದ್ದಾರೆ ಈ ಬುಡಕಟ್ಟು ಜನಾಂಗದವರು …..

ಪ್ರತಿದಿನ ಸ್ನಾನ ಮಾಡುವ ಅಭ್ಯಾಸ ಎಲ್ಲರಿಗೂ ಇರುತ್ತದೆ. ಕೆಲವರು ದಿನಕ್ಕೆ ಎರಡೆರಡು ಬಾರಿ ಸ್ನಾನ ಮಾಡ್ತಾರೆ. ಆದರೆ ಈ ಜನರು ಮಾತ್ರ ಸ್ನಾನ ಅಂದ್ರೆ ಸಾಕು, ಮಾರು ದೂರ ಓಡ್ತಾರೆರಂತೆ. ಹೌದು, ಇಲ್ಲಿನ ಜನರ ಜೀವನಶೈಲಿ ಮಾತ್ರ ಇವತ್ತಿಗೂ ಬದಲಾಗಿಲ್ಲ. ಇಂದಿಗೂ ತಮ್ಮ ಹಿಂದಿನ ಸಂಪ್ರದಾಯವನ್ನು ಅನುಸರಿಸಿಕೊಂಡು ಬರುವ ಇಲ್ಲಿನ ಮಹಿಳೆಯರು ಜೀವನದಲ್ಲಿ ಒಮ್ಮೆ ಮಾತ್ರ ಸ್ನಾನ ಮಾಡುವುದು. ಹಾಗಾದ್ರೆ ಇಂತಹ ವಿಚಿತ್ರ ಜನರು ಇರುವುದು ಎಲ್ಲಿ? ದೇಹದ ಸ್ವಚ್ಛತೆ ಹೇಗೆ ಮಾಡ್ತಾರೆ? ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ….

ಈ ಬುಡಕಟ್ಟು ಜನಾಂಗದವರು ತಮ್ಮ ಹಿರಿಯರು ಪಾಲಿಸಿಕೊಂಡ ಬಂದ ಸಂಪ್ರದಾಯವನ್ನು ಇವತ್ತಿಗೂ ಕೂಡ ಅನುಸರಿಸಿಕೊಂಡು ಬರುತ್ತಿದ್ದಾರಂತೆ. ಅಂತಹ ಆಚರಣೆಗಳಲ್ಲಿ ಒಂದು ಸ್ನಾನ ಮಾಡದೇ ಇರುವುದು. ಪ್ರಪಂಚದಲ್ಲಿರುವ ಈ ಬುಡಕಟ್ಟು ಜನಾಂಗದಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನೇ ನಿಷೇಧಿಸಲಾಗಿದೆ, ಹೌದು, ಈ ಬುಡಕಟ್ಟು ಜನಾಂಗದ ಹೆಸರು ಹಿಂಬಾ ಬುಡಕಟ್ಟು. ಆಫ್ರಿಕಾ ನಮೀಬಾ ದೇಶದ ಮರುಭೂಮಿಗಳಲ್ಲಿ ಈ ಬುಡಕಟ್ಟು ಜನಾಂಗದ ಜನರು ನೆಲೆಸಿದ್ದು, ಆಧುನಿಕತೆಯಿಂದ ಸಂಪೂರ್ಣ ದೂರ ಉಳಿದಿದ್ದಾರೆ. ನಮ್ಗೆಲ್ಲರಿಗೂ ಒಂದು ದಿನ ಸ್ನಾನ ಮಾಡದೇ ಇದ್ರೆ ಕಿರಿಕಿರಿ ಅನುಭವ ಆಗ್ತದೆ, ಕೆಲವರ ದೇಹದಿಂದ ಗಬ್ಬು ವಾಸನೆ ಬರಲು ಶುರುವಾಗುತ್ತದೆ, ಆದರೆ ಬುಡಕಟ್ಟು ಜನಾಂಗದ ಮಹಿಳೆಯರು ಬೇಸಿಗೆಯಿರಲಿ, ಚಳಿಗಾಲವಿರಲಿ, ಮಳೆಗಾಲವೇ ಇರಲಿ ಸ್ನಾನ ಮಾಡುವುದೇ ಇಲ್ಲ. ಅಷ್ಟೇ ಅಲ್ಲದೇ, ಈ ಮಹಿಳೆಯರು ಬಟ್ಟೆ ಕೂಡ ಒಗೆಯೋದಿಲ್ಲವಂತೆ. ಆದರೆ ಜೀವಮಾನದಲ್ಲಿ ಒಮ್ಮೆ ಮಾತ್ರ ಸ್ನಾನ ಮಾಡೋದು, ಅದುವೇ ತಮ್ಮ ಮದುವೆ ದಿನವಂತೆ.

ಮದುವೆ ದಿನ ಮಾತ್ರ ಸ್ನಾನ ಮಾಡಿದ್ರು ಕೂಡ ಇಲ್ಲಿನ ಮಹಿಳೆಯರು ಸ್ವಚ್ಛತೆಯ ಕಡೆಗೆ ಹೆಚ್ಚು ಗಮನಹರಿಸ್ತಾರೆ. ದೇಹದ ಸ್ವಚ್ಛತೆಗಾಗಿ ಗಿಡಮೂಲಿಕೆಯನ್ನು ಬಳಸ್ತಾರೆ. ಹೌದು ತಮ್ಮ ಸುತ್ತಮುತ್ತಲಿನಲ್ಲಿ ಸಿಗುವ ವಿಶೇಷ ಗಿಡಮೂಲಿಕೆಗಳನ್ನು ನೀರಿನಲ್ಲಿ ಕುದಿಸುತ್ತಾರೆ. ಅದರ ಹೊಗೆಯನ್ನು ಬಳಸಿ ತಮ್ಮ ದೇಹವನ್ನು ಸ್ವಚ್ಛಗೊಳಿಸಿಕೊಳ್ಳುತ್ತಾರೆ. ಸೂರ್ಯನ ಬೆಳಕಿನಿಂದ ಚರ್ಮವನ್ನು ರಕ್ಷಿಸಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾದ ವಿಶೇಷ ಲೋಷನ್ ಬಳಸುತ್ತಾರೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!