ಮದುವೆ ದಿನ ಮಾತ್ರ ಸ್ನಾನ ಮಾಡುವ ಪದ್ಧತಿಯನ್ನು ಹೊಂದಿದ್ದಾರೆ ಈ ಬುಡಕಟ್ಟು ಜನಾಂಗದವರು …..

ಪ್ರತಿದಿನ ಸ್ನಾನ ಮಾಡುವ ಅಭ್ಯಾಸ ಎಲ್ಲರಿಗೂ ಇರುತ್ತದೆ. ಕೆಲವರು ದಿನಕ್ಕೆ ಎರಡೆರಡು ಬಾರಿ ಸ್ನಾನ ಮಾಡ್ತಾರೆ. ಆದರೆ ಈ ಜನರು ಮಾತ್ರ ಸ್ನಾನ ಅಂದ್ರೆ ಸಾಕು, ಮಾರು ದೂರ ಓಡ್ತಾರೆರಂತೆ. ಹೌದು, ಇಲ್ಲಿನ ಜನರ ಜೀವನಶೈಲಿ ಮಾತ್ರ ಇವತ್ತಿಗೂ ಬದಲಾಗಿಲ್ಲ. ಇಂದಿಗೂ ತಮ್ಮ ಹಿಂದಿನ ಸಂಪ್ರದಾಯವನ್ನು ಅನುಸರಿಸಿಕೊಂಡು ಬರುವ ಇಲ್ಲಿನ ಮಹಿಳೆಯರು ಜೀವನದಲ್ಲಿ ಒಮ್ಮೆ ಮಾತ್ರ ಸ್ನಾನ ಮಾಡುವುದು. ಹಾಗಾದ್ರೆ ಇಂತಹ ವಿಚಿತ್ರ ಜನರು ಇರುವುದು ಎಲ್ಲಿ? ದೇಹದ ಸ್ವಚ್ಛತೆ ಹೇಗೆ ಮಾಡ್ತಾರೆ? ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ….

ಈ ಬುಡಕಟ್ಟು ಜನಾಂಗದವರು ತಮ್ಮ ಹಿರಿಯರು ಪಾಲಿಸಿಕೊಂಡ ಬಂದ ಸಂಪ್ರದಾಯವನ್ನು ಇವತ್ತಿಗೂ ಕೂಡ ಅನುಸರಿಸಿಕೊಂಡು ಬರುತ್ತಿದ್ದಾರಂತೆ. ಅಂತಹ ಆಚರಣೆಗಳಲ್ಲಿ ಒಂದು ಸ್ನಾನ ಮಾಡದೇ ಇರುವುದು. ಪ್ರಪಂಚದಲ್ಲಿರುವ ಈ ಬುಡಕಟ್ಟು ಜನಾಂಗದಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನೇ ನಿಷೇಧಿಸಲಾಗಿದೆ, ಹೌದು, ಈ ಬುಡಕಟ್ಟು ಜನಾಂಗದ ಹೆಸರು ಹಿಂಬಾ ಬುಡಕಟ್ಟು. ಆಫ್ರಿಕಾ ನಮೀಬಾ ದೇಶದ ಮರುಭೂಮಿಗಳಲ್ಲಿ ಈ ಬುಡಕಟ್ಟು ಜನಾಂಗದ ಜನರು ನೆಲೆಸಿದ್ದು, ಆಧುನಿಕತೆಯಿಂದ ಸಂಪೂರ್ಣ ದೂರ ಉಳಿದಿದ್ದಾರೆ. ನಮ್ಗೆಲ್ಲರಿಗೂ ಒಂದು ದಿನ ಸ್ನಾನ ಮಾಡದೇ ಇದ್ರೆ ಕಿರಿಕಿರಿ ಅನುಭವ ಆಗ್ತದೆ, ಕೆಲವರ ದೇಹದಿಂದ ಗಬ್ಬು ವಾಸನೆ ಬರಲು ಶುರುವಾಗುತ್ತದೆ, ಆದರೆ ಬುಡಕಟ್ಟು ಜನಾಂಗದ ಮಹಿಳೆಯರು ಬೇಸಿಗೆಯಿರಲಿ, ಚಳಿಗಾಲವಿರಲಿ, ಮಳೆಗಾಲವೇ ಇರಲಿ ಸ್ನಾನ ಮಾಡುವುದೇ ಇಲ್ಲ. ಅಷ್ಟೇ ಅಲ್ಲದೇ, ಈ ಮಹಿಳೆಯರು ಬಟ್ಟೆ ಕೂಡ ಒಗೆಯೋದಿಲ್ಲವಂತೆ. ಆದರೆ ಜೀವಮಾನದಲ್ಲಿ ಒಮ್ಮೆ ಮಾತ್ರ ಸ್ನಾನ ಮಾಡೋದು, ಅದುವೇ ತಮ್ಮ ಮದುವೆ ದಿನವಂತೆ.

ಮದುವೆ ದಿನ ಮಾತ್ರ ಸ್ನಾನ ಮಾಡಿದ್ರು ಕೂಡ ಇಲ್ಲಿನ ಮಹಿಳೆಯರು ಸ್ವಚ್ಛತೆಯ ಕಡೆಗೆ ಹೆಚ್ಚು ಗಮನಹರಿಸ್ತಾರೆ. ದೇಹದ ಸ್ವಚ್ಛತೆಗಾಗಿ ಗಿಡಮೂಲಿಕೆಯನ್ನು ಬಳಸ್ತಾರೆ. ಹೌದು ತಮ್ಮ ಸುತ್ತಮುತ್ತಲಿನಲ್ಲಿ ಸಿಗುವ ವಿಶೇಷ ಗಿಡಮೂಲಿಕೆಗಳನ್ನು ನೀರಿನಲ್ಲಿ ಕುದಿಸುತ್ತಾರೆ. ಅದರ ಹೊಗೆಯನ್ನು ಬಳಸಿ ತಮ್ಮ ದೇಹವನ್ನು ಸ್ವಚ್ಛಗೊಳಿಸಿಕೊಳ್ಳುತ್ತಾರೆ. ಸೂರ್ಯನ ಬೆಳಕಿನಿಂದ ಚರ್ಮವನ್ನು ರಕ್ಷಿಸಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾದ ವಿಶೇಷ ಲೋಷನ್ ಬಳಸುತ್ತಾರೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು