ಮಹಿಳಾ ಕ್ರಿಕೆಟ್ ಗೆ ವರದಾನ ; ಸ್ಮೃತಿ ಮಂಧಾನ : ಒಂದೇ ಪಂದ್ಯದಲ್ಲಿ ಹಲವಾರು ದಾಖಲೆಗಳು ಉಡೀಸ್….

ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಇನಿಂಗ್ಸ್ ಆರಂಭಿಸಿದ ಸ್ಮೃತಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆಂಗ್ಲ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಟೀಮ್ ಇಂಡಿಯಾ ನಾಯಕಿ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್ಗಳನ್ನು ಬಾರಿಸಿದರು. ಈ ಮೂಲಕ 62 ಎಸೆತಗಳಲ್ಲಿ 15 ಫೋರ್ ಹಾಗೂ 3 ಸಿಕ್ಸ್ಗಳೊಂದಿಗೆ 112 ರನ್ ಕಲೆಹಾಕಿದ್ದಾರೆ. ಈ ಶತಕದೊಂದಿಗೆ ಸ್ಮೃತಿ ಮಂಧಾನ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ…

ಸೆಂಚುರಿ ಸರದಾರಿಣಿ: ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ ಶತಕ ಬಾರಿಸಿದ ಏಕೈಕ ಮಹಿಳಾ ಬ್ಯಾಟರ್ ಎಂಬ ದಾಖಲೆಯನ್ನು ಸ್ಮೃತಿ ನಿರ್ಮಿಸಿದ್ದಾರೆ. ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಭಾರತದ ಪರ ಯಾವುದೇ ಮಹಿಳಾ ಬ್ಯಾಟರ್ ಮೂರೂ ಸ್ವರೂಪಗಳಲ್ಲಿ ಸೆಂಚುರಿ ಬಾರಿಸಿಲ್ಲ.

ಭರ್ಜರಿ ಸೆಂಚುರಿ: ಟೀಮ್ ಇಂಡಿಯಾ ಪರ ಮಹಿಳಾ ಕ್ರಿಕೆಟ್ನಲ್ಲಿ ಟಿ20 ಶತಕ ಸಿಡಿಸಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಹರ್ಮನ್ಪ್ರೀತ್ ಕೌರ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು.

ಗರಿಷ್ಠ ಸ್ಕೋರ್: ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಗರಿಷ್ಠ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಹರ್ಮನ್ಪ್ರೀತ್ ಕೌರ್ ಹೆಸರಿನಲ್ಲಿತ್ತು. 2018 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಹರ್ಮನ್ಪ್ರೀತ್ 103 ರನ್ ಬಾರಿಸಿದ್ದರು. ಇದೀಗ 112 ರನ್ಗಳೊಂದಿಗೆ ಸ್ಮೃತಿ ಮಂಧಾನ ಈ ದಾಖಲೆ ಮುರಿದಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!