ಮಾರ್ಚ್ ನಿಂದ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ ಶಿವಣ್ಣ..!

ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಭಾರತಕ್ಕೆ ಮರಳಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆ. ಅವರು ಬೆಂಗಳೂರಿನಿಂದ ಹೊರಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಮತ್ತು ಮಾರ್ಚ್ನಿಂದ ಚಲನಚಿತ್ರ ಕೆಲಸಗಳನ್ನು ಪ್ರಾರಂಭಿಸಲಿದ್ದಾರೆ. ಶಿವರಾಜ್ ಕುಮಾರ್ ಅವರು ’45’ ಚಿತ್ರದ ಪ್ರಚಾರದಲ್ಲೂ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ.
ನಟ ಶಿವರಾಜ್ಕುಮಾರ್ ಅವರು ಜನವರಿ 26ಕ್ಕೆ ಅಮೆರಿಕದಿಂದ ಭಾರತಕ್ಕೆ ಮರಳಿದರು. ಅವರು ಬರುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದರು. ಈಗ ಅವರು ಸಂಪೂರ್ಣ ಕ್ಯಾನ್ಸರ್ ಮುಕ್ತ ಆಗಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗ ಶಿವರಾಜ್ಕುಮಾರ್ ಅವರು ಬೆಂಗಳೂರಿನಲ್ಲಿ ಇಲ್ಲ! ಹೌದು, ಅವರು ಶಿರಸಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ನಿಂದ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇತ್ತೀಚೆಗೆ ಶಿವರಾಜ್ಕುಮಾರ್ ಅವರು ಯಾಣಕ್ಕೆ ತೆರಳಿದ್ದರು. ‘ನಮ್ಮೂರ ಮಂದಾರ ಹೂವೆ’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಶಿವಣ್ಣ ಅಲ್ಲಿಗೆ ತೆರಳಿದ್ದರು. ಇದಾದ 29 ವರ್ಷಗಳ ಬಳಿಕ ಅವರು ಮತ್ತೆ ಈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಈಗ ಶಿವರಾಜ್ಕುಮಾರ್ ತಮ್ಮ ಸಂಬಂಧಿ, ಶಾಸಕ ಭೀಮಣ್ಣ ಒಡೆತನದಲ್ಲಿ ಇರುವ ಶಿರಸಿಯ ಹೋಟೆಲ್ನಲ್ಲಿ ಉಳಿದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇದ್ದರೆ ಒಬ್ಬರಾದ ಬಳಿಕ ಒಬ್ಬರು ಅವರ ಮನೆಗೆ ಭೇಟಿ ನೀಡುತ್ತಾ ಇರುತ್ತಾರೆ. ಹೀಗಾಗಿ, ವಿಶ್ರಾಂತಿ ಪಡೆಯಲು ಆಗೋದಿಲ್ಲ. ಈ ಕಾರಣಕ್ಕೆ ಅವರು ಶಿರಸಿಗೆ ಶಿಫ್ಟ್ ಆಗಿದ್ದಾರೆ. ಇಲ್ಲಿ ಅವರು ಗೀತಾ ಜೊತೆ ಉಳಿದುಕೊಂಡಿದ್ದಾರೆ. ಅವರು ಭೇಟಿ ಮಾಡಲು ಯಾರಿಗೂ ಅವಕಾಶ ಇಲ್ಲ.
‘45’ ಸಿನಿಮಾ
ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ. ಈ ಚಿತ್ರವ ಈ ವರ್ಷವೇ ತೆರೆಗೆ ಬರಲಿದೆ. ಇದರ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಲಿದ್ದಾರೆ.

ಪೈನಾನ್ಸ್ ಕಂಪನಿಯವ್ರು ರೌಡಿಗಳನ್ನ ಬಿಟ್ಟು ವಸೂಲಿ ಮಾಡಬಾರದ್!

ಸಿನಿಮಾ ಕೆಲಸ
ಶಿವರಾಜ್ಕುಮಾರ್ ಅವರು ಸಿನಿಮಾ ಕೆಲಸ ಆರಂಭಿಸೋದು ಯಾವಾಗ ಎಂಬುದನ್ನು ‘ಬಿ. ಗಣಪತಿ’ ಅವರ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ‘ಮಾರ್ಚ್ ತಿಂಗಳಿಂದ ಸಿನಿಮಾ ಕೆಲಸ ಆರಂಭಿಸುತ್ತೇನೆ. ರಾಮ್ ಚರಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ತಮಿಳಿನ ನಿರ್ದೇಶಕನೋರ್ವ ಚಿತ್ರ ಮಾಡುತ್ತಿದ್ದು ಅವರ ಜೊತೆ ಮಾಡುತ್ತಿದ್ದೇನೆ. ಸದ್ಯ ಇದೆರಡು ಸಿನಿಮಾಗಳು ಇವೆ’ ಎಂದು ಅವರು ಹೇಳಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್