ಮಾರ್ಚ್ ನಿಂದ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ ಶಿವಣ್ಣ..!

ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಭಾರತಕ್ಕೆ ಮರಳಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆ. ಅವರು ಬೆಂಗಳೂರಿನಿಂದ ಹೊರಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಮತ್ತು ಮಾರ್ಚ್ನಿಂದ ಚಲನಚಿತ್ರ ಕೆಲಸಗಳನ್ನು ಪ್ರಾರಂಭಿಸಲಿದ್ದಾರೆ. ಶಿವರಾಜ್ ಕುಮಾರ್ ಅವರು ’45’ ಚಿತ್ರದ ಪ್ರಚಾರದಲ್ಲೂ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ.
ನಟ ಶಿವರಾಜ್ಕುಮಾರ್ ಅವರು ಜನವರಿ 26ಕ್ಕೆ ಅಮೆರಿಕದಿಂದ ಭಾರತಕ್ಕೆ ಮರಳಿದರು. ಅವರು ಬರುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದರು. ಈಗ ಅವರು ಸಂಪೂರ್ಣ ಕ್ಯಾನ್ಸರ್ ಮುಕ್ತ ಆಗಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗ ಶಿವರಾಜ್ಕುಮಾರ್ ಅವರು ಬೆಂಗಳೂರಿನಲ್ಲಿ ಇಲ್ಲ! ಹೌದು, ಅವರು ಶಿರಸಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ನಿಂದ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇತ್ತೀಚೆಗೆ ಶಿವರಾಜ್ಕುಮಾರ್ ಅವರು ಯಾಣಕ್ಕೆ ತೆರಳಿದ್ದರು. ‘ನಮ್ಮೂರ ಮಂದಾರ ಹೂವೆ’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಶಿವಣ್ಣ ಅಲ್ಲಿಗೆ ತೆರಳಿದ್ದರು. ಇದಾದ 29 ವರ್ಷಗಳ ಬಳಿಕ ಅವರು ಮತ್ತೆ ಈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಈಗ ಶಿವರಾಜ್ಕುಮಾರ್ ತಮ್ಮ ಸಂಬಂಧಿ, ಶಾಸಕ ಭೀಮಣ್ಣ ಒಡೆತನದಲ್ಲಿ ಇರುವ ಶಿರಸಿಯ ಹೋಟೆಲ್ನಲ್ಲಿ ಉಳಿದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇದ್ದರೆ ಒಬ್ಬರಾದ ಬಳಿಕ ಒಬ್ಬರು ಅವರ ಮನೆಗೆ ಭೇಟಿ ನೀಡುತ್ತಾ ಇರುತ್ತಾರೆ. ಹೀಗಾಗಿ, ವಿಶ್ರಾಂತಿ ಪಡೆಯಲು ಆಗೋದಿಲ್ಲ. ಈ ಕಾರಣಕ್ಕೆ ಅವರು ಶಿರಸಿಗೆ ಶಿಫ್ಟ್ ಆಗಿದ್ದಾರೆ. ಇಲ್ಲಿ ಅವರು ಗೀತಾ ಜೊತೆ ಉಳಿದುಕೊಂಡಿದ್ದಾರೆ. ಅವರು ಭೇಟಿ ಮಾಡಲು ಯಾರಿಗೂ ಅವಕಾಶ ಇಲ್ಲ.
‘45’ ಸಿನಿಮಾ
ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ. ಈ ಚಿತ್ರವ ಈ ವರ್ಷವೇ ತೆರೆಗೆ ಬರಲಿದೆ. ಇದರ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಲಿದ್ದಾರೆ.

ಪೈನಾನ್ಸ್ ಕಂಪನಿಯವ್ರು ರೌಡಿಗಳನ್ನ ಬಿಟ್ಟು ವಸೂಲಿ ಮಾಡಬಾರದ್!

ಸಿನಿಮಾ ಕೆಲಸ
ಶಿವರಾಜ್ಕುಮಾರ್ ಅವರು ಸಿನಿಮಾ ಕೆಲಸ ಆರಂಭಿಸೋದು ಯಾವಾಗ ಎಂಬುದನ್ನು ‘ಬಿ. ಗಣಪತಿ’ ಅವರ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ‘ಮಾರ್ಚ್ ತಿಂಗಳಿಂದ ಸಿನಿಮಾ ಕೆಲಸ ಆರಂಭಿಸುತ್ತೇನೆ. ರಾಮ್ ಚರಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ತಮಿಳಿನ ನಿರ್ದೇಶಕನೋರ್ವ ಚಿತ್ರ ಮಾಡುತ್ತಿದ್ದು ಅವರ ಜೊತೆ ಮಾಡುತ್ತಿದ್ದೇನೆ. ಸದ್ಯ ಇದೆರಡು ಸಿನಿಮಾಗಳು ಇವೆ’ ಎಂದು ಅವರು ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!