ಮುಂಗಾರು ಮಳೆಗೆ ಮೈತುಂಬಿ ಹರಿಯುತ್ತಿವೆ ಕೊಡಗಿನ ಜಲಪಾತಗಳು….

ಕೊಡಗು ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ಅತಿ ಬೇಗ ಆರಂಭವಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಪ್ರವಾಸಿಗರು ಈ ಅದ್ಭುತ ನೈಸರ್ಗಿಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಧಾವಿಸುತ್ತಿದ್ದಾರೆ. ಆದರೆ, ದುಬಾರೆಯಲ್ಲಿ ನದಿ ದಾಟಲು ನಿರ್ಬಂಧ ಹೇರಲಾಗಿದೆ. ಮಳೆಯಿಂದಾಗಿ ಕೆಲವು ಅನಾನುಕೂಲಗಳೂ ಇವೆ. ಆದರೂ, ಪ್ರವಾಸಿಗರು ಸಂತೋಷದಿಂದ ಕೊಡಗಿನ ಸೌಂದರ್ಯವನ್ನು ಆಸ್ವಾದಿಸುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಳೆದ 15-20 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿತ್ತು. ಇದರಿಂದ ಅವಾಂತರಗಳು ಸೃಷ್ಟಿಯಾಗಿದ್ದವು. ಈ ನಡುವೆಯೇ ನಿರಂತರ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರು ಜಲಪಾತಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಹಾಗಿದ್ದರೆ ಯಾವೆಲ್ಲ ಜಲಪಾತಗಳು ಧುಮ್ಮುಕ್ಕುತ್ತಿವೆ? ಇಲ್ಲಿದೆ ವಿವರ. ಇನ್ನು ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ಮುನ್ನ ಸರ್ಕಾರದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ. ರಾಜ್ಯಾದ್ಯಂತ ಸುರಿಯುತ್ತಿರುವ ಮುಂಗಾರು ಮಳೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಈ ಮಳೆ ಬಹಳಷ್ಟು ಜನರಿಗೆ ಸಂಕಷ್ಟಗಳನ್ನು ತಂದೊಡ್ಡಿದೆ. ಹಾಗೇ, ಮಳೆಯಿಂದ ಸಾಕಷ್ಟು ಅನುಕೂಲವೂ ಆಗಿದೆ. ಮಳೆಗಾಲ ಆರಂಭವಾಗಿದ್ದರಿಂದ ಪ್ರವಾಸಿ ಜಿಲ್ಲೆ ಕೊಡಗಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ತೆರಳುತ್ತಿದ್ದಾರೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.ಕೊಡಗು ಜಿಲ್ಲೆಯ ಪ್ರಸಿದ್ಧ ಅಬ್ಬಿ ಜಲಪಾತ ಧುಮ್ಮುಕ್ಕುತ್ತಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ಕೊಡಗಿನ ಯಾವುದೇ ಜಲಪಾತಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನೀರು ಇರಲ್ಲ. ಆದರೆ, ಈ ವರ್ಷ ಮುಂಗಾರು ಬೇಗನೆ ಆರಂಭವಾಗಿರುವುದರಿಂದ ಅಬ್ಬಿ ಜಲಪಾತ ಮೈದುಂಬಿ ಹರಿಯುತ್ತಿದೆ.

ಇದು ಪ್ರವಾಸಿಗರಿಗೆ ಇನ್ನಿಲ್ಲದ ಖುಷಿ ನೀಡಿದೆ. ಮಡಿಕೇರಿ ನಗರದ ವೀವ್ ಪಾಯಿಂಟ್ ರಾಜಸೀಟ್ನಲ್ಲೂ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಜಿಜಟಿಪಿಟಿ ಮಳೆಯ ಮಧ್ಯೆಯೂ ಪ್ರವಾಸಿಗರು ರಾಜಾಸೀಟ್ನತ್ತ ಆಗಮಿಸುತ್ತಿದ್ದಾರೆ. ಆಗ್ಗಾಗೆ ಮಳೆ-ಬಿಸಿಲು ಬರುತ್ತಿರುವುದರಿಂದ ಜನರು ಕೊಡೆ, ರೈನ್ ಕೋಟ್ ಧರಿಸಿಕೊಂಡು ಆಗಮಿಸುತ್ತಿದ್ದಾರೆ. ಇನ್ನು, ದುಬಾರೆಯಲ್ಲಿ ನದಿ ದಾಟಲು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ನದಿ ದಾಟಿ ಆನೆಗಳನ್ನು ನೋಡುವ ಆಸೆ ಕಮರಿ ಹೋಗಿದೆ. ಮಳೆಯ ಅಬ್ಬರದಿಂದ ಜಿಲ್ಲೆಯ ಮಲ್ಲಳ್ಳಿ, ಅಬ್ಬಿ, ಇರ್ಪು, ಚೇಲಾವರ ಜಲಪಾತಗಳು ಧುಮ್ಮುಕ್ಕುತ್ತಿವೆ. ಸಾಮಾನ್ಯವಾಗಿ ಜುಲೈ ಆಗಸ್ಟ್ ತಿಂಗಳಲ್ಲಿ ಸಿಗುವ ಮಳೆಗಾಲದ ಅನುಭವ ಈ ಬಾರಿ ಪ್ರವಾಸಿಗರಿಗೆ ಮೇ ತಿಂಗಳಲ್ಲೇ ಸಿಗುತ್ತಿದೆ. ಹೀಗಾಗಿ ಜಿಲ್ಲೆಗೆ ಆಗಮಿಸಿರುವ ಪ್ರವಾಸಿಗರು ಖುಷಿಯಿಂದಲೇ ಒಳ್ಳೆಯ ಅನುಭವ ಪಡೆದು ಹಿಂದಿರುಗುತ್ತಿದ್ದಾರೆ.

 

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು