ಮುದ್ದಾದ ಅವಳಿ ಮಕ್ಕಳ ಜೀವ ತೆಗೆದ ತಾಯಿ., ರಾಜಸ್ಥಾನದಲ್ಲಿ ಹೃದಯ ವಿದ್ರಾವಕ ಘಟನೆ.

ರಾಜಸ್ಥಾನದ ಸಿರೋಹಿ ಜಿಲ್ಲೆಯಿಂದ ಹೃದಯ ವಿದ್ರಾವಕ ಸುದ್ದಿ ಹೊರಬಿದ್ದಿದೆ. ಹಡೆದ ತಾಯಿ ಒಬ್ಬಳು ಪೈಶಾಚಿಕ ಕೃತ್ಯ ನಡೆಸಿದ್ದು, ಮುದ್ದಾದ ಅವಳಿ ಮಕ್ಕಳಿಗೆ ಮದ್ದು ನೀಡಿದ್ದಾಳೆ. ಬಳಿಕ ತನ್ನ ಬದುಕಿಗೂ ಫುಲ್ಸ್ಟಾಪ್ ಇಟ್ಟಿದ್ದಾಳೆ.
ಸಿರೋಹಿ ಜಿಲ್ಲೆಯ ಶಿವಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶಿವಗಂಜ್ ಪ್ರದೇಶದಲ್ಲಿ ಕ್ರೂರಿ ತಾಯಿ ರೇಖಾ ವಾಸವಿದ್ದಳು. ಈಕೆಗೆ ಅವಳಿ ಗಂಡುಮಕ್ಕಳು ಜನಿಸಿದ್ದರು. ಮಕ್ಕಳಿಗೆ ಕೇವಲ 1.25 ವರ್ಷವಾಗಿತ್ತು. ವಾಸ್ತವಾಗಿ ಈಕೆಗೆ ಅವಳಿ ಮಕ್ಕಳು ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಹಾಲಲ್ಲಿ ವಿಷ ಹಾಕಿ ಮಕ್ಕಳ ಕತೆ ಮುಗಿಸಿದ್ದಾಳೆ ಎಂದು ತಿಳಿಸಿದ್ದಾರೆ.

ಆರೋಪಿ ರೇಖಾಗೆ ಗಂಡ ಇದ್ದಾನೆ. ಆತನ ಹೆಸರು ಯೋಗೇಶ್. ತನ್ನ ಅವಳಿ ಮಕ್ಕಳಿಗೆ ಪೂರ್ವಾಂಶ್ ಮತ್ತು ಪೂರ್ವಿತ್ ಎಂದು ಹೆಸರಿಟ್ಟಿದ್ದಳು. ಬುಧವಾರ ಮಧ್ಯಾಹ್ನ ರೇಖಾ ಇಬ್ಬರು ಪುತ್ರರಿಗೆ ವಿಷ ಕೊಟ್ಟಿದ್ದಾಳೆ. ಜೊತೆಗೆ ತಾನೂ ವಿಷ ಸೇವಿಸಿದ್ದಾಳೆ.
ವಿಷ ಸೇವನೆ ಬಳಿಕ ರೇಖಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಗೆ ಆಗಮಿಸಿದ್ದ ಪೊಲೀಸರು ಆಕೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆಯೂ ಇದೀಗ ಬದುಕಿನ ಜರ್ನಿ ಮುಗಿಸಿದ್ದಾಳೆ. ಮಕ್ಕಳು, ಪತ್ನಿಯನ್ನು ಕಳೆದುಕೊಂಡ ಯೋಗೇಶ್ ಕಂಗಾಲಾಗಿದ್ದಾನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!