ಮೆಹೆಂದಿ ಗರ್ಭಿಣಿಯರಿಗೆ ಹಾನಿಕಾರಕವೇ? ಇಲ್ಲಿದೆ ವೈದ್ಯರು ನೀಡಿರುವ ಮಾಹಿತಿ.

ಮಹಿಳೆಯರು ಹಬ್ಬ, ಮದುವೆ ಹೀಗೆ ಯಾವುದೇ ರೀತಿಯ ಆಚರಣೆ ಮೆಹೆಂದಿ ಹಚ್ಚಿಕೊಳ್ಳುತ್ತಾರೆ. ಇದೊಂದು ರೀತಿಯ ಹೆಣ್ಣು ಮಕ್ಕಳ ಅಂದ ಹೆಚ್ಚಿಸುವ ಅಲಂಕಾರಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಆದರೆ ಇದು ಕೇವಲ ಕೈಗಳ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲ ಅದರ ಹೊರತಾಗಿ, ಇದು ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ಆದರೆ ಕೆಲವು ಕಡೆಗಳಲ್ಲಿ ಗರ್ಭಿಣಿಯರು ಮೆಹಂದಿಯನ್ನು ಹಚ್ಚಿಕೊಳ್ಳಬಾರದು ಎನ್ನುತ್ತಾರೆ ಇದು ನಿಜವೇ? ಮೆಹೆಂದಿ ಗರ್ಭಿಣಿಯರಿಗೆ ಹಾನಿಕಾರಕವೇ? ಗರ್ಭಾವಸ್ಥೆಯಲ್ಲಿ ಕೆಲವು ಮಹಿಳೆಯರು ಗೋರಂಟಿ ಹಚ್ಚಲು ಹೆದರಲು ಕಾರಣವೇನು? ಇಲ್ಲಿದೆ ವೈದ್ಯರು ನೀಡಿರುವ ಮಾಹಿತಿ

ಸಾಮಾನ್ಯವಾಗಿ ನಮ್ಮಲ್ಲಿ ಎಲ್ಲಾ ರೀತಿಯ ಶುಭ ಕಾರ್ಯಕ್ರಮಗಳಲ್ಲಿಯೂ ಮೆಹೆಂದಿ ಅಥವಾ ಗೋರಂಟಿ ಹಾಕಿಕೊಳ್ಳುವುದು ವಾಡಿಕೆ. ಮಹಿಳೆಯರು ಹಬ್ಬ, ಮದುವೆ ಹೀಗೆ ಯಾವುದೇ ರೀತಿಯ ಆಚರಣೆ ಇರಲಿ ಇದನ್ನು ಹಚ್ಚಿಕೊಳ್ಳುತ್ತಾರೆ. ಇದೊಂದು ರೀತಿಯ ಹೆಣ್ಣು ಮಕ್ಕಳ ಅಂದ ಹೆಚ್ಚಿಸುವ ಅಲಂಕಾರಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಆದರೆ ಇದು ಕೇವಲ ಕೈಗಳ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲ ಅದರ ಹೊರತಾಗಿ, ಇದು ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ ಎಂಬ ನಂಬಿಕೆ ಇದೆ.
ಇತ್ತೀಚೆಗೆ, ಇನ್ಸ್ಟಾ ಗಳಲ್ಲಿ ಬಹಳ ಕಳವಳಕಾರಿ ಹೇಳಿಕೆಗಳು ಬಿತ್ತರಿಸಲಾರಂಭಿಸಿದ್ದವು. ಅದೇನೆಂದರೆ, ಗರ್ಭಾವಸ್ಥೆಯಲ್ಲಿ ಮೆಹೆಂದಿ ಅಥವಾ ಗೋರಂಟಿ ಹಚ್ಚುವುದರಿಂದ ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಯಿತು. ಕೆಲವರು ಫೋಟೋ ಗಳಿಗಾಗಿ ತಮ್ಮ ಹೊಟ್ಟೆಯ ಮೇಲೆ ಮೆಹೆಂದಿ ಹಾಕಿಕೊಳ್ಳುತ್ತಿದ್ದು ಇದು ಕೂಡ ಈ ರೀತಿಯ ಸುದ್ದಿ ಹಬ್ಬಲು ಕಾರಣವಾಗಿರಬಹುದು. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಪ್ರಶ್ನೆಗಳು ಹುಟ್ಟಿಕೊಂಡಿತ್ತು. ಇದನ್ನು ನಂಬಿದ ಹಲವು ಮಹಿಳೆಯರು ಗರ್ಭಾವಸ್ಥೆಯಲ್ಲಿ ಗೋರಂಟಿ ಹಚ್ಚುವುದು ನಿಜವಾಗಿಯೂ ಮಗುವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಿದರು. ಹಾಗಾದರೆ ಇದರಲ್ಲಿ ಎಷ್ಟು ಸತ್ಯವಿದೆ?

ಈ ಬಗ್ಗೆ ವೈದ್ಯರು ಹೇಳುವುದೇನು?
ಆರೋಗ್ಯ ತಜ್ಞರು ಮತ್ತು ಸ್ತ್ರೀರೋಗ ತಜ್ಞರು ನೀಡಿರುವ ಮಾಹಿತಿಯ ಪ್ರಕಾರ ಈ ವಿಷಯ ಸತ್ಯವಲ್ಲ. ಇದಕ್ಕೆ ಯಾವುದೇ ರೀತಿಯ ವೈಜ್ಞಾನಿಕ ಆಧಾರವಿಲ್ಲ. ಗೋರಂಟಿ ನೈಸರ್ಗಿಕ ಬಣ್ಣ. ಇದು ಚರ್ಮದ ಹೊರ ಪದರವನ್ನು ಮಾತ್ರ ರಂಗೆರಿಸುತ್ತವೆ ಇದು ದೇಹದ ಒಳಗೆ ಹೋಗುವುದಿಲ್ಲ ಆದ್ದರಿಂದ ಮಗುವಿನ ಚರ್ಮದ ಮೇಲೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಅಥವಾ ಬೆಳವಣಿಗೆಯ ಮೇಲೆ ಪರಿಣಾಮ ಬೀರುವುದಿಲ್ಲ. ಅದರಲ್ಲಿಯೂ ಮಗುವಿನ ಚರ್ಮದ ಬಣ್ಣವು ಆನುವಂಶಿಕ ಅಂಶ ಮತ್ತು ಮೆಲನಿನ್ ಉತ್ಪಾದನೆಯಿಂದ ನಿರ್ಧರಿಸಲ್ಪಡುತ್ತದೆಯೇ ಹೊರತು ತಾಯಿಯ ಚರ್ಮಕ್ಕೆ ಅನ್ವಯಿಸುವ ಯಾವುದರಿಂದಲೂ ಅಲ್ಲ ಎಂದಿದ್ದಾರೆ. ಆದರೆ ಗರ್ಭಾವಸ್ಥೆಯಲ್ಲಿ, ಮಹಿಳೆಯರು ಪ್ಯಾರಾ- ಫಿನೈಲೆನಾಡಿಯಮೈನ್ (ಪಿಪಿಡಿ) ನಂತಹ ರಾಸಾಯನಿಕ ಅಂಶವಿರುವ ಗೋರಂಟಿಯನ್ನು ಅನ್ವಯಿಸದಂತೆ ಎಚ್ಚರಿಕೆ ವಹಿಸಬೇಕು. ಕೃತಕ ಗೋರಂಟಿ ಹಚ್ಚುವುದನ್ನು ತಪ್ಪಿಸಿ. ಯಾವಾಗಲೂ ನೈಸರ್ಗಿಕ ಗೋರಂಟಿ ಬಳಸುವುದು ಬಹಳ ಒಳ್ಳೆಯದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!